AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohini Sindhuri vs D Roopa: ನಿಮ್ಮ ಗಲಾಟೆಯಲ್ಲಿ ನನ್ನ ಮಗನ ಹೆಸರು ಎಳೆದು ತರಬೇಡಿ: ಡಿ.ಕೆ.ರವಿ ತಾಯಿ ಗೌರಮ್ಮ

IAS vs IPS: IPS ಅಧಿಕಾರಿ ಡಿ ರೂಪಾ, IAS ಅಧಿಕಾರಿ ರೋಹಿಣಿ ಸಿಂಧೂರಿ ಅವರೇ ನಿಮ್ಮಿಬ್ಬರ ಜಗಳದ ನಡುವೆ ನನ್ನ ಮಗನ ಹೆಸರು ಎಳೆದು ತರಬೇಡಿ ಎಂದು ಡಿ.ಕೆ.ರವಿ ತಾಯಿ ಗೌರಮ್ಮ ಕಣ್ಣೀರಿಟ್ಟಿದ್ದಾರೆ.

TV9 Web
| Updated By: ವಿವೇಕ ಬಿರಾದಾರ|

Updated on:Feb 20, 2023 | 12:18 PM

Share

ರಾಮನಗರ: IPS ಅಧಿಕಾರಿ ಡಿ ರೂಪಾ (D Roopa), IAS ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ನಡುವೆ ಆರೋಪ-ಪ್ರತ್ಯಾರೋಪ ತಾರಕಕ್ಕೇರಿದೆ. ಇವರ ಇಬ್ಬರ ಜಗಳದಲ್ಲಿ ದಿವಂಗತ ಐಎಎಸ್​​ ಅಧಿಕಾರಿ ಡಿ.ಕೆ ರವಿ (DK Ravi) ಅವರ ಹೆಸರು ಎಳೆದು ತಂದಿದ್ದು, ಈ ವಿಚಾರವಾಗಿ ಡಿ.ಕೆ.ರವಿ ತಾಯಿ ಗೌರಮ್ಮ ನಿಮ್ಮ ಗಲಾಟೆ ವಿಚಾರದಲ್ಲಿ ನನ್ನ ಮಗನ ಹೆಸರು ಎಳೆದು ತರಬೇಡಿ ಎಂದು ಹೇಳಿದ್ದಾರೆ.

ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಕದರಮಂಗಳ ಗ್ರಾಮದಲ್ಲಿ ಮಾಧ್ಯಮ ಪ್ರಿನಿಧಿಗಳೊಂದಿಗೆ ಮಾತನಾಡಿದ ಅವರು ನೀವಿಬ್ಬರೂ ಏನಾದರೂ ಕಿತ್ತಾಡಿ, ಆದರೆ ನನ್ನ ಮಗನ ಹೆಸರು ತರಬೇಡಿ ಟಿವಿ 9 ಎದುರು ಕಣ್ಣೀರಿಟ್ಟಿದ್ದಾರೆ.

8 ವರ್ಷವಾಯ್ತು ನನ್ನನ್ನು ನೋಡಲು ಯಾರೂ ಬಂದಿಲ್ಲ. ಡಿ.ಕೆ.ರವಿಯನ್ನು ನಾನು ಸಾಕಿ ಬೆಳೆಸಿದ್ದೇನೆ. ಡಿ.ಕೆ.ರವಿ ಜತೆ ಕುಸುಮಾ 5 ವರ್ಷ ಅಷ್ಟೆ ಸಂಸಾರ ಮಾಡಿದ್ದಾಳೆ. ನನ್ನ ಮಗ ಇರುವವರೆಗೂ ಮಾತ್ರ ಆಕೆ ಸೊಸೆ. ಹೀಗಾಗಿ ನೀವ್ಯಾರೂ ನನ್ನ ಮಗನ ಹೆಸರನ್ನು ತರಬೇಡಿ ಎಂದು ಮನವಿ ಮಾಡಿದ್ದಾರೆ.

