AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವ ಪುಣ್ಯದ ಹಣದಲ್ಲಿ ರಾಧಿಕಾ ಅವರಿಗೆ ನೂರಾರು ಕೋಟಿ‌ ಕೊಟ್ಟರು: ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಕೆ ರಾಜು ಕಿಡಿ

ಕಾಂಗ್ರೆಸ್ ಬೆಂಬಲದಿಂದ ಹೆಚ್​ಡಿಕೆ 2ನೇ ಬಾರಿಗೆ ಸಿಎಂ ಆದರು. ಆಮೇಲೆ ಕುಮಾರಸ್ವಾಮಿ ಹಣ ಮಾಡುವ ದಂಧೆಗೆ ಇಳಿದರು. ಮಂಡ್ಯದಲ್ಲಿ ಮಗನನ್ನು ಗೆಲ್ಲಿಸಿಕೊಳ್ಳುವುದಕ್ಕೆ ಹೆಚ್​ಡಿಕೆಗೆ ಆಗಲಿಲ್ಲ. ನೂರಾರು ಕೋಟಿ ಸುರಿದರೂ ಮಗನನ್ನು ಗೆಲ್ಲಿಸಿಕೊಳ್ಳಲಾಗಲಿಲ್ಲ ಎಂದು ಹೇಳಿದ್ದಾರೆ.

ಯಾವ ಪುಣ್ಯದ ಹಣದಲ್ಲಿ ರಾಧಿಕಾ ಅವರಿಗೆ ನೂರಾರು ಕೋಟಿ‌ ಕೊಟ್ಟರು: ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಕೆ ರಾಜು ಕಿಡಿ
ಜೆಡಿಎಸ್ ನಾಯಕ ಹೆಚ್​.ಡಿ. ಕುಮಾರಸ್ವಾಮಿ
TV9 Web
| Edited By: |

Updated on: Feb 12, 2022 | 3:19 PM

Share

ರಾಮನಗರ: ಹಿರಿಯ ನಾಯಕರ ಸಮಾಧಿ ಮೇಲೆ ಹೆಚ್.ಡಿ. ಕುಮಾರಸ್ವಾಮಿ ಸೌಧವನ್ನು ಕಟ್ಟಿಕೊಂಡಿದ್ದಾರೆ. ನಾನು ರಾಜಕೀಯಕ್ಕೆ ಬಂದಾಗ ಹೆಚ್‌.ಡಿ. ಕುಮಾರಸ್ವಾಮಿ ಎಲ್ಲಿದ್ದರೋ ಗೊತ್ತಿಲ್ಲ. ದೇವೇಗೌಡರ ಮಗನೆಂಬ ಕಾರಣಕ್ಕೆ ಜನ ಅವರನ್ನ ಗುರುತಿಸಿದ್ರು. ಕುಮಾರಸ್ವಾಮಿಯನ್ನು ನಾವೇ ರಾಮನಗರಕ್ಕೆ ಕರೆತಂದೆವು. ಅವರು ಒಬ್ಬರ ಮೇಲೆ ಒಬ್ಬರನ್ನ ಎತ್ತಿಕಟ್ಟಿ ಯಶಸ್ವಿಯಾದರು ಎಂದು ಮಾಜಿ ಸಿಎಂ ಹಾಗೂ ಜೆಡಿಎಸ್ ನಾಯಕ ಹೆಚ್‌.ಡಿ. ಕುಮಾರಸ್ವಾಮಿ ವಿರುದ್ಧ ಮಾಜಿ ಶಾಸಕ ಕೆ. ರಾಜು ಕಿಡಿಕಾರಿದ್ದಾರೆ.

