ನಾನೇನು ಅಂಬರೀಶ್‌ಗೆ ಗುಲಾಮ ಆಗಿದ್ದೆನಾ? ಜನಸಾಮಾನ್ಯರು ಬಂದರೂ ನಾನು ಕೈಕಟ್ಟಿ ನಿಲ್ಲುತ್ತೇನೆ: ಕುಮಾರಸ್ವಾಮಿ ತಿರುಗೇಟು

ಆ ಹೆಣ್ಣು ಮಗಳ ಬಗ್ಗೆ ಚರ್ಚೆ ಮಾಡಬೇಡಿ. ಚುನಾವಣೆ ಬಂದಾಗ ಚರ್ಚೆ ಮಾಡೋಣಾ. ದೇಶದಲ್ಲಿ ಹಲವಾರು ಸಮಸ್ಯೆ ಇದೆ. ಈಗ ಅಂತಹ ಸಮಸ್ಯೆಗಳ ಬಗ್ಗೆ ಚರ್ಚಿಸೋಣ ಎಂದು ಅವರು ಮಾಧ್ಯಮಗಳಿಗೆ ಸ್ವಲ್ಪ ಖಾರವಾಗಿಯೇ ಪ್ರತಿಕ್ರಿಯಿಸಿದ್ದಾರೆ.

ನಾನೇನು ಅಂಬರೀಶ್‌ಗೆ ಗುಲಾಮ ಆಗಿದ್ದೆನಾ? ಜನಸಾಮಾನ್ಯರು ಬಂದರೂ ನಾನು ಕೈಕಟ್ಟಿ ನಿಲ್ಲುತ್ತೇನೆ: ಕುಮಾರಸ್ವಾಮಿ ತಿರುಗೇಟು
ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳ ಜಟಾಪಟಿ
Follow us
| Updated By: guruganesh bhat

Updated on: Jul 08, 2021 | 3:09 PM

ರಾಮನಗರ: ಅಂಬರೀಶ್ ಎದುರು ಮಾಜಿ ಕೈಕಟ್ಟಿ ನಿಂತಿದ್ದ ತಮ್ಮ ಫೋಟೋ ವೈರಲ್ ಆಗುತ್ತಿದ್ದ ವಿಷಯವಾಗಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಮಾಧ್ಯಮಗಳಿಗೆ ಖಾರದ ಪ್ರತಿಕ್ರಿಯೆ ನೀಡಿದ್ದಾರೆ. ನಾನೇನು ಅಂಬರೀಶ್‌ಗೆ ಗುಲಾಮ ಆಗಿದ್ದೆನಾ? ಜನಸಾಮಾನ್ಯರು ಬಂದರೂ ನಾನು ಕೈಕಟ್ಟಿ ನಿಲ್ಲುತ್ತೇನೆ. ದಯವಿಟ್ಟು ಈ ವಿಚಾರವನ್ನು ವೈಭವೀಕರಿಸಬೇಡಿ. ಈ ಮೂಲಕ ಅವರಿಗೆ ಸ್ಕೋಪ್ ಕೊಡಬೇಡಿ. ನಾವು ಜನರ ಮಧ್ಯದಿಂದ ಬಂದಿರುವವರು ಎಂದು ಅವರು ರಾಮನಗರ ತಾಲೂಕಿನ ಕೇತಗಾನಹಳ್ಳಿಯಲ್ಲಿ ಅವರು ತಿರುಗೇಟು ನೀಡಿದ್ದಾರೆ.

ಕೈ ಕಟ್ಟಿ ನಿಂತಿಕೊಂಡಿರುವ ಬಗ್ಗೆ ನನಗೇನು ಲಾಭವಿದೆ? ಎಂದು ಪ್ರಶ್ನಿಸಿರುವ ಅವರು, ಈಗ ರಾಜ್ಯದ ವಿಷಯ ಬಗ್ಗೆ ಚರ್ಚೆ ಮಾಡೋಣ. ಭೃಷ್ಟಾಚಾರದ ವಿಚಾರದಲ್ಲಿ ನಮ್ಮ ದೇವೇಗೌಡರು ಮತ್ತು ಕುಟುಂಬ ಹೋರಾಟ ಮಾಡಿದ್ದೇವೆ. ಈ ವಿಚಾರದಲ್ಲಿ ನಮ್ಮ ಕುಟುಂಬ ರಾಜಿ ಆಗಿಲ್ಲ. ಹಲವಾರು ವಿಚಾರದ ಬಗ್ಗೆ ಚರ್ಚೆ ಮಾಡಿದ್ದೇವೆ. ದಾಖಲೆ ಬಿಡುಗಡೆ ಮಾಡಿದ್ದೇವೆ. ಆ ಹೆಣ್ಣು ಮಗಳ ಬಗ್ಗೆ ಚರ್ಚೆ ಮಾಡಬೇಡಿ. ಚುನಾವಣೆ ಬಂದಾಗ ಚರ್ಚೆ ಮಾಡೋಣಾ. ದೇಶದಲ್ಲಿ ಹಲವಾರು ಸಮಸ್ಯೆ ಇದೆ. ಈಗ ಅಂತಹ ಸಮಸ್ಯೆಗಳ ಬಗ್ಗೆ ಚರ್ಚಿಸೋಣ ಎಂದು ಅವರು ಮಾಧ್ಯಮಗಳಿಗೆ ಸ್ವಲ್ಪ ಖಾರವಾಗಿಯೇ ಪ್ರತಿಕ್ರಿಯಿಸಿದ್ದಾರೆ.

