AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಕೇಸ್​​: 6 ಮಂದಿ ಪೊಲೀಸರ ತಲೆದಂಡ

ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಸಾಗುವ ಮಾರ್ಗದ ಬಳಿ ಸ್ಫೋಟಕ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಒಬ್ಬ ಪಿಎಸ್‌ಐ ಸೇರಿದಂತೆ ಆರು ಮಂದಿ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಲಾಗಿದೆ. ಬೆಂಗಳೂರು ದಕ್ಷಿಣ ಎಸ್​​ಪಿ ಶ್ರೀನಿವಾಸ್ ಗೌಡ ಈ ಕುರಿತು ಆದೇಶ ಹೊರಡಿಸಿದ್ದಾರೆ. ಮೇ 10ರಂದು ಪ್ರಧಾನಿ ಬೆಂಗಳೂರು ಭೇಟಿ ವೇಳೆ ಸ್ಫೋಟಕ ತುಂಬಿದ ಬಾಕ್ಸ್​​ ಅವರು ಸಾಗಬೇಕಿದ್ದ ಮಾರ್ಗದ ಸಮೀಪವೇ ಪತ್ತೆಯಾಗಿತ್ತು.

ಪ್ರಧಾನಿ ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಕೇಸ್​​: 6 ಮಂದಿ ಪೊಲೀಸರ ತಲೆದಂಡ
ಪ್ರಧಾನಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಕೇಸ್​​: 6 ಮಂದಿ ಪೊಲೀಸರ ತಲೆದಂಡ
ಪ್ರಶಾಂತ್​ ಬಿ.
| Edited By: |

Updated on:May 24, 2026 | 11:56 AM

Share

ಬೆಂಗಳೂರು, ಮೇ 24: ಮೇ 10ರಂದು ಬೆಂಗಳೂರಿಗೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi) ಆರ್ಟ್​​ ಆಫ್​​ ಲಿವಿಂಗ್​​ಗೆ ತೆರಳುವ ಮಾರ್ಗ ಸಮೀಪವೇ ಸ್ಫೋಟಕ ಪತ್ತೆ ಕೇಸ್ ಸಂಬಂಧ ಪೊಲೀಸ್​​ ಅಧಿಕಾರಿಗಳು ಮತ್ತು ಸಿಬ್ಬಂದಿಯ ತಲೆದಂಡವಾಗಿದೆ. ಬೆಂಗಳೂರು ದಕ್ಷಿಣ ತಾಲೂಕಿನ ವಡೇರಹಳ್ಳಿ ಗೇಟ್ ಬಳಿ ಸ್ಫೋಟಕ ಪತ್ತೆ ಸಂಬಂಧ ಪೊಲೀಸ್ ಅಧಿಕಾರಿಗಳು ‌ಸೇರಿದಂತೆ 6 ಸಿಬ್ಬಂದಿಯನ್ನು ಅಮಾನತು ಮಾಡಿ ಬೆಂಗಳೂರು ದಕ್ಷಿಣ ಎಸ್​​ಪಿ ಶ್ರೀನಿವಾಸ್ ಗೌಡ ಆದೇಶಿಸಿದ್ದಾರೆ.

ಮುಖ್ಯಾಂಶಗಳು

  • ಪ್ರಧಾನಿ ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಕೇಸ್​​
  • ಪ್ರಕರಣ ಸಂಬಂಧ ಒಟ್ಟು 6 ಮಂದಿ ಪೊಲೀಸರ ತಲೆದಂಡ
  • ಬೆಂಗಳೂರು ದಕ್ಷಿಣ ಎಸ್​​ಪಿ ಶ್ರೀನಿವಾಸ್ ಗೌಡ ಅವರಿಂದ ಆದೇಶ

