ಕೊನೆಗೂ ತಂದೆಯ ಆ ಒಂದು ಆಸೆ ಈಡೇರಿಸಿದ ಡಿಕೆಶಿ: ಅಷ್ಟಕ್ಕೂ ಕೆಂಪೇಗೌಡರ ಬಯಕೆ ಏನಾಗಿತ್ತು?

ಡಿ.ಕೆ. ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ ಆಗುತ್ತಿರುವುದಕ್ಕೆ ಅವರ ಹುಟ್ಟೂರು ಬೆಂಗಳೂರು ದಕ್ಷಿಣದ ದೊಡ್ಡ ಆಲಹಳ್ಳಿಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ತಮ್ಮ ಮಗ ಸಿಎಂ ಆಗಬೇಕೆಂಬ ತಂದೆ ಕೆಂಪೇಗೌಡರ ಕನಸನ್ನು ಡಿಕೆಶಿ ನನಸು ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ. ಆ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

ಕೊನೆಗೂ ತಂದೆಯ ಆ ಒಂದು ಆಸೆ ಈಡೇರಿಸಿದ ಡಿಕೆಶಿ: ಅಷ್ಟಕ್ಕೂ ಕೆಂಪೇಗೌಡರ ಬಯಕೆ ಏನಾಗಿತ್ತು?
ಡಿಕೆಶಿ ಕುರಿತು ಮಾಹಿತಿ ನೀಡಿದ ಶಿವಶಂಕರ್‌ ಶರ್ಮಾ
Image Credit source: Tv9 Kannada
Edited By:

Updated on: Jun 02, 2026 | 6:50 PM

ಬೆಂಗಳೂರು ದಕ್ಷಿಣ (ರಾಮನಗರ), ಜೂನ್​​ 02: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ (DK Shivakumar)​​ ನಾಳೆ (ಜೂ.03) ಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನೆಲೆ ಅವರ ಹುಟ್ಟೂರು ದೊಡ್ಡ ಆಲಹಳ್ಳಿಯಲ್ಲಿ ಸಂಭ್ರಮ ಮನೆಮಾಡಿದೆ. ಈ ಕುರಿತು ಟಿವಿ9 ಜೊತೆ ಮಾತನಾಡಿರುವ ಗ್ರಾಮದ ಹಿರಿಯ ಮುಖಂಡ ಶಿವಶಂಕರ್‌ ಶರ್ಮಾ, ಡಿಕೆಶಿ ಗುಣಗಾನ ಮಾಡಿದ್ದಾರೆ. ಡಿ.ಕೆ. ಶಿವಕುಮಾರ್ ಅವರ ತಂದೆ ದೊಡ್ಡಲಹಳ್ಳಿ ಕೆಂಪೇಗೌಡರಿಗೆ ತಮ್ಮ ಮಗ ಒಂದು ದಿನ ಮುಖ್ಯಮಂತ್ರಿಯಾಗುವುದನ್ನು ನೋಡಬೇಕು ಎಂಬ ಆಸೆ ಇತ್ತು. ಅದನ್ನೀಗ ಡಿಕೆಶಿ ತಮ್ಮ ಪರಿಶ್ರಮದಿಂದ ನನಸಾಗಿಸಿಸುತ್ತಿದ್ದಾರೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

‘ಮುತ್ತಾತನಂತೆ ಡಿಕೆಶಿಗೂ ಧೈರ್ಯ’

ಡಿಕೆಶಿ ಅವರ ಮುತ್ತಾತ ಚಿ.ಕೆಂಪೇಗೌಡ ಅವರು ಅತ್ಯಂತ ಶಕ್ತಿಶಾಲಿ ವ್ಯಕ್ತಿ ಆಗಿದ್ದರು. ಅವರ ಧೈರ್ಯ,ಕೆಚ್ಚು, ಎದೆಗಾರಿಕೆ ಮತ್ತು ಸಂವಾದ ಕೌಶಲ್ಯಗಳು ಡಿ.ಕೆ. ಶಿವಕುಮಾರ್ ಅವರಿಗೂ ಬಂದಿವೆ. ಬದ್ಧತೆಗೆ ಮತ್ತೊಂದು ಹೆಸರು ಡಿ.ಕೆ. ಶಿವಕುಮಾರ್ ಆಗಿದ್ದು, ಹಿಡಿದ ಕೆಲಸವನ್ನು ಸಾಧಿಸುವ ಛಲ ಅವರಲ್ಲಿದೆ ಎಂದು ಶಿವಶಂಕರ್‌ ಶರ್ಮಾ ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ವ ಧರ್ಮ ಸ್ವಾಮೀಜಿಗಳ ಸಮ್ಮುಖದಲ್ಲಿ ಪೂರ್ವಾಭಿಮುಖವಾಗಿ ಪ್ರಮಾಣವಚನ ಸ್ವೀಕರಿಸಲಿರುವ ಡಿಕೆಶಿ

ಜಿಲ್ಲಾ ಪಂಚಾಯತ್ ಸದಸ್ಯನಾಗಿ ಆರಂಭವಾದ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಜೀವನ ಶಾಸಕ, ಸಚಿವ, ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಹುದ್ದೆಗಳನ್ನು ದಾಟಿ ಇದೀಗ ಮುಖ್ಯಮಂತ್ರಿ ಸ್ಥಾನಕ್ಕೆ ಏರಿದೆ. ಈ ಪಯಣದಲ್ಲಿ ಡಿಕೆಶಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆದಿದ್ದಾರೆ. ಹತ್ತಿರದಿಂದ ನೋಡಿದವರಿಗೆ ಮಾತ್ರ ಡಿಕೆಶಿ ಏನೆಂಬುದು ಗೊತ್ತು. ಕಷ್ಟ ಎಂದು ಊರವರು ತೆರಳಿದಾಗೆಲ್ಲ ಅವರು ನೆರವಿಗೆ ನಿಂತಿದ್ದಾರೆ ಎಂದು ಶರ್ಮಾ ಹೇಳಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 6:39 pm, Tue, 2 June 26

Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
Follow Us