ಕೆಆರ್​ಎಸ್​ ಅಣೆಕಟ್ಟು ಬಿರುಕು ವಿವಾದಕ್ಕೆ ಸಂಬಂಧಿಸಿದಂತೆ ಸಂಸದೆ ಸುಮಲತಾ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ನಡುವಿನ ಜಟಾಪಟಿ ಸಾಮಾಜಿಕ ಜಾಲತಾಣಗಳಲ್ಲೂ ಕಾವು ಪಡೆದಿತ್ತು. ಅಂಬರೀಶ್ ಮುಂದೆ ಕೈಕಟ್ಟಿ ನಿಲ್ಲುತ್ತಿದ್ದವರೆಲ್ಲಾ ಈಗ ಮಾತನಾಡುತ್ತಿದ್ದಾರೆ ಎಂಬ ಸುಮಲತಾ ಹೇಳಿಕೆಯ ಬೆನ್ನಲ್ಲೇ ಅದನ್ನು ಸಾಕ್ಷಿ ಸಮೇತ ಸಾಬೀತುಪಡಿಸುತ್ತಿರುವ ಸುಮಲತಾ ಅಂಬರೀಶ್ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕುಮಾರಸ್ವಾಮಿ ಫೋಟೋ ಒಂದನ್ನು ವೈರಲ್​ ಮಾಡಿದ್ದರು. ಸುಮಲತಾ ಬೆಂಬಲಿಗರ ಸಾಮಾಜಿಕ ಜಾಲತಾಣಗಳ ಪುಟಗಳಲ್ಲಿ ಫೋಟೋವನ್ನು ಹರಿಬಿಡಲಾಗಿದ್ದು, ಕುಮಾರಸ್ವಾಮಿಯವರನ್ನು ಅಪಹಾಸ್ಯ ಮಾಡಲಾಗಿತ್ತು. ಇದೀಗ ವೈರಲ್ ಆದ ಫೋಟೊದ ಬಗ್ಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ತಿರುಗೇಟು ಕೊಟ್ಟ ಹೆಚ್​ಡಿಕೆ ಬೆಂಬಲಿಗರು ಇತ್ತ ಈ ಫೋಟೋ ಮೂಲಕ ಸುಮಲತಾ ಬೆಂಬಲಿಗರು ಜೆಡಿಎಸ್​ ನಾಯಕರಿಗೆ ತಿರುಗೇಟು ಕೊಡುತ್ತಿದ್ದರೆ ಅತ್ತ ಲಿಂಗ ಸಿನಿಮಾದ ಖಳನಾಯಕನಿಗೆ ಸಂಸದೆ ಸುಮಲತಾರನ್ನು ಹೋಲಿಕೆ ಮಾಡಿ ಹೆಚ್​.ಡಿ.ಕುಮಾರಸ್ವಾಮಿ ಬೆಂಬಲಿಗರು ಪೋಸ್ಟ್​ ಒಂದನ್ನು ಹಂಚಿಕೊಂಡಿದ್ದಾರೆ. ಕರ್ನಾಟಕ ಕುಮಾರ ಪಡೆ ಹೆಸರಿನೊಂದಿಗೆ ಸೋಷಿಯಲ್ ಮೀಡಿಯಾದಲ್ಲಿ ಈ ಫೋಸ್ಟ್ ತೇಲಿಬಿಡಲಾಗಿದ್ದು, ಸೂಪರ್ ಸ್ಟಾರ್ ರಜಿನಿಕಾಂತ್ ಅಭಿನಯದ ಲಿಂಗ ಚಿತ್ರದ ಖಳನಾಯಕ ಕೂಡ ಸಂಸದ. ಅದರ ಕತೆಯೂ ಡ್ಯಾಂ ಸುತ್ತಲೂ ನಡೆಯುವುದಾಗಿದ್ದು ಇದರಂತೆಯೇ ಇದೆ ಎಂದು ಗೇಲಿ ಮಾಡಿದ್ದಾರೆ.

ಇದನ್ನೂ ಓದಿ: 

ಹುಲಿ ಮುಂದೆ ಇಲಿಯಂತೆ ನಿಂತವರು ಯಾರು? ಕುಮಾರಸ್ವಾಮಿಯನ್ನು ಅಪಹಾಸ್ಯ ಮಾಡಿದ ಸುಮಲತಾ ಬೆಂಬಲಿಗರು

‘ಸ್ಯಾಂಡಲ್​ವುಡ್​ ಸ್ಮಗ್ಲರ್’​ ಟ್ಯಾಗ್​ ಕೊಟ್ಟು ನನ್ನ ಮತ್ತು ಆದಿಚುಂಚನಗಿರಿ ಮಠಾಧೀಶರ ದೂರವಾಣಿ ಕದ್ದಾಲಿಸಲಾಗಿದೆ: ಸಂಸದೆ ಸುಮಲತಾ ಗಂಭೀರ ಆರೋಪ

(Former CM HD Kumaraswamy reacts on viral photo Am I a slave to Ambarish? Even if the common man come I will stand up)

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು