AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಕೊಂಡ ಹಾಯುವಾಗ ಬಿದ್ದು ಅರ್ಚಕನಿಗೆ ಗಾಯ; ಪಟ್ಟಲದಮ್ಮ ಕೊಂಡೋತ್ಸವದ ವೇಳೆ ಅವಗಢ

ಅರ್ಚಕ ರಾಜುವಿಗೆ ಗಂಭೀರ ಗಾಯವಾಗಿದ್ದು, ತಕ್ಷಣ ಕೊಂಡದಿಂದ ಭಕ್ತರು ಮೇಲಿತ್ತಿದ್ದಾರೆ. ಸದ್ಯ ಚನ್ನಪಟ್ಟಣದ ಖಾಸಗಿ ಆಸ್ಪತ್ರೆಗೆ ಅರ್ಚಕರನ್ನು ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗಿದೆ.

ರಾಮನಗರ: ಕೊಂಡ ಹಾಯುವಾಗ ಬಿದ್ದು ಅರ್ಚಕನಿಗೆ ಗಾಯ; ಪಟ್ಟಲದಮ್ಮ ಕೊಂಡೋತ್ಸವದ ವೇಳೆ ಅವಗಢ
ಕೊಂಡ ಹಾಯುವಾಗ ಬಿದ್ದು ಅರ್ಚಕನಿಗೆ ಗಾಯ
TV9 Web
| Edited By: |

Updated on:Mar 26, 2022 | 9:37 AM

Share

ರಾಮನಗರ: ಕೊಂಡ ಹಾಯುವಾಗ ಕೊಂಡಕ್ಕೆ ಬಿದ್ದು, ಅರ್ಚಕರು (Priest) ಗಾಯಗೊಂಡ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಗ್ರಾಮದೇವತೆ ಪಟ್ಟಲದಮ್ಮ ದೇವಿಯ ಕೊಂಡೋತ್ಸವದ ವೇಳೆ ಅವಗಢ ಸಂಭವಿಸಿದೆ. ಅರ್ಚಕ ರಾಜುವಿಗೆ ಗಂಭೀರ ಗಾಯವಾಗಿದ್ದು(Injury), ತಕ್ಷಣ ಕೊಂಡದಿಂದ ಭಕ್ತರು ಮೇಲಿತ್ತಿದ್ದಾರೆ. ಸದ್ಯ ಚನ್ನಪಟ್ಟಣದ ಖಾಸಗಿ ಆಸ್ಪತ್ರೆಗೆ (Hospital) ಅರ್ಚಕರನ್ನು ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗಿದೆ.

ಚಾಮರಾಜನಗರ: ಮೈಮೇಲೆ ಕೆಂಡ ಸುರಿದುಕೊಂಡು ದೇವರಿಗೆ ಪೂಜೆ

ಚಾಮರಾಜನಗರ ಜಿಲ್ಲೆಯ ತೆಳ್ಳನೂರ ಗ್ರಾಮದಲ್ಲಿ ಉರುಕಾತಮ್ಮ ಜಾತ್ರೆಯಲ್ಲಿ ಮೈಮೇಲೆ ಕೆಂಡ ಸುರಿದುಕೊಂಡು ದೇವಸ್ಥಾನದ ಪೂಜಾರಿ ದೇವರಿಗೆ ಪೂಜೆ ಸಲ್ಲಿಸಿದ್ದಾರೆ. ಚಾಮರಾಜನಗರದಲ್ಲಿ ವಿಶಿಷ್ಟವಾಗಿ ಜಾತ್ರೆ ಆಚರಣೆ ಮಾಡಲಾಗಿದೆ. ಮೈಮೇಲೆ ಕೆಂಡ ಸುರಿದುಕೊಂಡರು ಯಾವುದೇ ತೊಂದರೆಯಾಗುವುದಿಲ್ಲ ಎಂಬ ನಂಬಿಕೆ ಇಲ್ಲಿ ಚಾಲ್ತಿಯಲ್ಲಿದೆ. ನೂರಾರು ವರ್ಷಗಳಿಂದ ಗ್ರಾಮದಲ್ಲಿ ಜಾತ್ರೆ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ವಿಷ ಸರ್ಪ ಕಚ್ಚಿದರೆ ದೇವರಿಗೆ ಪೂಜೆ ಸಲ್ಲಿಸಿದರೆ ಬದುಕುಳಿಯುತ್ತಾರೆ ಎಂಬ ನಂಬಿಕೆ ಕೂಡ ಇಲ್ಲಿ ಇದೆ.

ಈ ಹಿಂದೆ ಮಂಡ್ಯದಲ್ಲೂ ಮೂಕಮಾರಮ್ಮ ಹಬ್ಬದ ಕೊಂಡೋತ್ಸವದಲ್ಲಿ ಕೊಂಡ ಹಾಯುವಾಗ ಅರ್ಚಕ ಬಿದ್ದಿದ್ದರು ಕೊಂಡ ಹಾಯುವಾಗ ಅರ್ಚಕೋರ್ವರು ಬಿದ್ದು ಗಾಯಗೊಂಡಿರುವ ಘಟನೆ ಮಂಡ್ಯ  ಜಿಲ್ಲೆ ಮಳವಳ್ಳಿ ತಾಲೂಕಿನ ತಮ್ಮಡಹಳ್ಳಿಯಲ್ಲಿ ನಡೆದಿದೆ. ಗ್ರಾಮದಲ್ಲಿ ಮೂಕಮಾರಮ್ಮ ಹಬ್ಬದ ಕೊಂಡೋತ್ಸವದ ವೇಳೆ ಘಟನೆ ನಡೆದಿದೆ. ಕೊಂಡ ಹಾಯುವ ವೇಳೆ ಪೂಜಾರಿ ನಿಂಗರಾಜು ಕೆಂಡಕ್ಕೆ ಬಿದ್ದಿದ್ದು, ಗಾಯಗೊಂಡಿದ್ದಾರೆ. ಅವರನ್ನು ಸ್ಥಳದಲ್ಲಿದ್ದ ಭಕ್ತರು ತಕ್ಷಣ ರಕ್ಷಿಸಿದ್ದಾರೆ. ಪ್ರಸ್ತುತ ನಿಂಗರಾಜು ಅವರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಳವಳ್ಳಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ:

ಹಾಸನದಲ್ಲಿ ಚಪ್ಪಲಿ ಅಂಗಡಿಗೆ ಬೆಂಕಿಬಿದ್ದು ಲಕ್ಷಾಂತರ ಬೆಲೆಯ ಪಾದರಕ್ಷೆಗಳು ಭಸ್ಮ, ಶಾರ್ಟ್ ಸರ್ಕ್ಯೂಟ್​ನಿಂದಾದ ಅವಗಢ

 ಭದ್ರಾವತಿ ಕಟ್ಟಿಗೆ ಮಿಲ್ಲೊಂದರಲ್ಲಿ ಅಗ್ನಿ ಅವಗಢ, ಲಕ್ಷಾಂತರ ರೂಪಾಯಿ ಮೌಲ್ಯದ ಕಟ್ಟಿಗೆ ಸುಟ್ಟು ಬೂದಿ

Published On - 9:29 am, Sat, 26 March 22

ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್