AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾತನಾಡೋರು ಮಾತನಾಡಲಿ, 2023ರ ಚುನಾವಣೆಯಲ್ಲಿ ನಾವು ಏನೆಂದು ತೋರಿಸುತ್ತೇವೆ; ಸಿದ್ದರಾಮಯ್ಯ ವಿರುದ್ಧ ಹೆಚ್​ಡಿಕೆ ಪರೋಕ್ಷ ವಾಗ್ದಾಳಿ

ಮಾತನಾಡೋರು ಮಾತನಾಡಲಿ, ನಮ್ಮ ಶಕ್ತಿ ತೋರಿಸುತ್ತೇವೆ. JDSನಿಂದಲೇ ಬೆಳೆದು ಹೋದವರೊಬ್ಬರು ನಮ್ಮ ಪಕ್ಷದ ಕುರಿತು ಕೇವಲವಾಗಿ ಮಾತನಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ಧ ಹೆಚ್ಡಿಕೆ ವಾಗ್ದಾಳಿ ನಡೆಸಿದ್ದಾರೆ.

ಮಾತನಾಡೋರು ಮಾತನಾಡಲಿ, 2023ರ ಚುನಾವಣೆಯಲ್ಲಿ ನಾವು ಏನೆಂದು ತೋರಿಸುತ್ತೇವೆ; ಸಿದ್ದರಾಮಯ್ಯ ವಿರುದ್ಧ ಹೆಚ್​ಡಿಕೆ ಪರೋಕ್ಷ ವಾಗ್ದಾಳಿ
ಹೆಚ್​.ಡಿ. ಕುಮಾರಸ್ವಾಮಿ
TV9 Web
| Edited By: |

Updated on: Sep 27, 2021 | 1:46 PM

Share

ರಾಮನಗರ: ಮೊಮ್ಮಗನ ಆಗಮನದ ಖುಷಿಯಲ್ಲಿರುವ ಹೆಚ್.ಡಿ. ಕುಮಾರಸ್ವಾಮಿ 2023ರ ಚುನಾವಣೆಯಲ್ಲಿ ತಮ್ಮ ಶಕ್ತಿ ಪ್ರದರ್ಶನಕ್ಕೆ ರಣತಂತ್ರ ಹೆಣೆಯುತ್ತಿದ್ದಾರೆ. ಈಗಿಂದಲೇ ಚುನಾವಣೆಗೆ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. 2023ರ ಚುನಾವಣೆಯಲ್ಲಿ ನಾವು ಏನೆಂದು ತೋರಿಸುತ್ತೇವೆ ಎಂದು ಜೆಡಿಎಸ್ ಕಾರ್ಯಾಗಾರದಲ್ಲಿ H.D.ಕುಮಾರಸ್ವಾಮಿ ಖಡಕ್ ಆಗಿ ನುಡಿದಿದ್ದಾರೆ.

ರಾಮನಗರ ಜಿಲ್ಲೆ ಕೇತಗಾನಹಳ್ಳಿಯಲ್ಲಿ ನಡೆದ JDS ಕಾರ್ಯಾಗಾರದಲ್ಲಿ ಮಾತನಾಡಿದ H.D.ಕುಮಾರಸ್ವಾಮಿ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. ‘ಮಾತನಾಡೋರು ಮಾತನಾಡಲಿ, ನಮ್ಮ ಶಕ್ತಿ ತೋರಿಸುತ್ತೇವೆ. JDSನಿಂದಲೇ ಬೆಳೆದು ಹೋದವರೊಬ್ಬರು ನಮ್ಮ ಪಕ್ಷದ ಕುರಿತು ಕೇವಲವಾಗಿ ಮಾತನಾಡುತ್ತಿದ್ದಾರೆ’ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ಧ ಹೆಚ್ಡಿಕೆ ವಾಗ್ದಾಳಿ ನಡೆಸಿದ್ದಾರೆ.

