AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಹೆದ್ದಾರಿಯಲ್ಲಿ ಈಜಾಡಲು ಹೆಚ್​ ಡಿ ಕುಮಾರಸ್ವಾಮಿ ‘ಆಹ್ವಾನ’ -ಸಂಸದ ಪ್ರತಾಪ್ ಸಿಂಹ ತಿರುಗೇಟು ಹೀಗಿದೆ

ಗೌರವಾನ್ವಿತ ಕುಮಾರಣ್ಣ ಮತ್ತು DK ಸುರೇಶಣ್ಣ ಅನ್ಯಥಾ ಭಾವಿಸಬೇಡಿ, ಜಿಲ್ಲಾಡಳಿತ, ಕಂದಾಯ ಮತ್ತು ಸಣ್ಣ ನೀರಾವರಿ ಇಲಾಖೆಯ ಮೂಲಕ ರಾಮನಗರ ಜಿಲ್ಲೆಯ ಎಲ್ಲ ಕೆರೆಗಳ ಹಾಗು ನಾಲಾಗಳ ಸರ್ವೇ ಮಾಡಿಸಿ, ಒತ್ತುವರಿ ತೆರವು ಮಾಡಿಸಿ ಕೊಡಿ. ಹೈವೆಯಿಂದ ಎಲ್ಲೆಲ್ಲಿ ಅಡಚಣೆಯಾಗಿದೆ ಅದನ್ನೂ ತೋರಿಸಿ, ಸರಿಪಡಿಸಿಕೊಡುವ ಜವಾಬ್ದಾರಿಯನ್ನು ನನಗೆ ಬಿಡಿ - ಸಂಸದ ಪ್ರತಾಪ್ ಸಿಂಹ

ಮೈಸೂರು ಹೆದ್ದಾರಿಯಲ್ಲಿ ಈಜಾಡಲು ಹೆಚ್​ ಡಿ ಕುಮಾರಸ್ವಾಮಿ ‘ಆಹ್ವಾನ’ -ಸಂಸದ ಪ್ರತಾಪ್ ಸಿಂಹ ತಿರುಗೇಟು ಹೀಗಿದೆ
ಮೈಸೂರು ಹೆದ್ದಾರಿಯಲ್ಲಿ ಈಜಾಡಲು ಹೆಚ್​ ಡಿ ಕುಮಾರಸ್ವಾಮಿ ‘ಆಹ್ವಾನ’ -ಸಂಸದ ಪ್ರತಾಪ್ ಸಿಂಹ ತಿರುಗೇಟು ಹೀಗಿದೆ
TV9 Web
| Updated By: ಸಾಧು ಶ್ರೀನಾಥ್​|

