Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಹೆದ್ದಾರಿಯಲ್ಲಿ ಈಜಾಡಲು ಹೆಚ್​ ಡಿ ಕುಮಾರಸ್ವಾಮಿ ‘ಆಹ್ವಾನ’ -ಸಂಸದ ಪ್ರತಾಪ್ ಸಿಂಹ ತಿರುಗೇಟು ಹೀಗಿದೆ

ಗೌರವಾನ್ವಿತ ಕುಮಾರಣ್ಣ ಮತ್ತು DK ಸುರೇಶಣ್ಣ ಅನ್ಯಥಾ ಭಾವಿಸಬೇಡಿ, ಜಿಲ್ಲಾಡಳಿತ, ಕಂದಾಯ ಮತ್ತು ಸಣ್ಣ ನೀರಾವರಿ ಇಲಾಖೆಯ ಮೂಲಕ ರಾಮನಗರ ಜಿಲ್ಲೆಯ ಎಲ್ಲ ಕೆರೆಗಳ ಹಾಗು ನಾಲಾಗಳ ಸರ್ವೇ ಮಾಡಿಸಿ, ಒತ್ತುವರಿ ತೆರವು ಮಾಡಿಸಿ ಕೊಡಿ. ಹೈವೆಯಿಂದ ಎಲ್ಲೆಲ್ಲಿ ಅಡಚಣೆಯಾಗಿದೆ ಅದನ್ನೂ ತೋರಿಸಿ, ಸರಿಪಡಿಸಿಕೊಡುವ ಜವಾಬ್ದಾರಿಯನ್ನು ನನಗೆ ಬಿಡಿ - ಸಂಸದ ಪ್ರತಾಪ್ ಸಿಂಹ

ಮೈಸೂರು ಹೆದ್ದಾರಿಯಲ್ಲಿ ಈಜಾಡಲು ಹೆಚ್​ ಡಿ ಕುಮಾರಸ್ವಾಮಿ ‘ಆಹ್ವಾನ’ -ಸಂಸದ ಪ್ರತಾಪ್ ಸಿಂಹ ತಿರುಗೇಟು ಹೀಗಿದೆ
ಮೈಸೂರು ಹೆದ್ದಾರಿಯಲ್ಲಿ ಈಜಾಡಲು ಹೆಚ್​ ಡಿ ಕುಮಾರಸ್ವಾಮಿ ‘ಆಹ್ವಾನ’ -ಸಂಸದ ಪ್ರತಾಪ್ ಸಿಂಹ ತಿರುಗೇಟು ಹೀಗಿದೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Aug 30, 2022 | 4:39 PM

ಇತ್ತೀಚಿನ ದಶಕಗಳಲ್ಲಿ ಕಂಡುಕೇಳರಿಯದಂತಹ ಮಹಾಮಳೆಗೆ ರಾಮನಗರ-ಮಂಡ್ಯ ತತ್ತರಿಸಿದೆ. ಇಂದು ಗೌರಿ ಹಬ್ಬದ ದಿನ ವರುಣ ಮಹಾಪ್ರಭು ತುಸು ವಿರಾಮ ಹಾಕಿದ್ದಾನೆ ಅನಿಸುತ್ತಿದೆ. ಆದರೆ ನಿನ್ನೆ-ಮೊನ್ನೆ ಭರ್ಜರಿ ಹಾವಳಿ ಎಬ್ಬಿಸಿದ್ದಾನೆ. ಇದನ್ನು ಪರಾಮರ್ಶಿಸಲು ಸಾಕ್ಷಾತ್​ ಮುಖ್ಯಮಂತ್ರಿ, ಮಾಜಿ ಮುಖ್ಯಮಂತ್ರಿ, ಉಸ್ತುವಾರಿ ಸಚಿವರು, ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳ ಪಟಾಲಂ ಕೆಲ ಸ್ಥಳಗಳಿಗೆ ಭೇಟಿ ನೀಡಿ, ಜನರಿಗೆ ಸಮಾಧಾನದ ಮಂತ್ರ ಹೇಳಿದ್ದಾರೆ. ಆದರೆ ಈ ಮಧ್ಯೆ ಮಾಜಿ ಮುಖ್ಯಮಂತ್ರಿಗಳೂ ಆದ ಚನ್ನಪಟ್ಟಣ ಶಾಸಕ, ಜೆಡಿಎಸ್ ನಾಯಕ ಹೆಚ್​ ಡಿ ಕುಮಾರಸ್ವಾಮಿ (HD Kumaraswamy) ಅವರು ಮೈಸೂರು-ಬೆಂಗಳೂರು ಹೆದ್ದಾರಿ ನಿರ್ಮಾಣ ಕಾಮಗಾರಿಯನ್ನು ಪ್ರಸ್ತಾಪಿಸುತ್ತಾ ಮೈಸೂರು ಸಂಸದ ಪ್ರತಾಪ್​ ಸಿಂಹ ಬಗ್ಗೆ ಬಾಲಿಶವಾಗಿ ಮಾತನಾಡಿದ್ದರು. ಹೆದ್ದಾರಿ ನಿರ್ಮಿಸಿಕೊಡಿ ಅಂದರೆ ಈಜುಕೊಳ ನಿರ್ಮಿಸಿಬಿಟ್ಟಿದ್ದಾರೆ ನಮ್ಮ ಸಂಸದರು. ಪ್ರತಾಪ್ ಸಿಂಹ ಇಲ್ಲಿ ( MP Pratap Simha) ಸ್ವಿಮ್ (Swimming) ಮಾಡಬಹುದಿತ್ತು ಎಂದು ವ್ಯಂಗ್ಯೋಕ್ತಿ ಹೇಳಿದ್ದರು. ​​

