AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರದಲ್ಲಿ ಖೋಟಾ ನೋಟು ಜಾಲ ಪತ್ತೆ: ನಿರ್ಮಾಣ ಹಂತದ ಮನೆಯಲ್ಲಿ ನಡೆಯುತ್ತಿದ್ದ ದಂಧೆ

Fake currency Ramanagara: ರಾಮನಗರದಲ್ಲಿ 200 ಮತ್ತು 500 ರೂ. ಮುಖಬೆಲೆಯ ಖೋಟಾ ನೋಟು ಮುದ್ರಣ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ನಿರ್ಮಾಣ ಹಂತದ ಮನೆಯಲ್ಲಿ ಕೆಮಿಕಲ್ ಬಳಸಿ ನಕಲಿ ನೋಟುಗಳನ್ನು ತಯಾರಿಸಿ ಮಾರಾಟ ಮಾಡಲಾಗುತ್ತಿತ್ತು. ಸದ್ಯ ಐಜೂರು ಠಾಣೆ ಪೊಲೀಸರು ಐವರು ಆರೋಪಿಗಳನ್ನ ವಶಕ್ಕೆ ಪಡೆದಿದ್ದಾರೆ.

ರಾಮನಗರದಲ್ಲಿ ಖೋಟಾ ನೋಟು ಜಾಲ ಪತ್ತೆ: ನಿರ್ಮಾಣ ಹಂತದ ಮನೆಯಲ್ಲಿ ನಡೆಯುತ್ತಿದ್ದ ದಂಧೆ
ಖೋಟಾ ನೋಟು ಜಾಲ ಪತ್ತೆImage Credit source: tv9 kannada
ಪ್ರಶಾಂತ್​ ಬಿ.
| Edited By: |

Updated on:Aug 31, 2026 | 8:03 PM

Share

ಮುಖ್ಯಾಂಶಗಳು

  • ರಾಮನಗರದಲ್ಲಿ ಖೋಟಾ ನೋಟು ಜಾಲ ಪತ್ತೆ
  • ರಾಮನಗರದ ಶಾಂತಿಲಾಲ್ ಲೇಔಟ್​ನಲ್ಲಿ ಘಟನೆ
  • ಖೋಟಾ ನೋಟು ಮುದ್ರಿಸಿ ಮಾರಾಟ ಮಾಡ್ತಿದ್ದ ಗ್ಯಾಂಗ್

ರಾಮನಗರ, ಆಗಸ್ಟ್​ 31: ಇತ್ತೀಚೆಗೆ ಬೆಂಗಳೂರು ಮತ್ತು ಕರಾವಳಿಯಲ್ಲಿ ಖೋಟಾ ನೋಟು ದಂಧೆ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದರು. ಇದೀಗ ರಾಮನಗರದಲ್ಲಿ (ramanagara) ಕೂಡ ಖೋಟಾ ನೋಟು ಜಾಲವೊಂದು ಪತ್ತೆ ಆಗಿದೆ. ಸಾರ್ವಜನಿಕರ ಕಣ್ಣುತಪ್ಪಿಸಿ ನಿರ್ಮಾಣ ಹಂತದ ಮನೆಯೊಂದರಲ್ಲೇ ಅಕ್ರಮವಾಗಿ ಖೋಟಾ ನೋಟುಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಅಂತರಜಿಲ್ಲಾ ಖದೀಮರ ಜಾಲವನ್ನು ಐಜೂರು ಪೊಲೀಸರು ಬಯಲಿಗೆಳೆದಿದ್ದು, ಐವರನ್ನು ವಶಕ್ಕೆ ಪಡೆದಿದ್ದಾರೆ.

ಶಾಂತಿಲಾಲ್ ಲೇಔಟ್‌ನ ನಿರ್ಮಾಣ ಹಂತದ ಮನೆಯಲ್ಲಿ ದಂಧೆ

ರಾಮನಗರದ ಶಾಂತಿಲಾಲ್ ಲೇಔಟ್‌ನಲ್ಲಿರುವ ಸಂತೋಷ್ ಎಂಬುವವರಿಗೆ ಸೇರಿದ ನಿರ್ಮಾಣ ಹಂತದ ಕಟ್ಟಡದಲ್ಲಿ ಈ ಅಕ್ರಮ ದಂಧೆ ನಡೆಯುತ್ತಿತ್ತು. ಯಾರಿಗೂ ಸಂಶಯ ಬಾರದಂತೆ ಆ ಕಟ್ಟಡವನ್ನು ಅಡ್ಡೆ ಮಾಡಿಕೊಂಡಿದ್ದ ಗ್ಯಾಂಗ್, ನೋಟು ಮುದ್ರಣ ಮಾಡುತ್ತಿದ್ದರು. ಖಚಿತ ಮಾಹಿತಿ ಬೆನ್ನತ್ತಿದ ಐಜೂರು ಪೊಲೀಸರು ದಿಢೀರ್ ದಾಳಿ ನಡೆಸಿ ಜಾಲವನ್ನು ಭೇದಿಸಿದ್ದಾರೆ.

