Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಗ್ರೇಸ್ ಕಮ್ಯೂನಿಟಿ ಚರ್ಚ್​ಗೆ ಬೆಂಕಿ, ಸುಟ್ಟು ಕರಕಲಾದ ಪ್ರಾರ್ಥನಾ ಪರಿಕರ, ಶಿಲುಬೆ, ಏಸುವಿನ ಮೂರ್ತಿ

ಮಂಡ್ಯ, ರಾಮನಗರದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ರಾಮನಗರದಲ್ಲಿ ಗ್ರೇಸ್ ಕಮ್ಯೂನಿಟಿ ಚರ್ಚ್​ ಬೆಂಕಿಗೆ ಆಹುತಿಯಾಗಿದೆ. ಪ್ರಾರ್ಥನಾ ಪರಿಕರ ಶಿಲುಬೆ ಸೇರಿದಂತೆ ಏಸುವಿನ ಮೂರ್ತಿ ಸುಟ್ಟ ಕರಕಲಾಗಿದೆ. ಇನ್ನು ಮಂಡ್ಯ ತಾಲೂಕಿನ ತೂಬಿನಕೆರೆ ಕೈಗಾರಿಕಾ ಪ್ರವೇಶದಲ್ಲಿ ಮುಂಜಾನೆ 4 ಗಂಟೆ ಸುಮಾರಿಗೆ ಬೆಲ್ಟ್​ ಕಾರ್ಖಾನೆಗೆ ಬೆಂಕಿ ಬಿದ್ದಿದೆ.

ರಾಮನಗರ: ಗ್ರೇಸ್ ಕಮ್ಯೂನಿಟಿ ಚರ್ಚ್​ಗೆ ಬೆಂಕಿ, ಸುಟ್ಟು ಕರಕಲಾದ ಪ್ರಾರ್ಥನಾ ಪರಿಕರ, ಶಿಲುಬೆ, ಏಸುವಿನ ಮೂರ್ತಿ
ಗ್ರೇಸ್ ಕಮ್ಯೂನಿಟಿ ಚರ್ಚ್​ಗೆ ಬೆಂಕಿ, ಸುಟ್ಟು ಕರಕಲಾದ ಪ್ರಾರ್ಥನಾ ಪರಿಕರ, ಶಿಲುಬೆ, ಏಸುವಿನ ಮೂರ್ತಿ
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ಆಯೇಷಾ ಬಾನು

Updated on:Mar 03, 2024 | 11:44 AM

ರಾಮನಗರ, ಮಾರ್ಚ್.03: ರಾಮನಗರ (Ramanagara) ಪಟ್ಟಣದ ಗ್ರೇಸ್ ಕಮ್ಯೂನಿಟಿ ಚರ್ಚ್​ ಬೆಂಕಿಗೆ (Church Fire) ಆಹುತಿಯಾಗಿದೆ. ಸುಟ್ಟ ಚರ್ಚ್ ನೋಡಿ ಭಕ್ತರು ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟಿದ್ದಾರೆ. ಚರ್ಚ್​ಗೆ ಕಿಡಿಗೇಡಿಗಳು ಬೆಂಕಿ ಹಾಕಿರುವ ಆರೋಪ ಕೇಳಿ ಬಂದಿದೆ. ಬೆಂಕಿ ಅವಘಡದಿಂದ ಪ್ರಾರ್ಥನಾ ಪರಿಕರ ಶಿಲುಬೆ ಸೇರಿದಂತೆ ಏಸುವಿನ ಮೂರ್ತಿ ಕೂಡ ಸುಟ್ಟು ಹೋಗಿದೆ. ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಲು ಚರ್ಚ್ ಸಿಬ್ಬಂದಿ ಮನವಿ ಮಾಡಿದ್ದಾರೆ.