ಕರ್ತವ್ಯಲೋಪ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಓರ್ವ ಪಿಎಸ್​ಐ, ಓರ್ವ ASI, ನಾಲ್ವರು ಕಾನ್ಸ್​​ಟೇಬಲ್​ಗಳನ್ನು ಸಸ್ಪೆಂಡ್ ಮಾಡಲಾಗಿದೆ. ಇವರೆಲ್ಲರನ್ನೂ ಮೇ 10ರಂದು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿತ್ತು. ಸ್ಫೋಟಕ ಪತ್ತೆಯಾದ ಸ್ಥಳದ ಬಳಿಯೇ ಇವರು ಭದ್ರತೆ ನೋಡಿಕೊಳ್ಳುತ್ತಿದ್ದರು. ಹಿಗಾಗಿ ಅಲರ್ಟ್​​ ಇರಲಿಲ್ಲ ಮತ್ತು ಕರ್ತವ್ಯ ಲೋಪ ಎಸಗಿದ್ದಾರೆ ಎಂಬ ಕಾರಣ ನೀಡಿ 6 ಮಂದಿಯನ್ನು ಅಮಾನತು ಮಾಡಲಾಗಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ಸಂಚರಿಸುವ ಮಾರ್ಗದಲ್ಲೇ ಜಿಲೆಟಿನ್ ಪತ್ತೆ; ಸ್ಫೋಟಕ ತುಂಬಿದ ಬಾಕ್ಸ್​ಗೆ ಟೇಪ್ ಸುತ್ತಿ ಬಿಸಾಡಿದ್ದ ಆರೋಪಿ!

ಮೇ 10ರಂದು ಪ್ರಧಾನಿ ಮೋದಿ ಅವರು ‘ಆರ್ಟ್ ಆಫ್ ಲಿವಿಂಗ್’ ಆಶ್ರಮಕ್ಕೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದ್ದರು. ಅವರು ಬರುವ ಕೇವಲ ಎರಡು ಗಂಟೆಗಳ ಮೊದಲು, ಅಂದರೆ ಬೆಳಿಗ್ಗೆ 9 ಗಂಟೆ ವೇಳೆಗೆ, ಬೆಂಗಳೂರು ದಕ್ಷಿಣ ತಾಲೂಕಿನ ವಡೇರಹಳ್ಳಿ ಗೇಟ್ ಸಮೀಪ ಅನುಮಾನಾಸ್ಪದ ಬಾಕ್ಸ್ ಒಂದು ಪತ್ತೆಯಾಗಿತ್ತು. ಭದ್ರತೆಗೆ ನಿಯೋಜನೆಗೊಂಡಿದ್ದ ಪೇದೆಯೊಬ್ಬರು ರಸ್ತೆ ಪಕ್ಕದಲ್ಲಿ ಬಿದ್ದಿದ್ದ ಈ ಬಾಕ್ಸ್ ಅನ್ನು ಗಮನಿಸಿದ್ದರು. ಸುದ್ದಿ ತಿಳಿದ ಕೂಡಲೇ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಧಾವಿಸಿತ್ತು. ಬಾಕ್ಸ್ ಅನ್ನು ತೆರೆದು ಪರಿಶೀಲಿಸಿದಾಗ ಅದರಲ್ಲಿ ಸ್ಫೋಟಕಗಳು ಕಂಡುಬಂದಿದ್ದವು. ತಕ್ಷಣವೇ ಸ್ಫೋಟಕಗಳನ್ನು ವಶಕ್ಕೆ ಪಡೆದ ಪೊಲೀಸರು, ಇಡೀ ಮಾರ್ಗವನ್ನು ಮತ್ತೊಮ್ಮೆ ತೀವ್ರ ತಪಾಸಣೆಗೆ ಒಳಪಡಿಸಿದ ಬಳಿಕವೇ ಪ್ರಧಾನಿ ಸಂಚಾರಕ್ಕೆ ಅವಕಾಶ ನೀಡಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 11:56 am, Sun, 24 May 26

