ರಾಮನಗರ: ಗ್ರೇಸ್ ಕಮ್ಯೂನಿಟಿ ಚರ್ಚ್​ಗೆ ಬೆಂಕಿ, ಸುಟ್ಟು ಕರಕಲಾದ ಪ್ರಾರ್ಥನಾ ಪರಿಕರ, ಶಿಲುಬೆ, ಏಸುವಿನ ಮೂರ್ತಿ

ಮಂಡ್ಯ, ರಾಮನಗರದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ರಾಮನಗರದಲ್ಲಿ ಗ್ರೇಸ್ ಕಮ್ಯೂನಿಟಿ ಚರ್ಚ್​ ಬೆಂಕಿಗೆ ಆಹುತಿಯಾಗಿದೆ. ಪ್ರಾರ್ಥನಾ ಪರಿಕರ ಶಿಲುಬೆ ಸೇರಿದಂತೆ ಏಸುವಿನ ಮೂರ್ತಿ ಸುಟ್ಟ ಕರಕಲಾಗಿದೆ. ಇನ್ನು ಮಂಡ್ಯ ತಾಲೂಕಿನ ತೂಬಿನಕೆರೆ ಕೈಗಾರಿಕಾ ಪ್ರವೇಶದಲ್ಲಿ ಮುಂಜಾನೆ 4 ಗಂಟೆ ಸುಮಾರಿಗೆ ಬೆಲ್ಟ್​ ಕಾರ್ಖಾನೆಗೆ ಬೆಂಕಿ ಬಿದ್ದಿದೆ.

ರಾಮನಗರ: ಗ್ರೇಸ್ ಕಮ್ಯೂನಿಟಿ ಚರ್ಚ್​ಗೆ ಬೆಂಕಿ, ಸುಟ್ಟು ಕರಕಲಾದ ಪ್ರಾರ್ಥನಾ ಪರಿಕರ, ಶಿಲುಬೆ, ಏಸುವಿನ ಮೂರ್ತಿ
ಗ್ರೇಸ್ ಕಮ್ಯೂನಿಟಿ ಚರ್ಚ್​ಗೆ ಬೆಂಕಿ, ಸುಟ್ಟು ಕರಕಲಾದ ಪ್ರಾರ್ಥನಾ ಪರಿಕರ, ಶಿಲುಬೆ, ಏಸುವಿನ ಮೂರ್ತಿ
Edited By: ಆಯೇಷಾ ಬಾನು

Updated on: Mar 03, 2024 | 11:44 AM

ರಾಮನಗರ, ಮಾರ್ಚ್.03: ರಾಮನಗರ (Ramanagara) ಪಟ್ಟಣದ ಗ್ರೇಸ್ ಕಮ್ಯೂನಿಟಿ ಚರ್ಚ್​ ಬೆಂಕಿಗೆ (Church Fire) ಆಹುತಿಯಾಗಿದೆ. ಸುಟ್ಟ ಚರ್ಚ್ ನೋಡಿ ಭಕ್ತರು ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟಿದ್ದಾರೆ. ಚರ್ಚ್​ಗೆ ಕಿಡಿಗೇಡಿಗಳು ಬೆಂಕಿ ಹಾಕಿರುವ ಆರೋಪ ಕೇಳಿ ಬಂದಿದೆ. ಬೆಂಕಿ ಅವಘಡದಿಂದ ಪ್ರಾರ್ಥನಾ ಪರಿಕರ ಶಿಲುಬೆ ಸೇರಿದಂತೆ ಏಸುವಿನ ಮೂರ್ತಿ ಕೂಡ ಸುಟ್ಟು ಹೋಗಿದೆ. ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಲು ಚರ್ಚ್ ಸಿಬ್ಬಂದಿ ಮನವಿ ಮಾಡಿದ್ದಾರೆ.