ಸಂಸದ ಪ್ರತಾಪ್ ಸಿಂಹ Mysore-Bangalore ಹೈವೆಲಿ ಬಂದು Swimming ಮಾಡಬಹುದಿತ್ತು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನೀಡಿದ್ದ ‘ಆಹ್ವಾನಕ್ಕೆ’ ಸಂಸದ ಪ್ರತಾಪ್ ಸಿಂಹ ಸೂಕ್ಷ್ಮವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಫೇಸ್​ ಬುಕ್ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್​ ಮಾಡಿರುವ ಪ್ರತಾಪ್ ಸಿಂಹ ಮಾಧ್ಯಮಗಳಲ್ಲಿ ಬಿತ್ತರವಾಗಿರುವ ಹೆಚ್​ ಡಿ ಕುಮಾರಸ್ವಾಮಿ ಅವರ ಹೇಳಿಕೆಗಳ ಕ್ಲಿಪ್ಪಿಂಗ್​​ ಗಳನ್ನು ಜೋಡಿಸಿ, ಪೋಸ್ಟ್​ ಮಾಡಿದ್ದಾರೆ.

ಸಂಸದ ಪ್ರತಾಪ್ ಸಿಂಹ ತಿರುಗೇಟು ಹೀಗಿದೆ:

ಗೌರವಾನ್ವಿತ ಕುಮಾರಣ್ಣ ಮತ್ತು DK ಸುರೇಶಣ್ಣ ಅನ್ಯಥಾ ಭಾವಿಸಬೇಡಿ, ಜಿಲ್ಲಾಡಳಿತ, ಕಂದಾಯ ಮತ್ತು ಸಣ್ಣ ನೀರಾವರಿ ಇಲಾಖೆಯ ಮೂಲಕ ರಾಮನಗರ ಜಿಲ್ಲೆಯ ಎಲ್ಲ ಕೆರೆಗಳ ಹಾಗು ನಾಲಾಗಳ ಸರ್ವೇ ಮಾಡಿಸಿ, ಒತ್ತುವರಿ ತೆರವು ಮಾಡಿಸಿ ಕೊಡಿ. ಹೈವೆಯಿಂದ ಎಲ್ಲೆಲ್ಲಿ ಅಡಚಣೆಯಾಗಿದೆ ಅದನ್ನೂ ತೋರಿಸಿ, ಸರಿಪಡಿಸಿಕೊಡುವ ಜವಾಬ್ದಾರಿಯನ್ನು ನನಗೆ ಬಿಡಿ.