ಕಳೆದ ಒಂದೂವರೆ ವರ್ಷದಿಂದ ಆಕ್ಟಿವಿಟೀಸ್ ಇರಲಿಲ್ಲ. ಇಂದಿನಿಂದ ನಾಲ್ಕು ದಿನಗಳ ಕಾಲ ಕಾರ್ಯಗಾರ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಅಭ್ಯರ್ಥಿಗಳು ಯಾವ ರೀತಿ ಜನರನ್ನು ತಲುಪಬೇಕು ಎಂಬುದು ನಾಯಕತ್ವ, ಶಿಸ್ತು ಬೆಳೆಸಲು ತರಬೇತಿ ನೀಡಲಾಗುತ್ತದೆ. ಅವರು ನಮ್ಮ ನಿರೀಕ್ಷೆಯಂತೆ ಕೆಲಸ ಮಾಡಬೇಕು. ಆತ್ಮೀಯತೆ ವ್ಯಾಮೋಹ ಅವರ ಮೇಲೆ ಇಲ್ಲ. ಅವರು ಕಾರ್ಯದಕ್ಷತೆಯಿಂದ ಇರಬೇಕು. ಇಲ್ಲದೇ ಹೋದ್ರೆ ಅಭ್ಯರ್ಥಿಗಳನ್ನು ಬದಲಾವಣೆ ಮಾಡುವ ಕೆಲಸವನ್ನೂ ಮಾಡ್ತೀವಿ. ನಮ್ಮ ಪಕ್ಷದಿಂದಲೇ ಬೆಳೆದು ಹೋದವರೊಬ್ಬರು ಲಘುವಾಗಿ ಮಾತನ್ನಾಡುತ್ತಿದ್ದಾರೆ. ನಮ್ಮ ಪಕ್ಷ ಕುರಿತು ಕೇವಲವಾಗಿ ಮಾತನ್ನಾಡುತ್ತಿದ್ದಾರೆ. 2023ರ ಚುನಾವಣೆಯಲ್ಲಿ ನಾವು ಏನು ಅನ್ನೋದನ್ನ ತೋರಿಸುತ್ತೇವೆ. ಮಾತನ್ನಾಡೋರು ಮಾತನ್ನಾಡಲಿ. ನಮ್ಮ ಶಕ್ತಿ ತೋರಿಸುತ್ತೇವೆ ಎಂದು ವಾಗ್ದಾಳಿ ನಡೆಸಿದ್ರು.

JDS ಕಾರ್ಯಕ್ರಮದಲ್ಲಿ ದೊಡ್ಡ ಮಟ್ಟದಲ್ಲಿ ಜನರು ಸೇರುತ್ತಾರೆ. ಆದ್ರೆ ಅದು ಮತವಾಗಿ ಬದಲಾವಣೆ ಆಗುತ್ತಿಲ್ಲ. ಬೇರೆ ಬೇರೆ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳು ಅಧಿಕಾರದಲ್ಲಿವೆ. ರಾಜ್ಯದಲ್ಲಿ ಕನ್ನಡಿಗರಿಗೋಸ್ಕರ ಇರುವ ಪಕ್ಷ ನಮ್ಮದು. ಬಡವರ ಹಲವು ಸಮಸ್ಯೆ ಮುಂದಿಟ್ಟುಕೊಂಡು ಹೊರಟಿದ್ದೇವೆ. 2023ರಿಂದ ಹೊಸ ಯುಗ ಆರಂಭವಾಗಲಿದೆ ಎಂದರು.

ಇದನ್ನೂ ಓದಿ: ಶಾಲೆಯ ತರಗತಿಯಲ್ಲಿ ಹಿಂದಿ ಹಾಡಿಗೆ ಭರ್ಜರಿ ಕುಣಿದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಶಿಕ್ಷಕಿಯರು ಅಮಾನತು

ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು