AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರದಲ್ಲಿ ಮತ್ತೆ ಕಾರ್ಯಕರ್ತರ ಕಿತ್ತಾಟ: ಕಾಂಗ್ರೆಸ್ ಮಾಜಿ ​ಶಾಸಕ ಹೆಚ್​.ಸಿ.ಬಾಲಕೃಷ್ಣ ಕಾರಿನ ಮೇಲೆ ಕಲ್ಲು ತೂರಾಟ

ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ರಾಮನಗರ ಜಿಲ್ಲಾ ರಾಜಕೀಯದಲ್ಲಿ ಒಂದಲ್ಲ ಒಂದು ವಿಚಾರಕ್ಕೆ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆಯುತ್ತಲೇ ಇವೆ.

ರಾಮನಗರದಲ್ಲಿ ಮತ್ತೆ ಕಾರ್ಯಕರ್ತರ ಕಿತ್ತಾಟ: ಕಾಂಗ್ರೆಸ್ ಮಾಜಿ ​ಶಾಸಕ ಹೆಚ್​.ಸಿ.ಬಾಲಕೃಷ್ಣ ಕಾರಿನ ಮೇಲೆ ಕಲ್ಲು ತೂರಾಟ
ಜೆಡಿಎಸ್​ ಮತ್ತು ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಗಲಾಟೆ
Follow us
TV9 Web
| Updated By: ವಿವೇಕ ಬಿರಾದಾರ

Updated on:Nov 02, 2022 | 5:20 PM

ರಾಮನಗರ: ರಾಮನಗರದಲ್ಲಿ ರಾಜಕೀಯ ಪಕ್ಷಗಳ ನಡುವೆ ಕಿತ್ತಾಟ ಜೋರಾಗುತ್ತಿದ್ದು, ಈ ಹಿಂದೆ ಕಾಮಗಾರಿ ಶಂಕುಸ್ಥಾಪನೆ ವಿಚಾರವಾಗಿ ಜೆಡಿಎಸ್​ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ವಿಧಾನ ಪರಿಷತ್​ ಸದಸ್ಯ ಸಿ.ಪಿ ಯೋಗೆಶ್ವರ ಕಾರಿನ ಮೇಲೆ ಜೆಡಿಎಸ್​ ಕಾರ್ಯಕರ್ತರು ಕಲ್ಲು ಎಸೆದಿದ್ದರು. ಈಗ ಮತ್ತೆ ಮಾಗಡಿ ತಾಲೂಕಿನ ಕಾಮಸಾಗರ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ಉದ್ಘಾಟನೆ ವಿಚಾರವಾಗಿ ಜೆಡಿಎಸ್​ ಕಾರ್ಯಕರ್ತರು ಕಾಂಗ್ರೆಸ್ ಮಾಜಿ ​ಶಾಸಕ ಹೆಚ್​.ಸಿ.ಬಾಲಕೃಷ್ಣ ಕಾರಿನ ಮೇಲೆ ಕಲ್ಲು ತೂರಿದ್ದಾರೆ. ಹೌದು ಇಂದು ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಕಾಮಸಾಗರ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ಉದ್ಘಾಟನೆಗೆ ಮಾಜಿ ಕಾಂಗ್ರೆಸ್​ ಶಾಸಕ ಹೆಚ್​.ಸಿ.ಬಾಲಕೃಷ್ಣ ಆಗಮಿಸಿದ್ದರು. ಇದಕ್ಕೆ ಜೆಡಿಎಸ್​ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದರು. ಇನ್ನೂ ಕಾರ್ಯಕ್ರಮದ ಬ್ಯಾನರ್​ನಲ್ಲಿ ಶಾಸಕ ಮಂಜುನಾಥ್ ಹೆಸರು ಕೊನೆಯಲ್ಲಿ ಹಾಕಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿ ಗಲಾಟೆ ಮಾಡಿದ್ದಾರೆ.

ಇದರ ಮಧ್ಯಯೇ ಬಾಲಕೃಷ್ಣ ಕಟ್ಟಡವನ್ನು ಉದ್ಘಾಟಿಸಿ ಕಾರಿನಲ್ಲಿ ವಾಪಸ್​ ಆಗುತ್ತಿರುವಾಗ ಕಾರಿನ ಮೇಲೆ ಜೆಡಿಎಸ್​​ ಕಾರ್ಯಕರ್ತರು ಕಲ್ಲು ತೂರಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಕುದೂರು ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿ ತಿಳಿಗೊಳಸಿದ್ದಾರೆ .