ಹಿಮಾನಿ ಶವವನ್ನು ಸೂಟ್‌ಕೇಸ್‌ನಲ್ಲಿ ಎಳೆದೊಯ್ಯುತ್ತಿರುವ ವಿಡಿಯೋ ಪತ್ತೆ
ಹಿಮಾನಿ ಶವವನ್ನು ಸೂಟ್‌ಕೇಸ್‌ನಲ್ಲಿ ಎಳೆದೊಯ್ಯುತ್ತಿರುವ ವಿಡಿಯೋ ಪತ್ತೆ
ಮಹಿಳೆಯರ ಸ್ಫೂರ್ತಿದಾಯಕ ಪಯಣ ಹಂಚಿಕೊಳ್ಳಲು ಪ್ರಧಾನಿ ಮೋದಿ ಅವಕಾಶ
ಮಹಿಳೆಯರ ಸ್ಫೂರ್ತಿದಾಯಕ ಪಯಣ ಹಂಚಿಕೊಳ್ಳಲು ಪ್ರಧಾನಿ ಮೋದಿ ಅವಕಾಶ
ನಟ್ಟು ಬೋಲ್ಟು ಹೇಳಿಕೆ: ಡಿಕೆಶಿ ಬಳಸಿದ ಭಾಷೆ ಸರಿ ಇಲ್ಲ ಎಂದ ನಾಗಾಭರಣ
ನಟ್ಟು ಬೋಲ್ಟು ಹೇಳಿಕೆ: ಡಿಕೆಶಿ ಬಳಸಿದ ಭಾಷೆ ಸರಿ ಇಲ್ಲ ಎಂದ ನಾಗಾಭರಣ
ಡಾ ರಾಜ್​ಕುಮಾರ್ ಅವರ ಒಂದು ಸನ್ನೆಗೆ ಲಕ್ಷ ಜನ ಸೇರ್ತಿದ್ರು: ಸಾಧು ಕೋಕಿಲ
ಡಾ ರಾಜ್​ಕುಮಾರ್ ಅವರ ಒಂದು ಸನ್ನೆಗೆ ಲಕ್ಷ ಜನ ಸೇರ್ತಿದ್ರು: ಸಾಧು ಕೋಕಿಲ
ಹೆಚ್ಚುವರಿ ಉತ್ತರ ಪತ್ರಿಕೆ ನೀಡದ ಮೇಲ್ವಿಚಾರಕ: ವಿದ್ಯಾರ್ಥಿನಿ ಕಣ್ಣೀರು
ಹೆಚ್ಚುವರಿ ಉತ್ತರ ಪತ್ರಿಕೆ ನೀಡದ ಮೇಲ್ವಿಚಾರಕ: ವಿದ್ಯಾರ್ಥಿನಿ ಕಣ್ಣೀರು
ಪ್ರತಿಭಟನೆಗಳಿಗೆ ಬಂದ್ ಒಂದೇ ಅಸ್ತ್ರವಲ್ಲ, ಅದು ಬ್ರಹ್ಮಾಸ್ತ್ರ: ನಾರಾಯಣಗೌಡ
ಪ್ರತಿಭಟನೆಗಳಿಗೆ ಬಂದ್ ಒಂದೇ ಅಸ್ತ್ರವಲ್ಲ, ಅದು ಬ್ರಹ್ಮಾಸ್ತ್ರ: ನಾರಾಯಣಗೌಡ
ಉತ್ತರ ಕನ್ನಡ ಜಿಲ್ಲೆಲಿ ಅತಿ ಹೆಚ್ಚು ಉಷ್ಣಾಂಶ ದಾಖಲು: ಡಿಸಿ ಹೇಳಿದ್ದಿಷ್ಟು
ಉತ್ತರ ಕನ್ನಡ ಜಿಲ್ಲೆಲಿ ಅತಿ ಹೆಚ್ಚು ಉಷ್ಣಾಂಶ ದಾಖಲು: ಡಿಸಿ ಹೇಳಿದ್ದಿಷ್ಟು
ಗಿರ್‌ನಲ್ಲಿ ಪ್ರಧಾನಿ ಮೋದಿಯ ಸಿಂಹ ಸಫಾರಿಯ ಕ್ಷಣಗಳ ವಿಡಿಯೋ ಇಲ್ಲಿದೆ
ಗಿರ್‌ನಲ್ಲಿ ಪ್ರಧಾನಿ ಮೋದಿಯ ಸಿಂಹ ಸಫಾರಿಯ ಕ್ಷಣಗಳ ವಿಡಿಯೋ ಇಲ್ಲಿದೆ
ಹೈಕಮಾಂಡ್ ನೀಡುವ ಸೂಚನೆಯನ್ನು ನಾನು ಪಾಲಿಸುತ್ತೇನೆ: ಸಿದ್ದರಾಮಯ್ಯ
ಹೈಕಮಾಂಡ್ ನೀಡುವ ಸೂಚನೆಯನ್ನು ನಾನು ಪಾಲಿಸುತ್ತೇನೆ: ಸಿದ್ದರಾಮಯ್ಯ
ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ
ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