ರಾಮನಗರ ಎಸಿ ಕೋರ್ಟ್ ಸ್ಥಳಾಂತರ: ಜಿಲ್ಲಾಡಳಿತ ವಿರುದ್ಧ ವಕೀಲರ ಪ್ರತಿಭಟನೆ, ಕುಮಾರಸ್ವಾಮಿ ಸಾಥ್​​

ರಾಮನಗರ ಜಿಲ್ಲಾಡಳಿತದ ವಿರುದ್ಧದ ವಕೀಲರ ಪ್ರತಿಭಟನೆಗೆ ಮಾಜಿ ಮುಖ್ಯಮಂತ್ರಿ ಹೆಚ್​​ಡಿ ಕುಮಾರಸ್ವಾಮಿ ಬೆಂಬಲ ವ್ಯಕ್ತಪಡಿಸಿದ್ದಾರೆ. ರಾಮನಗರ ನ್ಯಾಯಾಲಯಕ್ಕೆ ಭೇಟಿ ನೀಡಿ ವಕೀಲರೊಂದಿಗೆ ಕೆಲಕಾಲ ಚರ್ಚಿಸಿದರು. ಈ ವೇಳೆ ಉಪ ವಿಭಾಗಾಧಿಕಾರಿ ನ್ಯಾಯಾಲಯವನ್ನು ಜಿಲ್ಲಾ ಕೇಂದ್ರದಿಂದ ಸ್ಥಳಾಂತಿರಿಸುವ ಸರ್ಕಾರದ ಆದೇಶದ ವಿರುದ್ಧ ಸದನದಲ್ಲಿ ಧ್ವನಿ ಎತ್ತುವುದಾಗಿ ವಕೀಲರಿಗೆ ಭರವಸೆ ನೀಡಿದರು.

ರಾಮನಗರ ಎಸಿ ಕೋರ್ಟ್ ಸ್ಥಳಾಂತರ: ಜಿಲ್ಲಾಡಳಿತ ವಿರುದ್ಧ ವಕೀಲರ ಪ್ರತಿಭಟನೆ, ಕುಮಾರಸ್ವಾಮಿ ಸಾಥ್​​
ವಕೀಲರೊಂದಿಗೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ
Edited By: ವಿವೇಕ ಬಿರಾದಾರ

Updated on: Nov 24, 2023 | 12:46 PM

ರಾಮನಗರ ನ.24: ಕಂದಾಯಕ್ಕೆ ಸಂಬಂಧಿಸಿದ ಮೇಲ್ಮನವಿ ಪ್ರಕರಣಗಳ ಉಪ ವಿಭಾಗಾಧಿಕಾರಿ ನ್ಯಾಯಾಲಯವನ್ನು ಜಿಲ್ಲಾ ಕೇಂದ್ರ ರಾಮನಗರ (Ramnagar) ದಿಂದ ಕನಕಪುರ ತಾಲೂಕು ಕೇಂದ್ರಕ್ಕೆ ಸ್ಥಳಾಂತರಿಸಿರುವುದನ್ನು ಖಂಡಿಸಿ, ಜಿಲ್ಲಾಡಳಿತದ ವಿರುದ್ಧ ರಾಮನಗರ ವಕೀಲರ ಸಂಘ ಪ್ರತಿಭಟನೆ ನಡೆಸಿತು. ವಕೀಲರ (Lawyers) ಪ್ರತಿಭಟನೆಗೆ ಮಾಜಿ ಮುಖ್ಯಮಂತ್ರಿ ಹೆಚ್​​ಡಿ ಕುಮಾರಸ್ವಾಮಿ (HD Kumaraswamy) ಬೆಂಬಲ ವ್ಯಕ್ತಪಡಿಸಿದ್ದಾರೆ. ರಾಮನಗರ ನ್ಯಾಯಾಲಯಕ್ಕೆ ಭೇಟಿ ನೀಡಿ ವಕೀಲರೊಂದಿಗೆ ಕೆಲಕಾಲ ಚರ್ಚಿಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಹೆಚ್​ಡಿ ಕುಮಾರಸ್ವಾಮಿ, ಉಪವಿಭಾಗಧಿಕಾರಿ ನ್ಯಾಯಾಲಯವನ್ನು ಒಂದು ತಾಲೂಕಿನಲ್ಲಿ ನಡೆಸಲು ತೀರ್ಮಾನ ಮಾಡಿದ್ದಾರೆ. ಇಂತಹ ತೀರ್ಮಾನ ರಾಜ್ಯದ ಯಾವುದೇ ಕ್ಷೇತ್ರದಲ್ಲಿ ಇಲ್ಲ. ಈ ರೀತಿಯ ತೀರ್ಮಾನ ಎಲ್ಲರಿಗೂ ಅಚ್ಚರಿ ತಂದಿದೆ ಎಂದು ಹೇಳಿದರು.

