AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನಕಪುರ: ತೋಟಕ್ಕೆ ಹೋಗುತಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರ ಕ್ಷೇತ್ರದಲ್ಲಿ ಕಾಡಾನೆಗಳ ಉಪಟಳ ಮಿತಿ ಮೀರಿದೆ. ಹೌದು ಕಾಡಾನೆ ದಾಳಿಗೆ ಕಳೆದ ವರ್ಷ ಕನಕಪುರದಲ್ಲಿ ಮೂವರು ಮೃತಪಟ್ಟಿದ್ದರು. ಇದೀಗ ಮತ್ತೆ 2024 ವರ್ಷ ಆರಂಭದ ಮೊದಲ ದಿನವೇ ತೋಟಕ್ಕೆ ತೆರಳುತ್ತಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ ಮಾಡಿದ್ದರಿಂದ, ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ಕನಕಪುರ: ತೋಟಕ್ಕೆ ಹೋಗುತಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ
ಗಾಯಗೊಂಡ ಮಹಿಳೆ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Jan 01, 2024 | 12:25 PM

Share

ರಾಮನಗರ, ಜನವರಿ 01: ಮಾನವ ಮತ್ತು ಪ್ರಾಣಿ ಸಂಘರ್ಷ ನಡೆಯುತ್ತಲೇ ಇದೆ. ಹಳೇ ಮೈಸೂರು ಭಾಗದ ಜಿಲ್ಲೆಗಳಲ್ಲಿ ಹುಲಿ, ಚಿರತೆ ಮತ್ತು ಆನೆಗಳು (Elephant) ಮನಷ್ಯರ ಮೇಲೆ ದಾಳಿ ಮಾಡುತ್ತಿರುವ ಪ್ರಕರಣಗಳು ವರದಿಯಾಗುತ್ತಲೇ ಇವೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಿ ಎಂದು ಸಾರ್ವಜನಿಕರು ಸರ್ಕಾರದ ಮೇಲೆ ಒತ್ತಡ ಹೇರುತ್ತಲೇ ಇದ್ದಾರೆ. ಇನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ (DK Shivakumar) ಕ್ಷೇತ್ರದಲ್ಲಿ ಕಾಡಾನೆಗಳ ಉಪಟಳ ಮಿತಿ ಮೀರಿದೆ. ಹೌದು ಕಾಡಾನೆ ದಾಳಿಗೆ ಕಳೆದ ವರ್ಷ ಕನಕಪುರದಲ್ಲಿ ಮೂವರು ಮೃತಪಟ್ಟಿದ್ದರು.

ಇದೀಗ ಮತ್ತೆ 2024 ವರ್ಷ ಆರಂಭದ ಮೊದಲ ದಿನವೇ ತೋಟಕ್ಕೆ ತೆರಳುತ್ತಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ ಮಾಡಿದ್ದರಿಂದ, ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಕನಕಪುರ ತಾಲೂಕಿನ ಬರಡನಹಳ್ಳಿಯಲ್ಲಿ ಇಂದು (ಜ.01) ಬೆಳಿಗ್ಗೆ ಘಟನೆ ನಡೆದಿದೆ. ಬರಡನಹಳ್ಳಿ ಗ್ರಾಮದ ದುಂಡಮ್ಮ (35) ಗಾಯಗೊಂಡವರು.

ಇದನ್ನೂ ಓದಿ: ರೈತರನ್ನು ಅಟ್ಟಾಡಿಸಿಕೊಂಡು ಹೋದ 30 ಕಾಡಾನೆಗಳ ಹಿಂಡು: ಅನ್ನದಾತ ಬಚಾವ್

ಆನೆ ದಾಳಿಯಿಂದ ತೀವ್ರವಾಗಿ ಅಸ್ವಸ್ಥಗೊಂಡಿರುವ ದುಂಡಮ್ಮ ಅವರ ಎಡಗೈ ಮುರಿದಿದೆ. ಸದ್ಯ ಗ್ರಾಮಸ್ಥರು ದುಂಡಮ್ಮ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು, ಸಿಬ್ಬಂದಿಗಳು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಗಾಯಗೊಂಡ ದುಂಡಮ್ಮ ಅವರ ಚಿಕಿತ್ಸಾ ವೆಚ್ಚ ಭರಿಸಿ, ಪರಿಹಾರ ನೀಡುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಹಿಂದಿನ ಹಲವು ಪ್ರಕರಣಗಳು

ಕಳೆದ ಕೆಲವು ದಿನಗಳ ಹಿಂದೆ ಅಂದರೆ 2023ರ ಡಿಸೆಂಬರ್​ 27 ರಂದು ಕನಕಪುರ ತಾಲೂಕಿನ ಬನ್ನಿಮುಕ್ಕೊಳ್ಲು ಗ್ರಾಮದ ನಿವಾಸಿ ಚಂದ್ರಣ್ಣ ಅವರು ಕಾಡಿಗೆ ಕಟ್ಟಿಗೆ ತರಲು ಹೋದಾಗ ಆನೆ ದಾಳಿ ಮಾಡಿದೆ. ಇದರಿಂದ ಚಂದ್ರಣ್ಣ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಡಿಸೆಂಬರ್​ 17 ರಂದು ಇದೇ ತಾಲೂಕಿನ ಆನೆಕೆರೆ ದೊಡ್ಡಿ ಗ್ರಾಮದ ನಿವಾಸಿ ತಿಮ್ಮಯ್ಯ ಎಂಬ ರೈತ ಕಾಡಾನೆ ತುಳಿತಕ್ಕೆ ಸಾವಿಗೀಡಾಗಿದ್ದರು.

ಜೂನ್​ 3 ರಂದು ಕಬ್ಬಾಳು ಗ್ರಮಾದ ರೈತ ಕಾಳಯ್ಯ, ಜೂನ್​ 19 ರಂದು ಜಯಮ್ಮ ಮತ್ತು ಜಯಮ್ಮ ಜೊತೆಗಿದ್ದ ವೆಂಕಟಲಕ್ಷ್ಮಮ್ಮ ಕಡಾನೆ ದಾಳಿಗೆ ಮೃತಪಟ್ಟಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!