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
ಡಾ. ರಾಜ್ ಸಮಾಧಿ ಬಗ್ಗೆ ನಾನು ಹೇಳಿದ್ದನ್ನು ಜನ ಒಪ್ಪಿದ್ದಾರೆ: ಚೇತನ್ ಅಹಿಂಸ
ಡಾ. ರಾಜ್ ಸಮಾಧಿ ಬಗ್ಗೆ ನಾನು ಹೇಳಿದ್ದನ್ನು ಜನ ಒಪ್ಪಿದ್ದಾರೆ: ಚೇತನ್ ಅಹಿಂಸ
4,500 ಕೋಟಿ ವಂಚನೆ ಕೇಸ್​: ಹೂಡಿಕೆಗಿಂತ ಹೆಚ್ಚು ಲಾಭ ಪಡೆದವರಿಗೂ ಈಗ ನಡುಕ
4,500 ಕೋಟಿ ವಂಚನೆ ಕೇಸ್​: ಹೂಡಿಕೆಗಿಂತ ಹೆಚ್ಚು ಲಾಭ ಪಡೆದವರಿಗೂ ಈಗ ನಡುಕ
ಸ್ತ್ರೀ ಜಾತಕದಲ್ಲಿ ಯಾವ ಗ್ರಹ ಬಲವಾಗಿದ್ರೆ ಅದೃಷ್ಟ ಗೊತ್ತಾ?
ಸ್ತ್ರೀ ಜಾತಕದಲ್ಲಿ ಯಾವ ಗ್ರಹ ಬಲವಾಗಿದ್ರೆ ಅದೃಷ್ಟ ಗೊತ್ತಾ?
ಇಂದು ಈ ರಾಶಿಯವರು ಹಿತಶತ್ರುಗಳಿಂದ ಜಾಗರೂಕರಾಗಿರಿ
ಇಂದು ಈ ರಾಶಿಯವರು ಹಿತಶತ್ರುಗಳಿಂದ ಜಾಗರೂಕರಾಗಿರಿ
ನನ್ನ ತಮ್ಮ ಹಾಗೂ ಶಿವಣ್ಣನ ನಂಬಿ ರೈತರು ಸ್ಟೇಡಿಯಂಗೆ ಜಮೀನು ಕೊಟ್ಟಿದ್ದಾರೆ
ನನ್ನ ತಮ್ಮ ಹಾಗೂ ಶಿವಣ್ಣನ ನಂಬಿ ರೈತರು ಸ್ಟೇಡಿಯಂಗೆ ಜಮೀನು ಕೊಟ್ಟಿದ್ದಾರೆ
ಭೂಪಾಲ್​ನಲ್ಲಿ ‘ಪೆದ್ದಿ ಹವಾ, ರಾಮ್ ಚರಣ್ ಜೊತೆ ಇನ್ಯಾರೆಲ್ಲ ಹಾಜರಿ
ಭೂಪಾಲ್​ನಲ್ಲಿ ‘ಪೆದ್ದಿ ಹವಾ, ರಾಮ್ ಚರಣ್ ಜೊತೆ ಇನ್ಯಾರೆಲ್ಲ ಹಾಜರಿ
ಮೋದಿ ಭೇಟಿಯಾದ ಮಾರ್ಕೊ ರುಬಿಯೋ: ಅಮೆರಿಕಕ್ಕೆ ಭೇಟಿ ನೀಡುವಂತೆ ಆಹ್ವಾನ
ಮೋದಿ ಭೇಟಿಯಾದ ಮಾರ್ಕೊ ರುಬಿಯೋ: ಅಮೆರಿಕಕ್ಕೆ ಭೇಟಿ ನೀಡುವಂತೆ ಆಹ್ವಾನ
ಎಐ ಬಳಸಿ ಬಿಕಿನಿ ವಿಡಿಯೋ: ರುಕ್ಮಿಣಿ ವಸಂತ್ ಹೇಳಿದ್ದೇನು?
ಎಐ ಬಳಸಿ ಬಿಕಿನಿ ವಿಡಿಯೋ: ರುಕ್ಮಿಣಿ ವಸಂತ್ ಹೇಳಿದ್ದೇನು?
ಪಿಎಂ ಮೋದಿ ಬಗ್ಗೆ ಸ್ಮೃತಿ ಇರಾನಿ ಹೇಳಿದ ಆ ಒಂದು ಮಾತು ಸಖತ್​ ವೈರಲ್
ಪಿಎಂ ಮೋದಿ ಬಗ್ಗೆ ಸ್ಮೃತಿ ಇರಾನಿ ಹೇಳಿದ ಆ ಒಂದು ಮಾತು ಸಖತ್​ ವೈರಲ್
ಡಾ ರಾಜ್​ಕುಮಾರ್ ಹಾಡಿದ ರಾಯರ ಹಾಡುಗಳ ನೆನೆದ ನಟಿ ತಾರಾ
ಡಾ ರಾಜ್​ಕುಮಾರ್ ಹಾಡಿದ ರಾಯರ ಹಾಡುಗಳ ನೆನೆದ ನಟಿ ತಾರಾ