AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡದಿಯಲ್ಲಿ ಯುವತಿ ಮೇಲೆ ಅತ್ಯಾಚಾರ: ಸಂತ್ರಸ್ತೆ ಪರಿಸ್ಥಿತಿ ಕಂಡು ಪೊಲೀಸರೇ ಶಾಕ್

ಬಿಡದಿಯಲ್ಲಿ 20 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆದಿದ್ದು, ಪಕ್ಕದ ಮನೆಯ ಅಸ್ಸಾಂ ಮೂಲದ ಯುವಕನಿಂದ ಕೃತ್ಯವೆಸಗಲಾಗಿದೆ. ಸ್ನಾನ ಮಾಡಲು ಬಾತ್ ರೂಮ್​ಗೆ ಹೋಗಿದ್ದ ಯುವತಿಯನ್ನು ಆತ ತನ್ನ ಕೋಣೆಗೆ ಎಳೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಡದಿಯಲ್ಲಿ ಯುವತಿ ಮೇಲೆ ಅತ್ಯಾಚಾರ: ಸಂತ್ರಸ್ತೆ ಪರಿಸ್ಥಿತಿ ಕಂಡು ಪೊಲೀಸರೇ ಶಾಕ್
ಬಿಡದಿಯಲ್ಲಿ ಯುವತಿ ಮೇಲೆ ಅತ್ಯಾಚಾರ: ಸಂತ್ರಸ್ತೆ ಪರಿಸ್ಥಿತಿ ಕಂಡು ಪೊಲೀಸರೇ ಶಾಕ್
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ಗಂಗಾಧರ​ ಬ. ಸಾಬೋಜಿ|

Updated on: Jan 29, 2025 | 6:00 PM

Share

ರಾಮನಗರ, ಜನವರಿ 29: ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಗೆ ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಈ ಮಧ್ಯೆ ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ. 20 ವರ್ಷದ ಯುವತಿ (girl) ಮೇಲೆ ಯುವಕನೋರ್ವ ಅತ್ಯಾಚಾರವೆಸಗಿರುವಂತಹ ಘಟನೆ ರಾಮನಗರ ತಾಲೂಕಿನ ಬಿಡದಿಯಲ್ಲಿ ನಡೆದಿದೆ. ಸದ್ಯ ಅಸ್ಸಾಂ ಮೂಲದ ಮಂಜೂರ್ ಆಲಂ ಎಂಬಾತನನ್ನು ಬಿಡದಿ ಪೊಲೀಸ್ ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪಕ್ಕದ ಮನೆಯವನಿಂದಲ್ಲೇ ಕೃತ್ಯ

ನಿನ್ನೆ ಸಂಜೆ ವೇಳೆ ಸ್ನಾನಕ್ಕೆ ಬಾತ್​​ರೂಮ್​ಗೆ ತೆರಳಿದ್ದ ವೇಳೆ ಯುವತಿಯನ್ನ ತನ್ನ ರೂಮ್​ಗೆ ಹೊತ್ತೊಯ್ದು ಕೃತ್ಯವೆಸಗಲಾಗಿದೆ. ಅಸ್ಸಾಂ ಮೂಲದ ಮಂಜೂರ್ ಆಲಂ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಯುವತಿ ಪಕ್ಕದ ಮನೆಯಲ್ಲಿ ವಾಸವಿದ್ದ. ಕೃತ್ಯದ ವೇಳೆ ಯುವತಿ ಕಿರುಚಾಡಿದ್ದಾಳೆ. ಯುವತಿ ಚೀರಾಟ ಕಂಡು ಸ್ಥಳೀಯರು ಓಡಿ ಬಂದಿದ್ದಾರೆ. ಅಷ್ಟರಲ್ಲಿ ಓಡಿ ಹೋಗುತ್ತಿದ್ದ ಆರೋಪಿಯನ್ನು ಸೆರೆ ಹಿಡಿಯಲಾಗಿದೆ.