Updated on: Aug 30, 2022 | 4:39 PM

Share

ಇತ್ತೀಚಿನ ದಶಕಗಳಲ್ಲಿ ಕಂಡುಕೇಳರಿಯದಂತಹ ಮಹಾಮಳೆಗೆ ರಾಮನಗರ-ಮಂಡ್ಯ ತತ್ತರಿಸಿದೆ. ಇಂದು ಗೌರಿ ಹಬ್ಬದ ದಿನ ವರುಣ ಮಹಾಪ್ರಭು ತುಸು ವಿರಾಮ ಹಾಕಿದ್ದಾನೆ ಅನಿಸುತ್ತಿದೆ. ಆದರೆ ನಿನ್ನೆ-ಮೊನ್ನೆ ಭರ್ಜರಿ ಹಾವಳಿ ಎಬ್ಬಿಸಿದ್ದಾನೆ. ಇದನ್ನು ಪರಾಮರ್ಶಿಸಲು ಸಾಕ್ಷಾತ್​ ಮುಖ್ಯಮಂತ್ರಿ, ಮಾಜಿ ಮುಖ್ಯಮಂತ್ರಿ, ಉಸ್ತುವಾರಿ ಸಚಿವರು, ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳ ಪಟಾಲಂ ಕೆಲ ಸ್ಥಳಗಳಿಗೆ ಭೇಟಿ ನೀಡಿ, ಜನರಿಗೆ ಸಮಾಧಾನದ ಮಂತ್ರ ಹೇಳಿದ್ದಾರೆ. ಆದರೆ ಈ ಮಧ್ಯೆ ಮಾಜಿ ಮುಖ್ಯಮಂತ್ರಿಗಳೂ ಆದ ಚನ್ನಪಟ್ಟಣ ಶಾಸಕ, ಜೆಡಿಎಸ್ ನಾಯಕ ಹೆಚ್​ ಡಿ ಕುಮಾರಸ್ವಾಮಿ (HD Kumaraswamy) ಅವರು ಮೈಸೂರು-ಬೆಂಗಳೂರು ಹೆದ್ದಾರಿ ನಿರ್ಮಾಣ ಕಾಮಗಾರಿಯನ್ನು ಪ್ರಸ್ತಾಪಿಸುತ್ತಾ ಮೈಸೂರು ಸಂಸದ ಪ್ರತಾಪ್​ ಸಿಂಹ ಬಗ್ಗೆ ಬಾಲಿಶವಾಗಿ ಮಾತನಾಡಿದ್ದರು. ಹೆದ್ದಾರಿ ನಿರ್ಮಿಸಿಕೊಡಿ ಅಂದರೆ ಈಜುಕೊಳ ನಿರ್ಮಿಸಿಬಿಟ್ಟಿದ್ದಾರೆ ನಮ್ಮ ಸಂಸದರು. ಪ್ರತಾಪ್ ಸಿಂಹ ಇಲ್ಲಿ ( MP Pratap Simha) ಸ್ವಿಮ್ (Swimming) ಮಾಡಬಹುದಿತ್ತು ಎಂದು ವ್ಯಂಗ್ಯೋಕ್ತಿ ಹೇಳಿದ್ದರು. ​​

ಸಂಸದ ಪ್ರತಾಪ್ ಸಿಂಹ Mysore-Bangalore ಹೈವೆಲಿ ಬಂದು Swimming ಮಾಡಬಹುದಿತ್ತು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನೀಡಿದ್ದ ‘ಆಹ್ವಾನಕ್ಕೆ’ ಸಂಸದ ಪ್ರತಾಪ್ ಸಿಂಹ ಸೂಕ್ಷ್ಮವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಫೇಸ್​ ಬುಕ್ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್​ ಮಾಡಿರುವ ಪ್ರತಾಪ್ ಸಿಂಹ ಮಾಧ್ಯಮಗಳಲ್ಲಿ ಬಿತ್ತರವಾಗಿರುವ ಹೆಚ್​ ಡಿ ಕುಮಾರಸ್ವಾಮಿ ಅವರ ಹೇಳಿಕೆಗಳ ಕ್ಲಿಪ್ಪಿಂಗ್​​ ಗಳನ್ನು ಜೋಡಿಸಿ, ಪೋಸ್ಟ್​ ಮಾಡಿದ್ದಾರೆ.

ಸಂಸದ ಪ್ರತಾಪ್ ಸಿಂಹ ತಿರುಗೇಟು ಹೀಗಿದೆ:

ಗೌರವಾನ್ವಿತ ಕುಮಾರಣ್ಣ ಮತ್ತು DK ಸುರೇಶಣ್ಣ ಅನ್ಯಥಾ ಭಾವಿಸಬೇಡಿ, ಜಿಲ್ಲಾಡಳಿತ, ಕಂದಾಯ ಮತ್ತು ಸಣ್ಣ ನೀರಾವರಿ ಇಲಾಖೆಯ ಮೂಲಕ ರಾಮನಗರ ಜಿಲ್ಲೆಯ ಎಲ್ಲ ಕೆರೆಗಳ ಹಾಗು ನಾಲಾಗಳ ಸರ್ವೇ ಮಾಡಿಸಿ, ಒತ್ತುವರಿ ತೆರವು ಮಾಡಿಸಿ ಕೊಡಿ. ಹೈವೆಯಿಂದ ಎಲ್ಲೆಲ್ಲಿ ಅಡಚಣೆಯಾಗಿದೆ ಅದನ್ನೂ ತೋರಿಸಿ, ಸರಿಪಡಿಸಿಕೊಡುವ ಜವಾಬ್ದಾರಿಯನ್ನು ನನಗೆ ಬಿಡಿ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