ನನಗೆ ಜಿಲ್ಲಾ ಪಂಚಾಯತ್ ಟಿಕೆಟ್ ನೀಡಿ ಸೋಲಿಸಲು ಹೇಳಿದ್ರು. ಅವರು ಹೇಳಿದಂತೆ ಕೇಳುವವರನ್ನ ಮಾತ್ರ ಹೆಚ್.ಡಿ. ಕುಮಾರಸ್ವಾಮಿ ಬೆಳೆಸುತ್ತಾರೆ. ಕಾಂಗ್ರೆಸ್ ಬೆಂಬಲದಿಂದ ಹೆಚ್​ಡಿಕೆ 2ನೇ ಬಾರಿಗೆ ಸಿಎಂ ಆದರು. ಆಮೇಲೆ ಕುಮಾರಸ್ವಾಮಿ ಹಣ ಮಾಡುವ ದಂಧೆಗೆ ಇಳಿದರು. ಮಂಡ್ಯದಲ್ಲಿ ಮಗನನ್ನು ಗೆಲ್ಲಿಸಿಕೊಳ್ಳುವುದಕ್ಕೆ ಹೆಚ್​ಡಿಕೆಗೆ ಆಗಲಿಲ್ಲ. ನೂರಾರು ಕೋಟಿ ಸುರಿದರೂ ಮಗನನ್ನು ಗೆಲ್ಲಿಸಿಕೊಳ್ಳಲಾಗಲಿಲ್ಲ ಎಂದು ಹೇಳಿದ್ದಾರೆ.

ಮಾಜಿ ಪ್ರಧಾನಿ‌ ದೇವೇಗೌಡರು ಸೋಲಲು ಹೆಚ್​.ಡಿ. ಕುಮಾರಸ್ವಾಮಿ ಕಾರಣ. ಕುಮಾರಸ್ವಾಮಿಯವರ ಆಕ್ರಮ ನೋಡಿ ಜನರು ಸೋಲಿಸಿದ್ರು. ಸುಳ್ಳಿನ ಸರಮಾಲೆ ಕಟ್ಟಿ ರಾಜಕೀಯ ಬೆಳೆ ಬೇಯಿಸಿಕೊಳ್ಳುತ್ತಾರೆ. ಏಕವಚನದಲ್ಲೇ ಮಾತಾಡುತ್ತಾರೆಂದು ಹೆಚ್‌ಡಿಕೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹೆಚ್‌ಡಿಕೆ ಜನರಿಗೆ ಮೋಡಿ ಮಾಡಿ ರಾಜಕೀಯ ಮಾಡಿದ್ದಾರೆ ಎಂದು ರಾಮನಗರದಲ್ಲಿ ಮಾಜಿ ಶಾಸಕ ಕೆ.ರಾಜು ಹೇಳಿದ್ದಾರೆ.

ಮುಖ್ಯಮಂತ್ರಿ ಸ್ಥಾನದಲ್ಲಿ‌ದ್ದವರು ರಾಧಿಕಾ ಅವರನ್ನು ಮದುವೆ ಆದರು. ಆದರೆ ರಾಧಿಕಾ ಕುಮಾರಸ್ವಾಮಿಯಿಂದ ದೂರವಾಗಲೂ ನೂರಾರು ಕೋಟಿ ರೂಪಾಯಿ ಕೊಟ್ಟರು. ಯಾವ ಪುಣ್ಯದ ಹಣದಲ್ಲಿ ರಾಧಿಕಾ ಕುಮಾರಸ್ವಾಮಿ ಅವರಿಗೆ ನೂರಾರು ಕೋಟಿ‌ ಕೊಟ್ಟರೆಂದು ರಾಜ್ಯದ ಜನರಿಗೆ ತಿಳಿಸಬೇಕೆಂದು ಮಾಜಿ ಶಾಸಕ ಕೆ.ರಾಜು ಆಗ್ರಹ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅನಿತಾ ಕುಮಾರಸ್ವಾಮಿ ಅವರನ್ನು ಮುಂದಿನ ಚುನಾವಣೆಗೆ ನಿಲ್ಲಿಸಲ್ಲ: ಹೆಚ್​ಡಿ ಕುಮಾರಸ್ವಾಮಿ

ಇದನ್ನೂ ಓದಿ: Hijab Row: ಹಿಜಾಬ್ ಹೆಸರಿನಲ್ಲಿ ಮಕ್ಕಳಲ್ಲಿ ಏಕೆ ಕೋಮು ಭಾವನೆ ಬಿತ್ತುತ್ತಿದ್ದೀರಿ?; ಹೆಚ್​ಡಿ ಕುಮಾರಸ್ವಾಮಿ ಕಿಡಿ

Follow Us
TV9 Web
TV9 Web

TV9 Kannada

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