AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೋಲ್​ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ; ಫಾಲೋ ಮಾಡಿಕೊಂಡು ಹೋಗಿ ಟೋಲ್​ ಸಿಬ್ಬಂದಿ ಹತ್ಯೆ

Ramanagara: ಬೆಂಗಳೂರು ದಕ್ಷಿಣ ತಾಲೂಕಿನ ಕರಿಕಲ್ ತಾಂಡ್ಯ ನಿವಾಸಿ ಪವನ್​​ಕುಮಾರ್ ಕೆಲಸ ಮುಗಿಸಿ ಊಟಕ್ಕೆ ಹೋಗಿದ್ದಾಗ ಪವನ್ ‌ಮೇಲೆ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ.

ಟೋಲ್​ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ; ಫಾಲೋ ಮಾಡಿಕೊಂಡು ಹೋಗಿ ಟೋಲ್​ ಸಿಬ್ಬಂದಿ ಹತ್ಯೆ
ಟೋಲ್​ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ
ಆಯೇಷಾ ಬಾನು
|

Updated on:Jun 05, 2023 | 10:17 AM

Share

ರಾಮನಗರ: ಟೋಲ್​ ಪಡೆಯುವ ವಿಚಾರಕ್ಕೆ ಸಿಬ್ಬಂದಿ ಹಾಗೂ ಯುವಕರ ನಡುವೆ ಗಲಾಟೆ ನಡೆದಿದ್ದು ಈ ಜಗಳ ಕೊಲೆಯಲ್ಲಿ(Murder) ಅಂತ್ಯ ಕಂಡಿದೆ. ರಾಮನಗರ ‌ತಾಲೂಕಿನ ಶೇಷಗಿರಿಹಳ್ಳಿ‌ ಟೋಲ್ ಪ್ಲಾಜಾ(Sheshagirihalli Toll Plaza) ಬಳಿ ಟೋಲ್​ ಪಡೆಯುವ ವಿಚಾರಕ್ಕೆ ಸಿಬ್ಬಂದಿ ಹಾಗೂ ಕಾರಿನಲ್ಲಿ ಬಂದಿದ್ದ ಯುವಕರ ನಡುವೆ ಮಾರಾಮಾರಿಯಾಗಿತ್ತು. ಇದನ್ನೇ ಮನಸಿನಲ್ಲಿಟ್ಟುಕೊಂಡಿದ್ದ ಯುವಕರು ಟೋಲ್​ನಲ್ಲಿ ಕೆಲಸ ಮಾಡ್ತಿದ್ದ ಪವನ್​ಕುಮಾರ್​(26) ಹತ್ಯೆ ಮಾಡಿದ್ದಾರೆ.

ಬೆಂಗಳೂರು ದಕ್ಷಿಣ ತಾಲೂಕಿನ ಕರಿಕಲ್ ತಾಂಡ್ಯ ನಿವಾಸಿ ಪವನ್​​ಕುಮಾರ್ ಕೆಲಸ ಮುಗಿಸಿ ಊಟಕ್ಕೆ ಹೋಗಿದ್ದಾಗ ಪವನ್ ‌ಮೇಲೆ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಟೋಲ್​ನಿಂದ ಹಿಂಬಾಲಿಸಿಕೊಂಡು ಬಂದು ದುಷ್ಕರ್ಮಿಗಳು ಪವನ್​​ ಹತ್ಯೆಗೈದಿದ್ದಾರೆ. ನಿನ್ನೆ ರಾತ್ರಿ ಹತ್ತು ಗಂಟೆ ಸುಮಾರಿಗೆ ಟೋಲ್ ಬಳಿ ಗಲಾಟೆ ನಡೆದಿತ್ತು. ಬಳಿಕ ರಾತ್ರಿ 12 ಗಂಟೆಗೆ ಕೆಲಸ ಮುಗಿಸಿಕೊಂಡು ಊಟಕ್ಕೆಂದು ಪವನ್ ಹೊರಟ್ಟಿದ್ದ. ಈ ವೇಳೆ ಪವನ್​ನನ್ನು ಹಿಂಬಾಲಿಸಿದ ಯುವಕರು ಆತನ ಮೇಲೆ ಹಾಕಿ ಸ್ಟಿಕ್​ನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಹತ್ಯೆ ಮಾಡಿದ ಆರೋಪಿಗಳಿಗಾಗಿ ಬಿಡದಿ ಪೊಲೀಸರಿಂದ ಹುಡುಕಾಟ ನಡೆಯುತ್ತಿದೆ.

ಇದನ್ನೂ ಓದಿ: ಮದ್ವೆಗೆ 5 ದಿನ ಮೊದಲೇ ಯುವಕನ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮಹಿಳೆಯೊಂದಿಗಿನ ಲವ್ವಿಡವ್ವಿಯೇ ಕಾರಣ

ಮಂಡ್ಯದಲ್ಲಿ ಯುವತಿ ಶವ ಪತ್ತೆ

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಬೂದನೂರು ಕೆರೆಯಲ್ಲಿ ಯುವತಿ ಶವ ಪತ್ತೆಯಾಗಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕುರಹಟ್ಟಿ ಗ್ರಾಮದ ಚಾಂದಿನಿ(22) ಎಂಬ ಯುವತಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾಳೆ. ಕೆರೆಗೆ ಬಿದ್ದು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

ಮೃತ ಚಾಂದಿನಿ ನಿನ್ನೆ ಮಧ್ಯಾಹ್ನ ಯುವಕನ ಜತೆ ಬೈಕ್​ನಲ್ಲಿ ಕೆರೆ ಬಳಿ ಬಂದಿದ್ದಳು. ಕೆಲಕಾಲ ಕೆರೆಯ ಬಳಿ ಕುಳಿತಿರುವುದಾಗಿ ಸ್ಥಳೀಯರಿಂದ ಮಾಹಿತಿ ಸಿಕ್ಕಿದೆ. ಕೆರೆ ದಡದಲ್ಲಿ ಯುವತಿ ಚಪ್ಪಲಿ, ಬ್ಯಾಗ್​ ಪತ್ತೆ ಹಿನ್ನೆಲೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಕೆರೆ ಬಳಿ ಬಿದ್ದ ವಸ್ತುಗಳನ್ನು ನೋಡಿದ ಗ್ರಾಮಸ್ಥರು ಅನುಮಾನದಿಂದ ಪೊಲೀಸರಿಗೆ ಮಾಹಿತಿ ನೀಡಿದ್ದರು. ಯುವತಿ ಚಾಂದಿನಿ ಮೃತದೇಹ ಮೇಲೆತ್ತಿ ಮಿಮ್ಸ್​ಗೆ ಸ್ಥಳಾಂತರ ಮಾಡಲಾಗಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:15 am, Mon, 5 June 23

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?