AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಗ್ರೇಸ್ ಕಮ್ಯೂನಿಟಿ ಚರ್ಚ್​ಗೆ ಬೆಂಕಿ, ಸುಟ್ಟು ಕರಕಲಾದ ಪ್ರಾರ್ಥನಾ ಪರಿಕರ, ಶಿಲುಬೆ, ಏಸುವಿನ ಮೂರ್ತಿ

ಮಂಡ್ಯ, ರಾಮನಗರದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ರಾಮನಗರದಲ್ಲಿ ಗ್ರೇಸ್ ಕಮ್ಯೂನಿಟಿ ಚರ್ಚ್​ ಬೆಂಕಿಗೆ ಆಹುತಿಯಾಗಿದೆ. ಪ್ರಾರ್ಥನಾ ಪರಿಕರ ಶಿಲುಬೆ ಸೇರಿದಂತೆ ಏಸುವಿನ ಮೂರ್ತಿ ಸುಟ್ಟ ಕರಕಲಾಗಿದೆ. ಇನ್ನು ಮಂಡ್ಯ ತಾಲೂಕಿನ ತೂಬಿನಕೆರೆ ಕೈಗಾರಿಕಾ ಪ್ರವೇಶದಲ್ಲಿ ಮುಂಜಾನೆ 4 ಗಂಟೆ ಸುಮಾರಿಗೆ ಬೆಲ್ಟ್​ ಕಾರ್ಖಾನೆಗೆ ಬೆಂಕಿ ಬಿದ್ದಿದೆ.

ರಾಮನಗರ: ಗ್ರೇಸ್ ಕಮ್ಯೂನಿಟಿ ಚರ್ಚ್​ಗೆ ಬೆಂಕಿ, ಸುಟ್ಟು ಕರಕಲಾದ ಪ್ರಾರ್ಥನಾ ಪರಿಕರ, ಶಿಲುಬೆ, ಏಸುವಿನ ಮೂರ್ತಿ
ಗ್ರೇಸ್ ಕಮ್ಯೂನಿಟಿ ಚರ್ಚ್​ಗೆ ಬೆಂಕಿ, ಸುಟ್ಟು ಕರಕಲಾದ ಪ್ರಾರ್ಥನಾ ಪರಿಕರ, ಶಿಲುಬೆ, ಏಸುವಿನ ಮೂರ್ತಿ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ | Edited By: ಆಯೇಷಾ ಬಾನು|

Updated on:Mar 03, 2024 | 11:44 AM

Share

ರಾಮನಗರ, ಮಾರ್ಚ್.03: ರಾಮನಗರ (Ramanagara) ಪಟ್ಟಣದ ಗ್ರೇಸ್ ಕಮ್ಯೂನಿಟಿ ಚರ್ಚ್​ ಬೆಂಕಿಗೆ (Church Fire) ಆಹುತಿಯಾಗಿದೆ. ಸುಟ್ಟ ಚರ್ಚ್ ನೋಡಿ ಭಕ್ತರು ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟಿದ್ದಾರೆ. ಚರ್ಚ್​ಗೆ ಕಿಡಿಗೇಡಿಗಳು ಬೆಂಕಿ ಹಾಕಿರುವ ಆರೋಪ ಕೇಳಿ ಬಂದಿದೆ. ಬೆಂಕಿ ಅವಘಡದಿಂದ ಪ್ರಾರ್ಥನಾ ಪರಿಕರ ಶಿಲುಬೆ ಸೇರಿದಂತೆ ಏಸುವಿನ ಮೂರ್ತಿ ಕೂಡ ಸುಟ್ಟು ಹೋಗಿದೆ. ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಲು ಚರ್ಚ್ ಸಿಬ್ಬಂದಿ ಮನವಿ ಮಾಡಿದ್ದಾರೆ.

ಪ್ರತಿ ರವಿವಾರ ನಡೆಯುತ್ತಿದ್ದ ಸಾಮೂಹಿಕ‌ ಪ್ರಾರ್ಥನೆಯನ್ನು ಸಲ್ಲಿಸಲು ಬಂದ ಭಕ್ತರು ಸುಟ್ಟ ಚರ್ಚ್ ನೋಡಿ ಕಣ್ಣೀರಿಟ್ಟಿದ್ದಾರೆ. ಶುಕ್ರವಾರದಂದೇ ಚರ್ಚ್​ಗೆ ಕಿಡಿಗೇಡಿಗು ಬೆಂಕಿ ಹಚ್ಚಿದ್ದಾರೆ ಎಂದು ಕಿಡಿಕಾರಿದ್ದಾರೆ. ಕಿಡಿಗೇಡಿಗಳ ಮೇಲೆ ಕ್ರಮ ವಹಿಸುವಂತೆ ಚರ್ಚ್ ಸಿಬ್ಬಂದಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ. ಚರ್ಚ್ ಸುಟ್ಟು ಹೋಗಿರುವ ವಿಡಿಯೋ ಟ್ಯಾಗ್ ಮಾಡಿ ಮನವಿ ಮಾಡಿದ್ದಾರೆ. ಘಟನೆ ಸಂಬಂಧ ರಾಮನಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚರ್ಚ್​ಗೆ ಹೇಗೆ ಬೆಂಕಿ ಬಿತ್ತು‌ ಎಂಬ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ರಾಮೇಶ್ವರಂ ಕೆಫೆ ಬ್ಲಾಸ್ಟ್​: ಉದ್ಯಮದಲ್ಲಿ ಬೆಳವಣಿಗೆ, ಬೆಂಗಳೂರು ಅನ್​ಸೇಫ್​ ಅಂತ ಸೃಷ್ಟಿಸಲು ಈ ರೀತಿ ಮಾಡಿರಬಹುದು; ಪರಮೇಶ್ವರ್​​

ಶಾರ್ಟ್ ಸರ್ಕ್ಯೂಟ್​​ನಿಂದ ಬೆಲ್ಟ್ ತಯಾರಿಕಾ ಕಾರ್ಖಾನೆಗೆ ಬೆಂಕಿ

ಇನ್ನು ಮತ್ತೊಂದೆಡೆ ಮಂಡ್ಯ ತಾಲೂಕಿನ ತೂಬಿನಕೆರೆ ಕೈಗಾರಿಕಾ ಪ್ರವೇಶದಲ್ಲಿ ಮುಂಜಾನೆ 4 ಗಂಟೆ ಸುಮಾರಿಗೆ ಬೆಲ್ಟ್​ ಕಾರ್ಖಾನೆಗೆ ಬೆಂಕಿ ಬಿದ್ದಿದೆ. ಶಾರ್ಟ್ ಸರ್ಕ್ಯೂಟ್​​ನಿಂದ ಬೆಲ್ಟ್ ತಯಾರಿಕಾ ಕಾರ್ಖಾನೆಗೆ ಬೆಂಕಿ ತಗುಲಿದೆ. ಬೆಂಕಿಯ ಕೆನ್ನಾಲಿಗೆಗೆ ಬೆಲ್ಟ್ ಫ್ಯಾಕ್ಟರಿ ಹೊತ್ತಿ ಉರಿದಿದೆ. ಇಡೀ ಕಾರ್ಖಾನೆ ಬೆಂಕಿಗೆ ಆಹುತಿಯಾಗಿದೆ.

ತೂಬಿನಕೆರೆ ಗ್ರಾಮದ ಕೈಗಾರಿಕಾ ಪ್ರವೇಶದಲ್ಲಿರುವ ಪ್ಲೇಕಾನ್ ಹೆಸರಿನ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಸದ್ಯ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ‌ ನಂದಿಸುವ ಕಾರ್ಯ ಮಾಡಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:43 am, Sun, 3 March 24

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್