AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನಕಪುರದಲ್ಲೂ ಗ್ಯಾಂಗ್ ವಾರ್ ಆತಂಕ: ವ್ಯಕ್ತಿಯ ಕೊಲ್ಲಲು ಹೋಗಿ ಆತನ‌ ತಂದೆ‌ಯನ್ನೇ ಕೊಲೆ ಮಾಡಿದ ಗ್ಯಾಂಗ್

ಇತ್ತೀಚೆಗಷ್ಟೇ ಉಡುಪಿಯಲ್ಲಿ ನಡೆದಿದ್ದ ಗ್ಯಾಂಗ್ ವಾರ್​​ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ಜನರಲ್ಲಿ ಭೀತಿ ಸೃಷ್ಟಿಸಿತ್ತು. ಅದಾಗಿ ಕೆಲವೇ ದಿನಗಳಲ್ಲಿ ಕನಕಪುರದಲ್ಲಿಯೂ ಗ್ಯಾಂಗ್​ ವಾರ್ ಆತಂಕ ಸೃಷ್ಟಿಯಾಗಿದೆ. ಗ್ಯಾಂಗ್​ ಒಂದು ವ್ಯಕ್ತಿಯೊಬ್ಬನ ಹತ್ಯೆಗೆಂದು ತೆರಳಿ ಆತನ ತಂದೆಯನ್ನೇ ಹತ್ಯೆ ಮಾಡಿದ ಘಟನೆ ಕನಕಪುರ ಪಟ್ಟಣದ ‌ಕುರುಪೇಟೆಯ ಮಾಧವನಗರದಲ್ಲಿ ನಡೆದಿದೆ.

ಕನಕಪುರದಲ್ಲೂ ಗ್ಯಾಂಗ್ ವಾರ್ ಆತಂಕ: ವ್ಯಕ್ತಿಯ ಕೊಲ್ಲಲು ಹೋಗಿ ಆತನ‌ ತಂದೆ‌ಯನ್ನೇ ಕೊಲೆ ಮಾಡಿದ ಗ್ಯಾಂಗ್
ಕನಕಪುರದಲ್ಲೂ ಗ್ಯಾಂಗ್ ವಾರ್ ಆತಂಕ: ವ್ಯಕ್ತಿಯ ಕೊಲ್ಲಲು ಹೋಗಿ ಆತನ‌ ತಂದೆ‌ಯನ್ನೇ ಕೊಲೆ ಮಾಡಿದ ಗ್ಯಾಂಗ್
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: May 29, 2024 | 9:05 AM

Share

ರಾಮನಗರ, ಮೇ 29: ಅವರೆಲ್ಲಾ ಮೊದಲು ಸ್ನೇಹಿತರಾಗಿದ್ದವರು. ‌ಬರ್ತ್​​​ಡೇ ಪಾರ್ಟಿ ವಿಚಾರಕ್ಕೆ ಜಗಳವಾಡಿ ಒಬ್ಬ ಜೈಲಿಗೂ ಹೋಗಿದ್ದ. ಜೈಲಿನಿಂದ ಬಿಡುಗಡೆ ಆಗಿದ್ದೇ ತಡ ಆತನನ್ನು ಮುಗಿಸಿಯೇ ಬಿಡೋಣ ಅಂತ ಹೋಗಿದ್ದ ಗ್ಯಾಂಗ್, ಆತನ ಬಿಟ್ಟು ಅವನ‌ ತಂದೆಯನ್ನೇ ಮುಗಿಸಿರುವ ವಿಲಕ್ಷಣ ವಿದ್ಯಮಾನ ರಾಮನಗರ (Ramanagara) ಜಿಲ್ಲೆ ಕನಕಪುರ (Kanakapura) ಪಟ್ಟಣದ ‌ಕುರುಪೇಟೆಯ ಮಾಧವನಗರದಲ್ಲಿ ನಡೆದಿದೆ. ಘಟನೆಯಿಂದ ಇದೀಗ ಇಡೀ ಕನಕಪುರ ಬೆಚ್ಚಿ ಬಿದ್ದಿದೆ.‌ ಈ ನಡುವೆ ಕನಕಪುರದಲ್ಲಿ ಪುಡಿ ರೌಡಿಗಳ ಅಟ್ಟಹಾಸ‌‌ ಹೆಚ್ಚಾಗಿದ್ದು ಸಾರ್ವಜನಿಕರು ಭಯಭೀತರಾಗುವಂತಾಗಿದೆ. ಹಳೇ ದ್ವೇಷಕ್ಕೆ ಮಗನನ್ನು ಕೊಲ್ಲಲು ತೆರಳಿದ್ದ ಗ್ಯಾಂಗ್, ಮಗ ಇರದ ಕಾರಣ ತಂದೆಯನ್ನೇ ಹೊಡೆದು ಕೊಂದ ಘಟನೆ ಇಡೀ ಕನಕಪುರ ಪಟ್ಟಣವನ್ನು ಆತಂಕಕ್ಕೀಡು ಮಾಡಿದೆ.