ಪ್ರತಿ ರವಿವಾರ ನಡೆಯುತ್ತಿದ್ದ ಸಾಮೂಹಿಕ‌ ಪ್ರಾರ್ಥನೆಯನ್ನು ಸಲ್ಲಿಸಲು ಬಂದ ಭಕ್ತರು ಸುಟ್ಟ ಚರ್ಚ್ ನೋಡಿ ಕಣ್ಣೀರಿಟ್ಟಿದ್ದಾರೆ. ಶುಕ್ರವಾರದಂದೇ ಚರ್ಚ್​ಗೆ ಕಿಡಿಗೇಡಿಗು ಬೆಂಕಿ ಹಚ್ಚಿದ್ದಾರೆ ಎಂದು ಕಿಡಿಕಾರಿದ್ದಾರೆ. ಕಿಡಿಗೇಡಿಗಳ ಮೇಲೆ ಕ್ರಮ ವಹಿಸುವಂತೆ ಚರ್ಚ್ ಸಿಬ್ಬಂದಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ. ಚರ್ಚ್ ಸುಟ್ಟು ಹೋಗಿರುವ ವಿಡಿಯೋ ಟ್ಯಾಗ್ ಮಾಡಿ ಮನವಿ ಮಾಡಿದ್ದಾರೆ. ಘಟನೆ ಸಂಬಂಧ ರಾಮನಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚರ್ಚ್​ಗೆ ಹೇಗೆ ಬೆಂಕಿ ಬಿತ್ತು‌ ಎಂಬ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ರಾಮೇಶ್ವರಂ ಕೆಫೆ ಬ್ಲಾಸ್ಟ್​: ಉದ್ಯಮದಲ್ಲಿ ಬೆಳವಣಿಗೆ, ಬೆಂಗಳೂರು ಅನ್​ಸೇಫ್​ ಅಂತ ಸೃಷ್ಟಿಸಲು ಈ ರೀತಿ ಮಾಡಿರಬಹುದು; ಪರಮೇಶ್ವರ್​​

ಶಾರ್ಟ್ ಸರ್ಕ್ಯೂಟ್​​ನಿಂದ ಬೆಲ್ಟ್ ತಯಾರಿಕಾ ಕಾರ್ಖಾನೆಗೆ ಬೆಂಕಿ

ಇನ್ನು ಮತ್ತೊಂದೆಡೆ ಮಂಡ್ಯ ತಾಲೂಕಿನ ತೂಬಿನಕೆರೆ ಕೈಗಾರಿಕಾ ಪ್ರವೇಶದಲ್ಲಿ ಮುಂಜಾನೆ 4 ಗಂಟೆ ಸುಮಾರಿಗೆ ಬೆಲ್ಟ್​ ಕಾರ್ಖಾನೆಗೆ ಬೆಂಕಿ ಬಿದ್ದಿದೆ. ಶಾರ್ಟ್ ಸರ್ಕ್ಯೂಟ್​​ನಿಂದ ಬೆಲ್ಟ್ ತಯಾರಿಕಾ ಕಾರ್ಖಾನೆಗೆ ಬೆಂಕಿ ತಗುಲಿದೆ. ಬೆಂಕಿಯ ಕೆನ್ನಾಲಿಗೆಗೆ ಬೆಲ್ಟ್ ಫ್ಯಾಕ್ಟರಿ ಹೊತ್ತಿ ಉರಿದಿದೆ. ಇಡೀ ಕಾರ್ಖಾನೆ ಬೆಂಕಿಗೆ ಆಹುತಿಯಾಗಿದೆ.

ತೂಬಿನಕೆರೆ ಗ್ರಾಮದ ಕೈಗಾರಿಕಾ ಪ್ರವೇಶದಲ್ಲಿರುವ ಪ್ಲೇಕಾನ್ ಹೆಸರಿನ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಸದ್ಯ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ‌ ನಂದಿಸುವ ಕಾರ್ಯ ಮಾಡಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:43 am, Sun, 3 March 24

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us