ಡಿ ರೂಪಾಗೆ ರೋಹಿಣಿ ಸಿಂಧೂರಿ ಪತಿ ಪ್ರಶ್ನೆ

ರೂಪಾ ಅನ್ನೋರು ಯಾರು? ರೋಹಿಣಿ ಸಿಂಧೂರಿಗೆ ಯಾವುದೇ ಪ್ರಚಾರ ಬೇಡ. ಯಾವ್ಯಾವ ಅಧಿಕಾರಿಗಳಿಗೆ ಫೋಟೋ ಕಳುಹಿಸಿದ್ದಾರೆ ಮೊದಲು ಹೇಳಿ. ನಾನು ಹುಟ್ಟಿದ್ದು ಇಲ್ಲೇ, ನಾನು ಕನ್ನಡಿಗ. ಆಂಧ್ರಪ್ರದೇಶದಲ್ಲಿ ನಮ್ಮ ಸಂಬಂಧಿಕರು ಯಾರೂ ಇಲ್ಲ. ನಮ್ಮ ಕುಟುಂಬದ ಬಗ್ಗೆ ಅನಗತ್ಯವಾಗಿ ಮಾತನಾಡುವುದು ಸರಿಯಲ್ಲ. ರೋಹಿಣಿ ಸಿಂಧೂರಿ ಸಾಮಾಜಿಕ ಜಾಲತಾಣ ಬಳಕೆ ಮಾಡುತ್ತಿಲ್ಲ. ಫೋಟೋಗಳನ್ನು ಅವರು ಹ್ಯಾಕ್ ಮಾಡಿ ತೆಗೆದುಕೊಂಡಿರಬಹುದು. ರೋಹಿಣಿ ಸಿಂಧೂರಿ ಯಾರಿಗೆ ಫೋಟೋ ಕಳಿಸಿದ್ದಾರೆ ಹೆಸರು ಹೇಳಿ. ನನ್ನ ತಂದೆ ಕಾಲದಿಂದಲೂ ರಿಯಲ್ ಎಸ್ಟೇಟ್​​​ ಮಾಡುತ್ತಿದ್ದೇವೆ ಎಂದು ಐಪಿಎಸ್​ ಅಧಿಕಾರಿ ಡಿ.ರೂಪಾ ವಿರುದ್ಧ ಬೆಂಗಳೂರಿನಲ್ಲಿ ರೋಹಿಣಿ ಸಿಂಧೂರಿ ಪತಿ ಸುಧೀರ್​ ರೆಡ್ಡಿ ವಾಗ್ದಾಳಿ ಮಾಡಿದ್ದಾರೆ.

IPS ಅಧಿಕಾರಿ ರೂಪಾ ವಿರುದ್ಧ ಪೊಲೀಸರಿಗೆ ದೂರು ನೀಡುತ್ತೇನೆ

IPS ಅಧಿಕಾರಿ ರೂಪಾ ವಿರುದ್ಧ ಪೊಲೀಸರಿಗೆ ದೂರು ನೀಡುತ್ತೇನೆ. ಹೊಟ್ಟೆಕಿಚ್ಚಿನಿಂದ ಡಿ.ರೂಪಾ ಅವರು ಈ ರೀತಿ ಮಾಡುತ್ತಿದ್ದಾರೆ. ರೋಹಿಣಿ ಸಿಂಧೂರಿ ಒಳ್ಳೆಯ ಕೆಲಸ ಮಾಡಿ ಹೆಸರು ಮಾಡಿದ್ದಾರೆ. ಹಣಕಾಸು ವಿಚಾರದಲ್ಲಿ ನಾವು ಚೆನ್ನಾಗಿಯೇ ಇದ್ದೇವೆ. ಡಿ.ಕೆ.ರವಿ ಅವರ ವಿಚಾರವನ್ನು ಈಗ ಪ್ರಸ್ತಾಪಿಸುವುದು ಸರಿಯಲ್ಲ. ಹೋಗಿರುವವರ ಬಗ್ಗೆ ಏನನ್ನೂ ಮಾತನಾಡಬಾರದು. ಹೋಗಿರುವವರ ಬಗ್ಗೆ ಮಾತನಾಡುವ ಸಂಸ್ಕಾರ ರೂಪಾ ಅವರದ್ದು ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:07 pm, Mon, 20 February 23

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು