AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮ ಹೆಸರಿನ ಮತ್ತೋರ್ವ ವ್ಯಕ್ತಿ ಚುನಾವಣೆಗೆ ಸ್ಪರ್ಧೆ ಬಗ್ಗೆ ಡಾ ಸಿ.ಎನ್. ಮಂಜುನಾಥ್ ಹೇಳಿದ್ದಿಷ್ಟು

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಖ್ಯಾತ ವೈದ್ಯ, ಡಾ. ಸಿಎನ್ ಮಂಜುನಾಥ್(C. N. Manjunath)​ ಕಣಕ್ಕಿಳಿಯಲು ಸಿದ್ದರಾಗಿದ್ದಾರೆ. ಈ ಮಧ್ಯೆ ಅದೇ ಹೆಸರಿನವರಾದ ಮೂಲತಃ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಚೊಳೇನಹಳ್ಳಿ ಗ್ರಾಮದ ಡಾ.ಸಿ.ಎನ್ ಮಂಜುನಾಥ್ ಎಂಬುವವರು ಸ್ಪರ್ಧಿಸಲು ಸಜ್ಜಾಗಿದ್ದು, ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಮಾತನಾಡಿರುವ ವೈದ್ಯ, ಡಾ. ಸಿಎನ್ ಮಂಜುನಾಥ್, ‘ ನನ್ನ ಹೆಸರಿನ ಮತ್ತೊಬ್ಬ ಅಭ್ಯರ್ಥಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಆದರೆ, ಅವರೇನು ವೈದ್ಯರಲ್ಲ ಎಂದಿದ್ದಾರೆ.

ತಮ್ಮ ಹೆಸರಿನ ಮತ್ತೋರ್ವ ವ್ಯಕ್ತಿ ಚುನಾವಣೆಗೆ ಸ್ಪರ್ಧೆ ಬಗ್ಗೆ ಡಾ ಸಿ.ಎನ್. ಮಂಜುನಾಥ್ ಹೇಳಿದ್ದಿಷ್ಟು
ಸಿಎನ್​ ಮಂಜುನಾಥ್​
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Mar 29, 2024 | 5:45 PM

Share

ರಾಮನಗರ, ಮಾ.29: ಲೋಕಸಭೆ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಇದರ ಬೆನ್ನಲ್ಲೇ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಖ್ಯಾತ ವೈದ್ಯ, ಡಾ. ಸಿಎನ್ ಮಂಜುನಾಥ್(C. N. Manjunath)​ ಕಣಕ್ಕಿಳಿಯಲು ಸಿದ್ದರಾಗಿದ್ದಾರೆ. ಈ ಮಧ್ಯೆ ಅದೇ ಹೆಸರಿನವರಾದ ಮೂಲತಃ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಚೊಳೇನಹಳ್ಳಿ ಗ್ರಾಮದ ಡಾ.ಸಿ.ಎನ್. ಮಂಜುನಾಥ್ ಎಂಬುವವರು ಸ್ಪರ್ಧಿಸಲು ಸಜ್ಜಾಗಿದ್ದು, ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಮಾತನಾಡಿರುವ ವೈದ್ಯ, ಡಾ. ಸಿಎನ್ ಮಂಜುನಾಥ್, ‘ ನನ್ನ ಹೆಸರಿನ ಮತ್ತೊಬ್ಬ ಅಭ್ಯರ್ಥಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಆದರೆ, ಅವರೇನು ವೈದ್ಯರಲ್ಲ. ಇರಲಿ,‌ ನಾನು ಯಾರ ಬಗ್ಗೆಯೂ ವಿರೋಧವಾಗಿ ಮಾತನಾಡಲ್ಲ ಎಂದಿದ್ದಾರೆ.

ಇತರರ ಸ್ಪರ್ಧೆ ಬಗ್ಗೆ ಚಿಂತೆ ಬೇಡ

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೋಡಂಬಳ್ಳಿಯಲ್ಲಿ ಮಾತನಾಡಿ ‘ನಾನು ಬಿಜೆಪಿಯಿಂದ ಸ್ಪರ್ಧಿಸಿದ್ದೇನೆ, ಇತರರ ಸ್ಪರ್ಧೆ ಬಗ್ಗೆ ಚಿಂತೆ ಬೇಡ. ಇದರಿಂದ ಯಾವುದೇ ಗೊಂದಲ ಉಂಟಾಗಲ್ಲ. ಏಪ್ರಿಲ್ 4ರಂದು ನಾಮಪತ್ರ ಸಲ್ಲಿಸುತ್ತೇನೆ. ಈಗಾಗಲೇ ಬಿಜೆಪಿ, ಜೆಡಿಎಸ್ ಪಕ್ಷದ ಕಾರ್ಯಕರ್ತರು ಒಗ್ಗಟ್ಟಿನಿಂದ ಇದ್ದು, ಎರಡೂ ಪಕ್ಷಗಳ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಡಾ.ಸಿ.ಎನ್.ಮಂಜುನಾಥ್​ ಗೆಲ್ಲಿಸಲು ಎಲ್ಲರೂ ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ:ಡಾ ಸಿಎನ್ ಮಂಜುನಾಥ್ ಸ್ಪರ್ಧೆ ಡಿಕೆ ಸಹೋದರರ ಶಿಬಿರದಲ್ಲಿ ಆತಂಕ ಮೂಡಿಸಿದೆಯೇ? ಶಿವಕುಮಾರ್ ಪ್ರತಿಕ್ರಿಯೆ ಅದನ್ನು ಸೂಚಿಸುತ್ತದೆ!

ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ಡಾ.ಸಿ.ಎನ್.ಮಂಜುನಾಥ್ ಟಾಂಗ್

ಇದೆ ವೇಳೆ ನಿನ್ನೆ(ಮಾ.28) ರಾಮನಗರದಲ್ಲಿ ಕಾಂಗ್ರೆಸ್ ನಾಯಕರಿಂದ ಶಕ್ತಿ ಪ್ರದರ್ಶನ ವಿಚಾರ, ‘ಆ ಶಕ್ತಿ ಪ್ರದರ್ಶನಕ್ಕಿಂತ ಮತಗಟ್ಟೆಯಲ್ಲಿ ಶಕ್ತಿ ಪ್ರದರ್ಶನ ಮುಖ್ಯ. ಮತ ಪತ್ರದಲ್ಲಿ ಶಕ್ತಿ ಪ್ರದರ್ಶನ ಇರಬೇಕು. ಕೆಲವೆಡೆ ಏಕಾಂಗಿಯಾಗಿ ನಾಮಪತ್ರ ಸಲ್ಲಿಸಿದವರೂ ಗೆದ್ದಿದ್ದಾರೆ ಎನ್ನುವ ಮೂಲಕ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ಡಾ.ಸಿ.ಎನ್.ಮಂಜುನಾಥ್ ಟಾಂಗ್ ಕೊಟ್ಟಿದ್ದಾರೆ.

ಜನ ಆ ಕ್ಷಣದ ಲಾಭ ನೋಡಬಾರ್ದು, ಶಾಶ್ವತ ಪರಿಹಾರವನ್ನು ನೋಡ್ಬೇಕು

ಇನ್ನು ಕೋವಿಡ್​ನಲ್ಲಿ ಲಕ್ಷಾಂತರ ಜನ ಪ್ರಾಣ ತೆತ್ತಿದ್ದಾರೆ. ನಾನು ಕೋವಿಡ್ ನಿರ್ವಹಣ ಸಮಿತಿಯಲ್ಲಿದ್ದೆ. ಆರುವರೆ ಏಳು ಕೋಟಿ ಜನರಿಗೆ ಆತಂಕ ಇತ್ತು. ಅವರಿಗೆ ಸಾಂತ್ವನ ಹೇಳುತ್ತಿದ್ದೆ, ಲಸಿಕೆ ಬಗ್ಗೆನೇ ಬಹಳ ಹಿಂಜರಿಕೆ ಇತ್ತು. ಅಂಥಹ ಸಂದರ್ಭದಲ್ಲಿ ನಾವೇ ಮೊದಲು ಲಸಿಕೆ ಪಡೆದುಕೊಂಡೆವು. ಕೋವಿಡ್ ಸಂದರ್ಭದಲ್ಲಿ ನಮ್ಮ ಆಸ್ಪತ್ರೆ ಯಲ್ಲಿ 700 ಸಿಬ್ಬಂದಿಗೆ ಕೋವಿಡ್ ಆಗಿತ್ತು. ಅವರೆಲ್ಲರಿಗೂ ನಾವು ಚಿಕಿತ್ಸೆ ಕೊಟ್ಟೆವು, ಅವರೆಲ್ಲ ಬದುಕಿದರು. ಕೋಟ್ಯಾಂತರ ವ್ಯಾಕ್ಸೀನ್ ಮೋದಿ ಸರಕಾರ ನೀಡಿದ ಪರಿಣಾಮ ಬಹಳ ಪ್ರಾಣಗಳು ಉಳಿದಿವೆ. ಜೊತೆಗೆ ಹೃದಯಕ್ಕೆ ಹಾಕುವ ಸ್ಟಂಟ್ ಒಂದು ಲಕ್ಷ , ಕೆಲವು ಕಡೆ 70 ಸಾವಿರ ರೂ. ಇತ್ತು. ಅದನ್ನು ಮೋದಿ ಅವರಿಗೆ ತಿಳಿಸಿ 25 ಸಾವಿರಕ್ಕೆ ಇಳಿಸಿದೆ. ಜನ ಆ ಕ್ಷಣದ ಲಾಭ ನೋಡಬಾರದು, ಶಾಶ್ವತ ಪರಿಹಾರವನ್ನು ನೋಡಬೇಕು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Syed Nizamuddin
Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