ವಿಶೇಷ ಪೇಪರ್ ಮತ್ತು ಕೆಮಿಕಲ್ ಬಳಕೆ

ಹೊರಗಿನಿಂದ ವಿಶೇಷ ಕಾಗದದ ಶೀಟ್‌ಗಳನ್ನು ತರಿಸಿ, ಅವುಗಳಿಗೆ ನಿರ್ದಿಷ್ಟ ಕೆಮಿಕಲ್ ಲೇಪಿಸಿ ಅಸಲಿ ನೋಟಿನಂತೆ ಕಾಣುವ 200 ಹಾಗೂ 500 ರೂ ಮುಖಬೆಲೆಯ ನಕಲಿ ನೋಟುಗಳನ್ನು ಮುದ್ರಿಸಲಾಗುತ್ತಿತ್ತು. ಮುದ್ರಿತ ಶೀಟ್‌ಗಳನ್ನು ಅಚ್ಚುಕಟ್ಟಾಗಿ ಕತ್ತರಿಸಿ, ಬಂಡಲ್‌ಗಳನ್ನಾಗಿ ಪ್ಯಾಕ್ ಮಾಡಿ ಮಾರಾಟ ಮಾಡುತ್ತಿದ್ದರು.

ಇದನ್ನೂ ಓದಿ: ಬೆಳಗಾವಿ ಪೊಲೀಸರ ಭರ್ಜರಿ ಬೇಟೆ: ಗೋವಾ ಮೂಲದ ಖೋಟಾ ನೋಟ್ ಗ್ಯಾಂಗ್​ ಲಾಕ್​​

ಇನ್ನು ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ಮತ್ತು ಬೆರಳಚ್ಚು ತಜ್ಞರನ್ನೊಳಗೊಂಡ SOCO ತಂಡ ಭೇಟಿ ನೀಡಿ, ನೋಟು ಮುದ್ರಣಕ್ಕೆ ಬಳಸಿದ್ದ ರಾಸಾಯನಿಕ, ಕಾಗದ ಹಾಗೂ ಇತರೆ ಮಹತ್ವದ ಸಾಕ್ಷ್ಯಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದೆ.

ಏಳು ಆರೋಪಿಗಳನ್ನು ಬಂಧಿಸಲಾಗಿದೆ ಎಂದ SP ರೋಹನ್ ಜಗದೀಶ್

ಬೆಂಗಳೂರು ದಕ್ಷಿಣ SP ರೋಹನ್ ಜಗದೀಶ್ ಪ್ರತಿಕ್ರಿಯಿಸಿದ್ದು, ‘ ಶಾಂತಿಲಾಲ್ ಲೇಔಟ್​ನ ಮನೆಯೊಂದರಲ್ಲಿ ನಕಲಿ ನೋಟು ತಯಾರು ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಐಜೂರು ಪೊಲೀಸರು ದಾಳಿ ಮಾಡಿ ಏಳು ಆರೋಪಿಗಳನ್ನು ಬಂಧಿಸಲಾಗಿದೆ. ಸಂತೋಷ್, ಸಂಪತ್, ಗೋವಿಂದ್ ರಾಜ್, ರಾಜೇಶ್​​, ರೇಣುಕರಾಜ್, ಶಿವರಾಜ್, ಸತೀಶ್ ಬಂಧಿತರು.

ಇದನ್ನೂ ಓದಿ: ಬೆಂಗಳೂರಿನಲ್ಲಿ 26.6 ಕೋಟಿ ಡ್ರಗ್ಸ್, ನಕಲಿ ನೋಟು ಪ್ರಿಂಟಿಂಗ್ ಜಾಲ ಭೇದಿಸಿದ ಪೊಲೀಸರು

ಮನೆ ಮಾಲೀಕ ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದ. ಮನೆ ಮಾಲೀಕ ಸಂತೋಷ್​ಗೆ ಸಂಪತ್ ಪರಿಚಯ ಇರುತ್ತದೆ. ದಂಧೆ ಬಗ್ಗೆ ಸಂತೋಷ್​ಗೆ ಹೇಳಿ ಕಮಿಷನ್ ಆಮಿಷ ತೋರಿಸಿದ್ದಾರೆ. ಇನ್ನು ದಾಳಿ ವೇಳೆ ಐದು ಲಕ್ಷ ರೂ ಮೌಲ್ಯದ 10 ಬಂಡಲ್ ನೋಟು ಸಿಕ್ಕಿದೆ. ಜಾಲದ ಹಿಂದೆ ಯಾರಿದ್ದಾರೆಂದು ತನಿಖೆ ನಡೆಯುತ್ತಿದೆ. ಟೇಬಲ್, ಪೇಪರ್ ಬಂಡಲ್, ಕೆಮಿಕಲ್ ಸಲ್ಯೂಷನ್ ಹಚ್ಚುವ ಬಟ್ಟೆ, ಗ್ಲ್ಯಾಸ್ ಫಿಲ್ಮ್‌ ದೊರೆತಿದೆ ಎಂದು ಮಾಹಿತಿ ನೀಡಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:15 pm, Mon, 31 August 26

Follow Us
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್