AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರದಲ್ಲಿ ಮತ್ತೆ ಕಾರ್ಯಕರ್ತರ ಕಿತ್ತಾಟ: ಕಾಂಗ್ರೆಸ್ ಮಾಜಿ ​ಶಾಸಕ ಹೆಚ್​.ಸಿ.ಬಾಲಕೃಷ್ಣ ಕಾರಿನ ಮೇಲೆ ಕಲ್ಲು ತೂರಾಟ

ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ರಾಮನಗರ ಜಿಲ್ಲಾ ರಾಜಕೀಯದಲ್ಲಿ ಒಂದಲ್ಲ ಒಂದು ವಿಚಾರಕ್ಕೆ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆಯುತ್ತಲೇ ಇವೆ.

ರಾಮನಗರದಲ್ಲಿ ಮತ್ತೆ ಕಾರ್ಯಕರ್ತರ ಕಿತ್ತಾಟ: ಕಾಂಗ್ರೆಸ್ ಮಾಜಿ ​ಶಾಸಕ ಹೆಚ್​.ಸಿ.ಬಾಲಕೃಷ್ಣ ಕಾರಿನ ಮೇಲೆ ಕಲ್ಲು ತೂರಾಟ
ಜೆಡಿಎಸ್​ ಮತ್ತು ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಗಲಾಟೆ
TV9 Web
| Edited By: ವಿವೇಕ ಬಿರಾದಾರ|

Updated on:Nov 02, 2022 | 5:20 PM

Share

ರಾಮನಗರ: ರಾಮನಗರದಲ್ಲಿ ರಾಜಕೀಯ ಪಕ್ಷಗಳ ನಡುವೆ ಕಿತ್ತಾಟ ಜೋರಾಗುತ್ತಿದ್ದು, ಈ ಹಿಂದೆ ಕಾಮಗಾರಿ ಶಂಕುಸ್ಥಾಪನೆ ವಿಚಾರವಾಗಿ ಜೆಡಿಎಸ್​ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ವಿಧಾನ ಪರಿಷತ್​ ಸದಸ್ಯ ಸಿ.ಪಿ ಯೋಗೆಶ್ವರ ಕಾರಿನ ಮೇಲೆ ಜೆಡಿಎಸ್​ ಕಾರ್ಯಕರ್ತರು ಕಲ್ಲು ಎಸೆದಿದ್ದರು. ಈಗ ಮತ್ತೆ ಮಾಗಡಿ ತಾಲೂಕಿನ ಕಾಮಸಾಗರ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ಉದ್ಘಾಟನೆ ವಿಚಾರವಾಗಿ ಜೆಡಿಎಸ್​ ಕಾರ್ಯಕರ್ತರು ಕಾಂಗ್ರೆಸ್ ಮಾಜಿ ​ಶಾಸಕ ಹೆಚ್​.ಸಿ.ಬಾಲಕೃಷ್ಣ ಕಾರಿನ ಮೇಲೆ ಕಲ್ಲು ತೂರಿದ್ದಾರೆ. ಹೌದು ಇಂದು ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಕಾಮಸಾಗರ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ಉದ್ಘಾಟನೆಗೆ ಮಾಜಿ ಕಾಂಗ್ರೆಸ್​ ಶಾಸಕ ಹೆಚ್​.ಸಿ.ಬಾಲಕೃಷ್ಣ ಆಗಮಿಸಿದ್ದರು. ಇದಕ್ಕೆ ಜೆಡಿಎಸ್​ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದರು. ಇನ್ನೂ ಕಾರ್ಯಕ್ರಮದ ಬ್ಯಾನರ್​ನಲ್ಲಿ ಶಾಸಕ ಮಂಜುನಾಥ್ ಹೆಸರು ಕೊನೆಯಲ್ಲಿ ಹಾಕಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿ ಗಲಾಟೆ ಮಾಡಿದ್ದಾರೆ.

ಇದರ ಮಧ್ಯಯೇ ಬಾಲಕೃಷ್ಣ ಕಟ್ಟಡವನ್ನು ಉದ್ಘಾಟಿಸಿ ಕಾರಿನಲ್ಲಿ ವಾಪಸ್​ ಆಗುತ್ತಿರುವಾಗ ಕಾರಿನ ಮೇಲೆ ಜೆಡಿಎಸ್​​ ಕಾರ್ಯಕರ್ತರು ಕಲ್ಲು ತೂರಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಕುದೂರು ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿ ತಿಳಿಗೊಳಸಿದ್ದಾರೆ .

ಗಲಾಟೆಗೆ ಸಚಿವ ಅಶ್ವತ್ಥ್ ನಾರಾಯಣ ಸಂಬಂಧಿ ಶ್ರೀಧರ್​​ ಕಾರಣ

ಈ ಕುರಿತು ಮಾತನಾಡಿದ ಮಾಜಿ ಶಾಸಕ ಹೆಚ್​.ಸಿ.ಬಾಲಕೃಷ್ಣ ಶಿಷ್ಟಾಚಾರ ಪ್ರಕಾರವೇ ಉದ್ಘಾಟನೆ ಕಾರ್ಯಕ್ರಮ ನಡೆದಿದೆ. ಶಿಷ್ಟಾಚಾರ ಉಲ್ಲಂಘನೆ ಎಂದು ಆರೋಪಿಸಿ ಗಲಾಟೆ ಮಾಡಿದ್ದಾರೆ. ಗಲಾಟೆಗೆ ಸಚಿವ ಅಶ್ವತ್ಥ್ ನಾರಾಯಣ ಸಂಬಂಧಿ ಶ್ರೀಧರ್​​ ಕಾರಣ. ಶ್ರೀಧರ್​ ತನ್ನ ಪಟಾಲಂ ಕಟ್ಟಿಕೊಂಡು ಬಂದು ಗಲಾಟೆ ಮಾಡಿದ್ದಾನೆ. ಗಲಾಟೆ ಮಾಡಿದವರು ಕಾಂಗ್ರೆಸ್, ಜೆಡಿಎಸ್​ನವರ ಅಲ್ಲ ಬದಲಿಗೆ ಬಿಜೆಪಿ ಕಡೆಯವರು ಗಲಾಟೆ ಮಾಡಿದ್ದಾರೆ. ನಮ್ಮ ಕಾರಿನ ಮೇಲೂ ಕಲ್ಲು ಎಸೆದಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:54 pm, Wed, 2 November 22

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!