ಕನಕಪುರ ಪಟ್ಟಣದ‌ ನಲವತ್ತೈದು ವರ್ಷದ ಗುಂಡ್ಯಯ್ಯ ಕೊಲೆಯಾದ ವ್ಯಕ್ತಿ. ತನ್ನ ಮಗನನ್ನು ಕೊಲ್ಲಲ್ಲು ಬಂದ ಗ್ಯಾಂಗ್ ಬಳಿ ಮಗನ ಪರ ವಹಿಸಿಕೊಂಡು ಮಾತನಾಡಿದಕ್ಕೆ ಅರುಣ್ ಎಂಬ ವ್ಯಕ್ತಿ ರಾಡಿನಿಂದ ಹಲ್ಲೆ ಮಾಡಿದ್ದಾನೆ. ತಲೆಗೆ ಬಲವಾದ ಪೆಟ್ಟು ಬಿದ್ದ ಕಾರಣ ಗುಂಡ್ಯಯ್ಯ ಸ್ಥಳದಲ್ಲೇ ಮೃತಪಟ್ಟಿದ್ದು, ಮಗನ ದ್ವೇಷವನ್ನು ಅಪ್ಪನ‌ಮೇಲೆ ತೀರಿಸಿಕೊಂಡ ಗ್ಯಾಂಗ್ ಅಲ್ಲಿಂದ ಪರಾರಿ ಆಗಿತ್ತು. ಈ ಬಗ್ಗೆ ರಾಮನಗರ ಎಸ್​ಪಿ ಕಾರ್ತಿಕ್ ರೆಡ್ಡಿ ಮಾಹಿತಿ ನೀಡಿದ್ದಾರೆ.

ನಡೆದಿದ್ದೇನು?

ಏಪ್ರಿಲ್ ತಿಂಗಳಲ್ಲಿ ಅರುಣ್ ಬರ್ತ್ ಡೇ ಇತ್ತು. ಇದೇ ವಿಚಾರವಾಗಿ ಅರುಣ್ ಹಾಗೂ ಗುಂಡಯ್ಯನ ಹಿರಿಯ ಮಗ ರುದ್ರೇಶ್ ನಡುವೆ ಕಿರಿಕ್ ಆಗಿತ್ತು. ನಂತರ ಅರುಣ್​​ಗೆ ಹಲ್ಲೆ ಮಾಡಿ, ಚಾಕು ಇರಿದು ರುದ್ರೇಶ ಜೈಲುಪಾಲಾಗಿದ್ದ. ಕಳೆದ ಶನಿವಾರವಷ್ಟೇ ಜಾಮೀನು ಪಡೆದು ಆಚೆ ಬಂದಿದ್ದ ರುದ್ರೇಶ್ ಮೇಲೆ ಸೇಡು ತೀರಿಸಿಕೊಳ್ಳಲು ಅರುಣ್ ಅಂಡ್ ಟೀಂ ಮಹೂರ್ತ ಇಟ್ಟಿತ್ತು.‌ ಅದರಂತೆ ಸೋಮವಾರ ರಾತ್ರಿ ಮನೆಗೆ ತೆರಳಿದ್ದ ಅರುಣ್ ಮತ್ತು ಇಬ್ಬರು, ರುದ್ರೇಶ ಇಲ್ಲದ‌ ಕಾರಣ ತಂದೆಯನ್ನೇ ಹೊಡೆದು ಸಾಯಿಸಿದೆ.

ಮೃತ ವ್ಯಕ್ತಿ ಗುಂಡ್ಯಯ್ಯ ನಿವಾಸದ ಹೊರಗೆ ಕುಟುಂಬಸ್ಥರ ಆಕ್ರಂದನ

ಇದನ್ನೂ ಓದಿ: ಉಡುಪಿಯಲ್ಲಿ ಮೇ 18ರಂದು ನಡೆದ ಭಯಾನಕ ಗ್ಯಾಂಗ್​ವಾರ್ ದೃಶ್ಯಗಳು ಲಭ್ಯ, ಸೆರೆ ಸಿಕ್ಕಿರುವ ಇಬ್ಬರು

ಸದ್ಯ ಪ್ರಮುಖ ಆರೋಪಿ ಅರುಣ್ ಹಾಗೂ ಇಬ್ಬರನ್ನು ವಶಕ್ಕೆ ಪಡೆದಿರುವ ಕನಕಪುರ ಪೊಲೀಸರು ಗ್ಯಾಂಗ್ ವಾರ್ ಆಗದಂತೆ ಎಲ್ಲೆಡೆ ಕಟ್ಟೆಚ್ಚರ ವಹಿಸಿದ್ದಾರೆ.‌ ಸದ್ಯ ರುದ್ರೇಶ ಕೂಡ ತನಗೆ ಜೀವ ಭಯ ಇದ್ದು ರಕ್ಷಣೆ ಕೋರಿ ಪೊಲೀಸರಿಗೆ ದೂರು ನೀಡಿದ್ದಾನೆ.‌ ಪ್ರಕರಣ ದಾಖಲಿಸಿಕೊಂಡಿರುವ ಕನಕಪುರ ಟೌನ್ ಪೊಲೀಸರು ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