AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಗುರಿ ಮುಂದಿನ ಎಲೆಕ್ಷನ್​ನಲ್ಲಿ 123 ಸ್ಥಾನ ಗೆಲ್ಲುವುದು; ಪ್ರಾದೇಶಿಕ ಪಕ್ಷದ ಸರ್ಕಾರ ತರಲು ಈಗಾಗಲೇ ತಯಾರಿ: ಹೆಚ್​ಡಿ ಕುಮಾರಸ್ವಾಮಿ

ಹಿಂದೆ ನಡೆದ ಘಟನೆ ಮರುಕಳಿಸದಂತೆ ಎಚ್ಚರ ವಹಿಸಬೇಕು ಎಂದು ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ವಿಚಾರದ ಬಗ್ಗೆ ರಾಮನಗರದಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ನನ್ನ ಗುರಿ ಮುಂದಿನ ಎಲೆಕ್ಷನ್​ನಲ್ಲಿ 123 ಸ್ಥಾನ ಗೆಲ್ಲುವುದು; ಪ್ರಾದೇಶಿಕ ಪಕ್ಷದ ಸರ್ಕಾರ ತರಲು ಈಗಾಗಲೇ ತಯಾರಿ: ಹೆಚ್​ಡಿ ಕುಮಾರಸ್ವಾಮಿ
ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ
TV9 Web
| Edited By: |

Updated on:Feb 13, 2022 | 3:41 PM

Share

ರಾಮನಗರ: ಮಾಕಳಿ ಏತ ನೀರಾವರಿ ಯೋಜನೆ ವಿಚಾರವಾಗಿ ಮಾಜಿ ಸಚಿವ ಯೋಗೇಶ್ವರ್ ಕಡೆಯವರ ಹೇಳಿಕೆ ನೋಡಿದ್ದೇನೆ. ₹15 ಕೋಟಿ ರೂಪಾಯಿ ಕಾರ್ಯಕ್ರಮ, ಸಿಪಿವೈ ಮಾಡಿಸಿದ್ದಾರೆ ಎಂದಿದ್ದಾರೆ. ಆದ್ರೆ ಇದು ₹29 ಕೋಟಿ ರೂಪಾಯಿ ವೆಚ್ಚದಲ್ಲಿ ಆಗಿರುವ ಕಾರ್ಯಕ್ರಮ. ಅದು ಸಣ್ಣ ನೀರಾವರಿ ಇಲಾಖೆಯ ಮುಖಾಂತರ ಆಗಿದೆ. ನಾನು ಸಿಎಂ ಆದಾಗ ಯೋಜನೆಗೆ ನಿರ್ಧಾರ ಕೈಗೊಂಡಿದ್ದೆ. ಗುದ್ದಲಿ ಪೂಜೆ ಮಾಡುವಾಗ ಯಾರೂ ಮಾತನಾಡಲಿಲ್ಲ. ನೀರು ಹರಿದ ನಂತರ ರಾಜಕೀಯ ಮಾಡ್ತಿದ್ದಾರೆ ಎಂದು ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಹೆಚ್‌.ಡಿ. ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ಮಾತನಾಡಿದ ಅವರು ಕಾರ್ಯಕರ್ತರು ಯಾರು ನಾಯಕ ಎಂದು ಕೇಳಿದ್ರು. ಹೀಗಾಗಿ ನಾನೇ ಬರುತ್ತೇನೆ ಎಂದು ಹೇಳಿದ್ದೇನೆ. ನಾನೇ ಬರುತ್ತೇನೆಂದರೆ ಚುನಾವಣೆಯಲ್ಲಿ ನಿಲ್ಲುತ್ತೇನೆಂದಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ರಾಮನಗರದಲ್ಲಿ ಕಾಂಗ್ರೆಸ್ ಪಕ್ಷ ಬೇರೂರಲು ಸಾಧ್ಯವಿಲ್ಲ. ನಮ್ಮ ಕುಟುಂಬಕ್ಕೂ ಇಲ್ಲಿಗೂ ತಾಯಿ, ಮಗನ ಸಂಬಂಧ ಇದೆ ಎಂದು ತಿಳಿಸಿದ್ದಾರೆ.

ಜೆಡಿಎಸ್ ಬಿಟ್ಟು ಸರ್ಕಾರ ರಚನೆ ಸಾಧ್ಯವಿಲ್ಲವೆಂದು ಹೇಳಿದ್ದೇನೆ. ನನ್ನ ಗುರಿ ಮುಂದಿನ ಎಲೆಕ್ಷನ್​ನಲ್ಲಿ 123 ಸ್ಥಾನ ಗೆಲ್ಲುವುದು. ಪ್ರಾದೇಶಿಕ ಪಕ್ಷದ ಸರ್ಕಾರ ತರಲು ಈಗಾಗಲೇ ತಯಾರಿ ಮಾಡುತ್ತಿದ್ದೇನೆ. ಈಗಿನ ಪರಿಸ್ಥಿತಿ ನೋಡಿ ದೇವೇಗೌಡರು ಹೇಳಿಕೆ ನೀಡಿದ್ದಾರೆ. ಮುಂದೆ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದಿದ್ದಾರೆ ಎಂದು ಅವರು ಹೇಳಿದ್ದಾರೆ.

ಹೆಚ್​ಡಿಕೆ ಬಗ್ಗೆ ಮಾಜಿ ಶಾಸಕ ಕೆ.ರಾಜು ವಾಗ್ದಾಳಿ ವಿಚಾರವಾಗಿ, ನಾನು ಶಾಸಕ ಸ್ಥಾನವನ್ನ ದುರುಪಯೋಗಪಡಿಸಿಕೊಂಡಿಲ್ಲ. ಸುಳ್ಳು ದಾಖಲೆ ಸೃಷ್ಟಿಸಿ ಗುಡ್ಡಗಳನ್ನ ಮಾರಾಟ ಮಾಡಿಲ್ಲ. ಶಾಸಕನಾಗುವ ಮೊದಲಿದ್ದಂತೆ ಈಗಲೂ ಬದುಕುತ್ತಿದ್ದೇನೆ. ನಾನು ಯಾರಿಂದಲೂ ಸರ್ಟಿಫಿಕೇಟ್ ತೆಗೆದುಕೊಳ್ಳಬೇಕಿಲ್ಲ ಎಂದು ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಹಿಂದೆ ನಡೆದ ಘಟನೆ ಮರುಕಳಿಸದಂತೆ ಎಚ್ಚರ ವಹಿಸಬೇಕು ಎಂದು ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ವಿಚಾರದ ಬಗ್ಗೆ ರಾಮನಗರದಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಯಾವ ಪುಣ್ಯದ ಹಣದಲ್ಲಿ ರಾಧಿಕಾ ಅವರಿಗೆ ನೂರಾರು ಕೋಟಿ‌ ಕೊಟ್ಟರು: ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಕೆ ರಾಜು ಕಿಡಿ

ಇದನ್ನೂ ಓದಿ: ಅನಿತಾ ಕುಮಾರಸ್ವಾಮಿ ಅವರನ್ನು ಮುಂದಿನ ಚುನಾವಣೆಗೆ ನಿಲ್ಲಿಸಲ್ಲ: ಹೆಚ್​ಡಿ ಕುಮಾರಸ್ವಾಮಿ

Published On - 3:13 pm, Sun, 13 February 22

Follow Us
TV9 Web
TV9 Web

TV9 Kannada

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