ಈ ನಿರ್ಣಯದ ಬಗ್ಗೆ ವಕೀಲರು ಪ್ರತಿಭಟನೆ ಮಾಡಿದ್ದಾರೆ. ಅವೈಜ್ಞಾನಿಕ ನಿರ್ಧಾರ ಸರಿಯಲ್ಲ. ಇದು ಸರ್ಕಾರದ ಆದೇಶವೋ, ಜಿಲಾಧಿಕಾರಿ ಆದೇಶವೋ ಅಥವಾ ಎಸಿಯವರ ಸ್ವಂತ ತೀರ್ಮಾನವೇ? ಹಾಗೆ ಮಾಡುವುದಿದ್ದರೇ ನಮ್ಮ ತಾಲೂಕಿನಲ್ಲೂ ಬಂದು ಉಪ ವಿಭಾಗಾಧಿಕಾರಿ ನ್ಯಾಯಾಲಯ ನಡೆಸಿ ಎಂದು ಒತ್ತಾಯಿಸಿದರು.

ಇದನ್ನೂ ಓದಿ: ರಾಮನಗರ: ಕೋರ್ಟ್​​ ಆವರಣದಲ್ಲೇ ಶಾಸಕ ಇಕ್ಬಾಲ್ ಹುಸೇನ್ ತರಾಟೆಗೆ ತೆಗೆದುಕೊಂಡ ವಕೀಲರು

ಇದು ತುಘಲಕ್ ಸಂಸ್ಕೃತಿ. ಈ ರೀತಿಯ ತೀರ್ಮಾನ ಮಾಡಲು ಅವಕಾಶವಿಲ್ಲ. ಮಾಡಿದರೇ ಇಡೀ ರಾಜ್ಯಕ್ಕೆ ಅನ್ವಯವಾಗುವ ಹಾಗೆ ಮಾಡಿ. ಕೇವಲ ಕನಕಪುರಕ್ಕೆ ಮಾತ್ರ ಏಕೆ. ಜಿಲ್ಲಾ ಕೇಂದ್ರದಿಂದ ಎಸಿ‌ ಕೋರ್ಟ್​ನ್ನು ತಾಲೂಕಿಗೆ ಸ್ಥಳಾಂತರ ಮಾಡೋದು ಎಷ್ಟು ಸರಿ ? ನಿಮ್ಮ (ವಕೀಲರ) ಪರವಾಗಿ ನಾನು ಸದನದಲ್ಲಿ ಪ್ರಸ್ತಾಪ ಮಾಡುತ್ತೇವೆ. ಸರ್ಕಾರದ ಹುಡುಗಾಟಿಕೆಯ ನಿರ್ಧಾರದ ಬಗ್ಗೆ ಧ್ವನಿ ಎತ್ತಬೇಕು. ಸಮಸ್ಯೆಗಳನ್ನು ಇವರೇ ಉದ್ಭವ ಮಾಡುತ್ತಾರೆ. ನಾನು ನಿಮ್ಮ ಜೊತೆ ಇರುತ್ತೇನೆ, ಸದನದಲ್ಲಿ ಇದನ್ನ ಚರ್ಚೆ ಮಾಡುತ್ತೇನೆ ಎಂದು ವಕೀಲರಿಗೆ ಭರವಸೆ ನೀಡಿದರು.

ಏನಿದು ಪ್ರಕರಣ

ಕಂದಾಯಕ್ಕೆ ಸಂಬಂಧಿಸಿದ ಮೇಲ್ಮನವಿ ಪ್ರಕರಣಗಳ ಉಪ ವಿಭಾಗಾಧಿಕಾರಿ ನ್ಯಾಯಾಲಯವನ್ನು ಜಿಲ್ಲಾ ಕೇಂದ್ರ ರಾಮನಗರದಿಂದ ಕನಕಪುರ ತಾಲೂಕು ಕೇಂದ್ರಕ್ಕೆ ಸ್ಥಳಾಂತರಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಇದರ ವಿರುದ್ಧ ವಕೀಲರು ಪ್ರತಿಭಟನೆ ಮಾಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:38 pm, Fri, 24 November 23

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us