ಗಲಾಟೆಗೆ ಸಚಿವ ಅಶ್ವತ್ಥ್ ನಾರಾಯಣ ಸಂಬಂಧಿ ಶ್ರೀಧರ್​​ ಕಾರಣ

ಈ ಕುರಿತು ಮಾತನಾಡಿದ ಮಾಜಿ ಶಾಸಕ ಹೆಚ್​.ಸಿ.ಬಾಲಕೃಷ್ಣ ಶಿಷ್ಟಾಚಾರ ಪ್ರಕಾರವೇ ಉದ್ಘಾಟನೆ ಕಾರ್ಯಕ್ರಮ ನಡೆದಿದೆ. ಶಿಷ್ಟಾಚಾರ ಉಲ್ಲಂಘನೆ ಎಂದು ಆರೋಪಿಸಿ ಗಲಾಟೆ ಮಾಡಿದ್ದಾರೆ. ಗಲಾಟೆಗೆ ಸಚಿವ ಅಶ್ವತ್ಥ್ ನಾರಾಯಣ ಸಂಬಂಧಿ ಶ್ರೀಧರ್​​ ಕಾರಣ. ಶ್ರೀಧರ್​ ತನ್ನ ಪಟಾಲಂ ಕಟ್ಟಿಕೊಂಡು ಬಂದು ಗಲಾಟೆ ಮಾಡಿದ್ದಾನೆ. ಗಲಾಟೆ ಮಾಡಿದವರು ಕಾಂಗ್ರೆಸ್, ಜೆಡಿಎಸ್​ನವರ ಅಲ್ಲ ಬದಲಿಗೆ ಬಿಜೆಪಿ ಕಡೆಯವರು ಗಲಾಟೆ ಮಾಡಿದ್ದಾರೆ. ನಮ್ಮ ಕಾರಿನ ಮೇಲೂ ಕಲ್ಲು ಎಸೆದಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:54 pm, Wed, 2 November 22

ರಾಜಾ ರಘುವಂಶಿ ಹನಿಮೂನ್​ಗೆಂದು ಮನೆಯಿಂದ ಹೊರಟ ವಿಡಿಯೋ
ರಾಜಾ ರಘುವಂಶಿ ಹನಿಮೂನ್​ಗೆಂದು ಮನೆಯಿಂದ ಹೊರಟ ವಿಡಿಯೋ
ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ರಸ್ತೆ ಮೇಲೆ 15 ಅಡಿ ನೀರು
ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ರಸ್ತೆ ಮೇಲೆ 15 ಅಡಿ ನೀರು
ಸ್ವಚ್ಛ ಬೆಂಗಳೂರು ಕಾರ್ಯಕ್ರಮ ಶೀಘ್ರದಲ್ಲಿ ಜಾರಿಗೊಳ್ಳಲಿದೆ: ಶಿವಕುಮಾರ್
ಸ್ವಚ್ಛ ಬೆಂಗಳೂರು ಕಾರ್ಯಕ್ರಮ ಶೀಘ್ರದಲ್ಲಿ ಜಾರಿಗೊಳ್ಳಲಿದೆ: ಶಿವಕುಮಾರ್
ನೈಟ್ ರೈಡರ್ಸ್ ವಿರುದ್ಧ 11 ರನ್​ಗಳಿಂದ ಗೆದ್ದ ಗ್ಲೆನ್ ಮ್ಯಾಕ್ಸ್​ವೆಲ್..!
ನೈಟ್ ರೈಡರ್ಸ್ ವಿರುದ್ಧ 11 ರನ್​ಗಳಿಂದ ಗೆದ್ದ ಗ್ಲೆನ್ ಮ್ಯಾಕ್ಸ್​ವೆಲ್..!
ಉಡುಪಿ: ಶರವೇಗದ ನದಿಯಲ್ಲಿ ದೋಣಿ ನಡೆಸುವ ಧೀರ ಮಹಿಳೆ, ವಿಡಿಯೋ ನೋಡಿ
ಉಡುಪಿ: ಶರವೇಗದ ನದಿಯಲ್ಲಿ ದೋಣಿ ನಡೆಸುವ ಧೀರ ಮಹಿಳೆ, ವಿಡಿಯೋ ನೋಡಿ
ಯುವಮುಖಂಡರನ್ನು ಸೆಳೆಯುವಲ್ಲಿ ಈಶ್ವರಪ್ಪ ವಿಫಲರಾದಂತೆ ಕಾಣಿಸುತ್ತದೆ
ಯುವಮುಖಂಡರನ್ನು ಸೆಳೆಯುವಲ್ಲಿ ಈಶ್ವರಪ್ಪ ವಿಫಲರಾದಂತೆ ಕಾಣಿಸುತ್ತದೆ
ನಮ್ಮಿಂದ ಆದ ಅಗೌರವವನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು; ನಾಗಶೇಖರ್
ನಮ್ಮಿಂದ ಆದ ಅಗೌರವವನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು; ನಾಗಶೇಖರ್
ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು: ಮಂಗಳೂರಿನ ಎಲ್ಲಾ ಬೀಚ್​ಗಳಿಗೆ ನಿರ್ಬಂಧ
ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು: ಮಂಗಳೂರಿನ ಎಲ್ಲಾ ಬೀಚ್​ಗಳಿಗೆ ನಿರ್ಬಂಧ
‘ಥಗ್ ಲೈಫ್’ ಬಿಡುಗಡೆ ಆದರೆ, ಪರೋಕ್ಷ ಎಚ್ಚರಿಕೆ ಕೊಟ್ಟ ಪ್ರವೀಣ್ ಶೆಟ್ಟಿ
‘ಥಗ್ ಲೈಫ್’ ಬಿಡುಗಡೆ ಆದರೆ, ಪರೋಕ್ಷ ಎಚ್ಚರಿಕೆ ಕೊಟ್ಟ ಪ್ರವೀಣ್ ಶೆಟ್ಟಿ
ಗೋಲ್ಡ್ ಸುರೇಶ್ ವಿರುದ್ಧ ಲಕ್ಷ ಲಕ್ಷ ವಂಚನೆ ಮಾಡಿದ ಆರೋಪ
ಗೋಲ್ಡ್ ಸುರೇಶ್ ವಿರುದ್ಧ ಲಕ್ಷ ಲಕ್ಷ ವಂಚನೆ ಮಾಡಿದ ಆರೋಪ