AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿ ವಿಚಾರಕ್ಕೆ ಕಿರಿಕ್, ಬೆಂಗಳೂರಿನ ವ್ಯಕ್ತಿಯ ಮೇಲೆ ಬಂದೂಕಿನಿಂದ ಗುಂಡು ಹಾರಿಸಿದ ಯುವಕ!

ಪ್ರದೀಪ್ ಎಂಬುವವರ ನಾಯಿಗೆ ಕಾರು ಗುದ್ದಿದ್ದೇ ಇದಕ್ಕೆ ಹೇತುವಾಗಿದೆ. ಬೆಂಗಳೂರು ಮೂಲದ ವ್ಯಕ್ತಿ ಕಾರಿನಲ್ಲಿ ಹೋಗುತ್ತಿದ್ದಾಗ ನಾಯಿಗೆ ಡಿಕ್ಕಿ ಹೊಡೆಸಿದ್ದಾನೆ. ಈ ವಿಚಾರವಾಗಿ ಬೆಂಗಳೂರು ಮೂಲದ ವ್ಯಕ್ತಿಗೆ ಪ್ರದೀಪ್ ಸಿಡಿಗುಂಡಿನಂತೆ ಆವಾಜ್ ಹಾಕಿದ್ದಾನೆ.

ನಾಯಿ ವಿಚಾರಕ್ಕೆ ಕಿರಿಕ್, ಬೆಂಗಳೂರಿನ ವ್ಯಕ್ತಿಯ ಮೇಲೆ ಬಂದೂಕಿನಿಂದ ಗುಂಡು ಹಾರಿಸಿದ ಯುವಕ!
ನಾಯಿ ವಿಚಾರಕ್ಕೆ ಕಿರಿಕ್, ಬೆಂಗಳೂರಿನ ವ್ಯಕ್ತಿಯ ಮೇಲೆ ಬಂದೂಕಿನಿಂದ ಗುಂಡು ಹಾರಿಸಿದ ಯುವಕ!
TV9 Web
| Updated By: ಸಾಧು ಶ್ರೀನಾಥ್​|

Updated on:Dec 08, 2021 | 1:26 PM

Share

ರಾಮನಗರ: ನಾಯಿಯ ವಿಚಾರಕ್ಕೆ ಕಿರಿಕ್ ಮಾಡಿಕೊಂಡ ಬಿಸಿರಕ್ತದ ಯುವಕನೊಬ್ಬ ನೇರವಾಗಿ ವ್ಯಕ್ತಿಯೊಬ್ಬರ ಮೇಲೆ ಬಂದೂಕಿನಿಂದ ಗುಂಡು ಹಾರಿಸಿದ್ದಾನೆ. ಅದೃಷ್ಟವಷಾತ್ ಸ್ವಲ್ಪದರಲ್ಲೇ ಆ ವ್ಯಕ್ತಿ ಗುಂಡಿನ ದಾಳಿಯಿಂದ ಪಾರಾಗಿದ್ದಾರೆ! ಇದು ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕಪನಿಗೌಡನದೊಡ್ಡಿ ಗ್ರಾಮದಲ್ಲಿ ನಡೆದಿರುವ ಘಟನೆ. ಪ್ರದೀಪ್ ಎಂಬ ವ್ಯಕ್ತಿಯ ಮೇಲೆ ಗ್ರಾಮದ ಕಾರ್ತಿಕ್(24) ಎಂಬ ಯುವಕನಿಂದ ಈ ಕುಕೃತ್ಯ ನಡೆದಿದೆ.

ಪ್ರದೀಪ್ ಎಂಬುವವರ ನಾಯಿಗೆ ಕಾರು ಗುದ್ದಿದ್ದೇ ಇದಕ್ಕೆ ಹೇತುವಾಗಿದೆ. ಬೆಂಗಳೂರು ಮೂಲದ ವ್ಯಕ್ತಿ ಕಾರಿನಲ್ಲಿ ಹೋಗುತ್ತಿದ್ದಾಗ ನಾಯಿಗೆ ಡಿಕ್ಕಿ ಹೊಡೆಸಿದ್ದಾನೆ. ಈ ವಿಚಾರವಾಗಿ ಬೆಂಗಳೂರು ಮೂಲದ ವ್ಯಕ್ತಿಗೆ ಪ್ರದೀಪ್ ಸಿಡಿಗುಂಡಿನಂತೆ ಆವಾಜ್ ಹಾಕಿದ್ದಾನೆ. ಆಕ್ರಮವಾಗಿ ಖರೀದಿಸಿದ ಬಂದೂಕಿನಿಂದ ಕಾರ್ತಿಕ್ ಗುಂಡು ಹಾರಿಸಿದ್ದಾನೆ. ಕಾರ್ಯಾಚರಣೆಗೆ ಇಳಿದ ಸಾತನೂರು ಠಾಣೆ ಪೊಲೀಸರು ತಕ್ಷಣ ಕಾರ್ತಿಕ್​ನನ್ನು ಬಂಧನಕ್ಕೊಳಪಡಿಸಿದ್ದಾರೆ. ಆತನ ಬಳಿಯಿದ್ದ ಆಕ್ರಮ ಬಂದೂಕನ್ನೂ ವಶಪಡಿಸಿಕೊಂಡಿದ್ದಾರೆ. ಕಾರ್ತಿಕ್ ಜೊತೆ ಇದ್ದ ಮತ್ತೊಬ್ಬ ಪರಮೇಶ್ ಎಂಬಾತ ಸದ್ಯಕ್ಕೆ ಪರಾರಿಯಾಗಿದ್ದಾನೆ.

ಮಂಗಳೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು ಮಂಗಳೂರು: ಮಂಗಳೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಂಗಳೂರಿನ ಮಾರ್ಗನ್ಸ್ ರಸ್ತೆಯಲ್ಲಿ ಈ ದುರ್ಘಟ‌ನೆ ನಡೆದಿದ್ದು ಗಂಡ, ಹೆಂಡತಿ ಮತ್ತು ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿದೆ. ಮಂಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರಿನ ಮಾರ್ಗನ್ಸ್ ರಸ್ತೆಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್​ ಸಿಕ್ಕಿದೆ. ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಮತಾಂತರ ಕಾರಣ ಎನ್ನಲಾಗಿದೆ. ಈ ಕುರಿತು ಖುದ್ದು ಮನೆಯ ಯಜಮಾನ ಡೆತ್ ನೋಟ್ ಬರೆದಿಟ್ಟು, ವಿಷಯವನ್ನು (religion conversion) ಪ್ರಸ್ತಾಪಿಸಿದ್ದಾರೆ. ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣದಲ್ಲಿ ನಾಲ್ವರ ಸಾವಿಗೆ ಮತಾಂತರ ಕಾರಣವೆಂದು ಮನೆ ಯಜಮಾನ, ಮೃತ ನಾಗೇಶ್ ಉಲ್ಲೇಖಿಸಿದ್ದಾರೆ. ಮಹಿಳೆಯ ಹೆಸರನ್ನು ಉಲ್ಲೇಖಿಸಿ, ಆಕೆಯೇ ನಮ್ಮ ಸಾವಿಗೆ ಕಾರಣ. ನನ್ನ ಪತ್ನಿಯನ್ನು ತನ್ನ ಧರ್ಮಕ್ಕೆ ಮತಾಂತರ ಮಾಡಿದ್ದಳು. ಹೀಗಾಗಿ ವಿಜಯಲಕ್ಷ್ಮಿ ಆಗಾಗ ಮನೆ ಬಿಟ್ಟು ಹೋಗುತ್ತಿದ್ದಳು. ಹೀಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಎಂದು ನಾಗೇಶ್​ ಡೆತ್ ನೋಟ್ (death note) ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್ ನೋಟ್ ಕಂಟೆಂಟ್ ಟಿವಿ9 ಗೆ ಲಭ್ಯವಾಗಿದೆ. ಇದೀಗ ಮಂಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕಾಲು ಜಾರಿ ಬಾವಿಯಲ್ಲಿ ಬಿದ್ದು ಯುವಕನ ಸಾವು ವಿಜಯಪುರ: ಯುವಕನೊಬ್ಬ ಕಾಲು ಜಾರಿ ಬಾವಿಯಲ್ಲಿ ಬಿದ್ದು ಸಾವಿಗೀಡಾಗಿದ್ದಾನೆ. ಕೊಲ್ಹಾರ ತಾಲೂಕಿನ ಮುತ್ತಗಿ ಗ್ರಾಮದ ಮಂಜುನಾಥ ಬಸಪ್ಪ ಪೂಜಾರಿ (24) ಮೃತ ದುರ್ದೈವಿ. ಮುತ್ತಗಿ ಬಳಿಯ ತೋಟದಲ್ಲಿ ಇಂದು ಬೆಳಗ್ಗೆ ಬಾವಿಯಿಂದ ಬೆಳೆಗಳಿಗೆ ನೀರು ಬಿಡಲು ತೆರಳಿದ್ದ ವೇಳೆ ಅವಘಡ ನಡೆದಿದೆ.

ನೇಣು ಬಿಗಿದುಕೊಂಡು ಪೊಲೀಸ್ ಕಾನ್ಸ್‌ಟೇಬಲ್ ಆತ್ಮಹತ್ಯೆ: ಉತ್ತರ ಕನ್ನಡ ಜಿಲ್ಲಾ ಕೇಂದ್ರವಾದ ಕಾರವಾರದಲ್ಲಿ ಡಿಆರ್ ಕಚೇರಿಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಗುರುಪ್ರಸಾದ್ ನಾಯ್ಕ್ (35) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳ ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ.

Published On - 11:21 am, Wed, 8 December 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