AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹತಾಶೆಯಿಂದ ಹೀಗೆ ಮಾಡುತ್ತಿದ್ದಾರೆ: ಪ್ರಚಾರಕ್ಕೆ ತೆರಳಿದವರ ಮೇಲಿನ ಹಲ್ಲೆ ಖಂಡಿಸಿದ ಡಾ. ಸಿಎನ್ ಮಂಜುನಾಥ್

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಪ್ರಚಾರಕ್ಕೆ ತೆರಳಿದ ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಮೇಲೆ ನಡೆಸಿದ ಹಲ್ಲೆಯನ್ನು ಬಿಜೆಪಿ ಅಭ್ಯರ್ಥಿ ಡಾ ಸಿಎನ್ ಮಂಜುನಾಥ್ ಖಂಡಿಸಿದ್ದಾರೆ. ಈ ಬಗ್ಗೆ ಡಿಐಜಿ ಜತೆ ಮಾತನಾಡಿದ್ದೇನೆ ಎಂದಿರುವ ಅವರು ಚುನಾವಣಾ ಆಯೋಗಕ್ಕೂ ದೂರು ನೀಡುವುದಾಗಿ ಹೇಳಿದ್ದಾರೆ. ಪ್ರತಿಸ್ಪರ್ಧಿಗಳು ಹತಾಶೆಯಿಂದ ಹೀಗೆ ಮಾಡುತ್ತಿದ್ದಾರೆ ಎಂದಿದ್ದಾರೆ.

ಹತಾಶೆಯಿಂದ ಹೀಗೆ ಮಾಡುತ್ತಿದ್ದಾರೆ: ಪ್ರಚಾರಕ್ಕೆ ತೆರಳಿದವರ ಮೇಲಿನ ಹಲ್ಲೆ ಖಂಡಿಸಿದ ಡಾ. ಸಿಎನ್ ಮಂಜುನಾಥ್
ಡಾ. ಸಿಎನ್ ಮಂಜುನಾಥ್
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ | Edited By: |

Updated on: Apr 12, 2024 | 8:17 AM

Share

ರಾಮನಗರ, ಏಪ್ರಿಲ್ 12: ಬೆಂಗಳೂರು ಗ್ರಾಮಾಂತರ (Bengaluru Rural) ಕ್ಷೇತ್ರದಲ್ಲಿ ತಮ್ಮ ಪರ ಪ್ರಚಾರಕ್ಕೆ ತೆರಳಿದ್ದ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ಮೇಲೆ ನಡೆದಿರುವ ಹಲ್ಲೆಯನ್ನು ಬಿಜೆಪಿ ಅಭ್ಯರ್ಥಿ ಡಾ. ಸಿಎನ್ ಮಂಜುನಾಥ್ (Dr CN Manjunath) ಖಂಡಿಸಿದ್ದಾರೆ. ಈ ಕುರಿತು ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ‌ ಹೊಂಗನೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಇದು ನಮ್ಮ ಸಂಸ್ಕೃತಿ ಅಲ್ಲ. ಚುನಾವಣೆಯನ್ನು ಏನಿದ್ದರೂ ನಮ್ಮ ತತ್ವ, ಸಿದ್ಧಾಂತದ ಮೇಲೆ ಎದುರಿಸಬೇಕೇ ವಿನಹ ಈ ರೀತಿಯ ಕೃತ್ಯಗಳನ್ನು ಸಗಬಾರದು. ಚುನಾವಣೆ ವಿರುದ್ಧ ದಿಕ್ಕಿನಿಂದ ಸಾಗುತ್ತಿದೆ ಎಂಬುದು ಅರಿವಾಗಿರಬೇಕು. ಹೀಗಾಗಿ, ಹತಾಶೆಯಿಂದ ಈ ರೀತಿ ಮಾಡಿಸುತ್ತಿದ್ದಾರೆ ಎಂದು ಹೇಳಿದರು.

ಚುನಾವಣೆಯನ್ನು ಆರೋಗ್ಯಕರವಾಗಿ ಎದುರಿಸಬೇಕು. ಅದರ ಬದಲು ಈ ರೀತಿ ಅಡ್ಡದಾರಿ ಹಿಡಿಯಬಾರದು. ಪ್ರಚಾರಕ್ಕೆ ತೆರಳಿದ್ದವರ ಮೇಲೆ ಹಲ್ಲೆ ನಡೆಸಿರುವ ವಿಚಾರವಾಗಿ ಈಗಾಗಲೇ ಡಿಐಜಿ ಅವರ ಜೊತೆ ಚರ್ಚಿಸಿದ್ದೇನೆ. ಚುನಾವಣಾ ಆಯೋಗಕ್ಕೂ ದೂರು ನೀಡಲಿದ್ದೇವೆ ಎಂದು ಅವರು ತಿಳಿಸಿದರು.

‘ಡಾಕ್ಟರ್ ವರ್ಸಸ್ ಡಾಕು’ ಎಂಬ ಪದ ಬಳಕೆ ಬಗ್ಗೆಯೂ ಮಂಜುನಾಥ್ ಆಕ್ಷೇಪ ವ್ಯಕ್ತಪಡಿಸಿದರು. ಈ ರೀತಿ ಟೀಕೆಗಳನ್ನು ಮಾಡಬಾರದು. ಚುನಾವಣೆಯಲ್ಲಿ ವೈಯಕ್ತಿಕ ಟೀಕೆಗಳನ್ನು ಮಾಡುವುದು ಸರಿಯಲ್ಲ. ನಮ್ಮ ತತ್ವ ಸಿದ್ಧಾಂತಗಳ ಆಧಾರದಲ್ಲಿಯೇ ಪ್ರಚಾರ ಮಾಡಬೇಕು ಎಂದರು.

ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿಎನ್ ಮಂಜುನಾಥ್ ಪರ ಪ್ರಚಾರ ನಡೆಸಿದ್ದಕ್ಕೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಅಂಚೆಪಾಳ್ಯದಲ್ಲಿ ಕೆಂಪನಹಳ್ಳಿ ಗ್ರಾಮ ಪಂಚಾಯತಿ ಜೆಡಿಎಸ್ ಬೆಂಬಲಿತ ಸದಸ್ಯ ಮಂಜುನಾಥ್ ಎಂಬವರ ಮೇಲೆ ಹಲ್ಲೆ ನಡೆಸಲಾಗಿತ್ತು. ಕೆಂಪನಹಳ್ಳಿ ನಿವಾಸಿ ಬೋರೇಗೌಡ ಮತ್ತು ಅವರ ಬೆಂಬಲಿಗರು ಹಲ್ಲೆ ಮಾಡಿದ್ದಾರೆ ಎನ್ನಲಾಗಿತ್ತು.

ಇದನ್ನೂ ಓದಿ: ತುಮಕೂರು: ಡಾ. ಮಂಜುನಾಥ್​ ಪರ ಪ್ರಚಾರ ಮಾಡಿದ ವ್ಯಕ್ತಿ ಮೇಲೆ ಹಲ್ಲೆ

ಮತ್ತೊಂದೆಡೆ, ಮಂಜುನಾಥ್ ಪರ ಪ್ರಚಾರ ಮಾಡಿದ್ದ ಬಿಜೆಪಿ ಕಾರ್ಯಕರ್ತ‌ ನವೀನ್ ಮೇಲೆ ಕಾಂಗ್ರೆಸ್ಸಿನ ಗೂಂಡಾಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಆರೋಪಿಸಿದ್ದರು. ಬೆಂಗಳೂರು ಗ್ರಾಮಾಂತರದಲ್ಲಿ ಸೋಲು ಗ್ಯಾರೆಂಟಿ ಆಗುತ್ತಿದ್ದಂತೆ, ಹತಾಶೆಯಿಂದ ಕಂಗಾಲಾಗಿರುವ ಡಿಕೆ ಶಿವಕುಮಾರ್ ಹಾಗೂ ಅವರ ಸಹೋದರ ಡಿಕೆ ಸುರೇಶ್ ಮತದಾರರ ಮೇಲಿನ ಕೋಪಕ್ಕೆ ಗೂಂಡಾಗಿರಿಗೆ ಇಳಿದಿದ್ದಾರೆ ಎಂದು ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್