ಇದನ್ನೂ ಓದಿ: 500 ರೂ ಕದ್ದಿದ್ದಾನೆಂದು ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿ ಕಿಡ್ನ್ಯಾಪ್: ಕಂಬಕ್ಕೆ ಕಟ್ಟಿ ಥಳಿತ

ಇತ್ತ ಯುವಕನ ಕೋಣೆಯಿಂದ ರಕ್ತಸಿಕ್ತವಾಗಿ ಯುವತಿ ಹೊರಬಂದಿದ್ದಾಳೆ. ಜನನಾಂಗದಿಂದ ರಕ್ತ ಸುರಿಯುತ್ತಿರುವುದನ್ನು ಕಂಡು ಜನರು ಆತಂಕಗೊಂಡಿದ್ದಾರೆ. ಇಡೀ ರಸ್ತೆಯಲ್ಲಿ ರಕ್ತದ ಕಲೆ ಬಿದಿದ್ದು, ಯುವತಿ ಪರಿಸ್ಥಿತಿ ಕಂಡು ಪೊಲೀಸರೇ ಶಾಕ್ ಆಗಿದ್ದಾರೆ.

ವಾಕಿಂಗ್​ ಮಾಡುತ್ತಿದ್ದ ಮಹಿಳೆ ಮೇಲೆ ಮಾನಸಿಕ ಅಸ್ವಸ್ಥನಿಂದ ಹಲ್ಲೆ

ವಾಕಿಂಗ್​ ಮಾಡುತ್ತಿದ್ದ ಮಹಿಳೆ ಮೇಲೆ ಮಾನಸಿಕ ಅಸ್ವಸ್ಥನಿಂದ ಹಲ್ಲೆ ಮಾಡಿರುವಂತಹ ಘಟನೆ  ಬೆಂಗಳೂರಿನ ಸದಾಶಿವನಗರ ಠಾಣಾ ವ್ಯಾಪ್ತಿ 8ನೇ ಕ್ರಾಸ್​ನಲ್ಲಿ ನಡೆದಿದೆ. ವ್ಯಕ್ತಿಯನ್ನು ಹಿಡಿದು ಸದಾಶಿವನಗರ ಪೊಲೀಸರಿಗೆ ಸ್ಥಳೀಯರು ಒಪ್ಪಿಸಿದ್ದಾರೆ. ಸದ್ಯ ಆರೋಪಿ ಮಲ್ಲಿಕಾರ್ಜುನಗೆ ಕೋರ್ಟ್​​ ನ್ಯಾಯಾಂಗ ಬಂಧನ ವಿಧಿಸಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲೊಬ್ಬ ಲಕ್ಕಿ ಭಾಸ್ಕರ್​​: ಒಂದಲ್ಲ, ಎರಡಲ್ಲ 7 ಕೋಟಿ ರೂ ವಂಚನೆ

ನಿನ್ನೆ ಸಂಜೆ ಮನೆ ಮುಂಭಾಗ ಪಾರ್ಕ್​​ ಬಳಿ ಮಹಿಳೆ ವಾಕಿಂಗ್​​ ಮಾಡುತ್ತಿದ್ದರು. ಈ ವೇಳೆ ರಸ್ತೆಯಲ್ಲಿ ಬಿದ್ದಿದ್ದ ದೊಣ್ಣೆಯಿಂದ ಮಹಿಳೆ ತಲೆಗೆ ಬಲವಾಗಿ ಹೊಡೆಯಲಾಗಿದೆ. ಮಹಿಳೆ ಚೀರಾಟ ಕೇಳಿ ವ್ಯಕ್ತಿಗೆ ಸ್ಥಳೀಯರು ಧರ್ಮದೇಟು ನೀಡಿದ್ದಾರೆ. ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿಂದೆ ಕೂಡಾ ಇದೇ ರೀತಿ ಓರ್ವ ವ್ಯಕ್ತಿಗೆ ಮಲ್ಲಿಕಾರ್ಜುನ ಹೊಡೆದಿದ್ದ. ಆದರೆ ನ್ಯಾಯಾಲಯದಿಂದ ಮಲ್ಲಿಕಾರ್ಜುನ ಜಾಮೀನು ಪಡೆದಿದ್ದ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!