ಪ್ರತಿ ರವಿವಾರ ನಡೆಯುತ್ತಿದ್ದ ಸಾಮೂಹಿಕ‌ ಪ್ರಾರ್ಥನೆಯನ್ನು ಸಲ್ಲಿಸಲು ಬಂದ ಭಕ್ತರು ಸುಟ್ಟ ಚರ್ಚ್ ನೋಡಿ ಕಣ್ಣೀರಿಟ್ಟಿದ್ದಾರೆ. ಶುಕ್ರವಾರದಂದೇ ಚರ್ಚ್​ಗೆ ಕಿಡಿಗೇಡಿಗು ಬೆಂಕಿ ಹಚ್ಚಿದ್ದಾರೆ ಎಂದು ಕಿಡಿಕಾರಿದ್ದಾರೆ. ಕಿಡಿಗೇಡಿಗಳ ಮೇಲೆ ಕ್ರಮ ವಹಿಸುವಂತೆ ಚರ್ಚ್ ಸಿಬ್ಬಂದಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ. ಚರ್ಚ್ ಸುಟ್ಟು ಹೋಗಿರುವ ವಿಡಿಯೋ ಟ್ಯಾಗ್ ಮಾಡಿ ಮನವಿ ಮಾಡಿದ್ದಾರೆ. ಘಟನೆ ಸಂಬಂಧ ರಾಮನಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚರ್ಚ್​ಗೆ ಹೇಗೆ ಬೆಂಕಿ ಬಿತ್ತು‌ ಎಂಬ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ರಾಮೇಶ್ವರಂ ಕೆಫೆ ಬ್ಲಾಸ್ಟ್​: ಉದ್ಯಮದಲ್ಲಿ ಬೆಳವಣಿಗೆ, ಬೆಂಗಳೂರು ಅನ್​ಸೇಫ್​ ಅಂತ ಸೃಷ್ಟಿಸಲು ಈ ರೀತಿ ಮಾಡಿರಬಹುದು; ಪರಮೇಶ್ವರ್​​

ಶಾರ್ಟ್ ಸರ್ಕ್ಯೂಟ್​​ನಿಂದ ಬೆಲ್ಟ್ ತಯಾರಿಕಾ ಕಾರ್ಖಾನೆಗೆ ಬೆಂಕಿ

ಇನ್ನು ಮತ್ತೊಂದೆಡೆ ಮಂಡ್ಯ ತಾಲೂಕಿನ ತೂಬಿನಕೆರೆ ಕೈಗಾರಿಕಾ ಪ್ರವೇಶದಲ್ಲಿ ಮುಂಜಾನೆ 4 ಗಂಟೆ ಸುಮಾರಿಗೆ ಬೆಲ್ಟ್​ ಕಾರ್ಖಾನೆಗೆ ಬೆಂಕಿ ಬಿದ್ದಿದೆ. ಶಾರ್ಟ್ ಸರ್ಕ್ಯೂಟ್​​ನಿಂದ ಬೆಲ್ಟ್ ತಯಾರಿಕಾ ಕಾರ್ಖಾನೆಗೆ ಬೆಂಕಿ ತಗುಲಿದೆ. ಬೆಂಕಿಯ ಕೆನ್ನಾಲಿಗೆಗೆ ಬೆಲ್ಟ್ ಫ್ಯಾಕ್ಟರಿ ಹೊತ್ತಿ ಉರಿದಿದೆ. ಇಡೀ ಕಾರ್ಖಾನೆ ಬೆಂಕಿಗೆ ಆಹುತಿಯಾಗಿದೆ.

ತೂಬಿನಕೆರೆ ಗ್ರಾಮದ ಕೈಗಾರಿಕಾ ಪ್ರವೇಶದಲ್ಲಿರುವ ಪ್ಲೇಕಾನ್ ಹೆಸರಿನ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಸದ್ಯ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ‌ ನಂದಿಸುವ ಕಾರ್ಯ ಮಾಡಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:43 am, Sun, 3 March 24

ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?