AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಪಟ್ಟಣ: ಪತ್ನಿಯ ಮಾರ್ಫ್ ಮಾಡಿದ ಅಶ್ಲೀಲ ಚಿತ್ರಗಳನ್ನು ಕಳುಹಿಸಿದ ಸಾಲದ ಏಜೆಂಟ್, ನೊಂದ ಪತಿ ಆತ್ಮಹತ್ಯೆಗೆ ಶರಣು

ಮಂಡ್ಯದ ಮಳವಳ್ಳಿಯ ಸಾಲ ವಸೂಲಾತಿ ಏಜೆಂಟ್ ಆಗಿರುವ ಆರೋಪಿ ಕೆಂಪರಾಜು ಸಾಲ ಮರುಪಾವತಿ ವಿಚಾರವಾಗಿ ತನಗೆ ಕರೆ ಮಾಡಿ ಸ್ನೇಹ ಬೆಳೆಸುತ್ತಿದ್ದ. ಆಗಸ್ಟ್ 30 ರಂದು ಕೆಂಪರಾಜು ಮಾರ್ಫ್ ಮಾಡಿದ ನನ್ನ ಅಶ್ಲೀಲ ಫೋಟೋಗಳನ್ನು ತನ್ನ ಪತಿಗೆ ಕಳುಹಿಸಿದ್ದ. ಇದರಿಂದ ಮನನೊಂದ ಪತಿ ಪ್ರಕಾಶ್ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಚನ್ನಪಟ್ಟಣ: ಪತ್ನಿಯ ಮಾರ್ಫ್ ಮಾಡಿದ ಅಶ್ಲೀಲ ಚಿತ್ರಗಳನ್ನು ಕಳುಹಿಸಿದ ಸಾಲದ ಏಜೆಂಟ್, ನೊಂದ ಪತಿ ಆತ್ಮಹತ್ಯೆಗೆ ಶರಣು
ಮಾರ್ಫ್ ಮಾಡಿದ ಚಿತ್ರ ಕಳುಹಿಸಿದ ಸಾಲದ ಏಜೆಂಟ್, ನೊಂದ ಪತಿ ಆತ್ಮಹತ್ಯೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 05, 2023 | 12:16 PM

Share

ರಾಮನಗರ: ಸಾಲ ವಸೂಲಾತಿ ಏಜೆಂಟ್ ತನ್ನ ಪತ್ನಿಯ (wife) ಫೋಟೋಗಳನ್ನು ಮಾರ್ಫಿಂಗ್ ಮಾಡಿ ಅಶ್ಲೀಲ ಚಿತ್ರಗಳನ್ನು (morphed photos) ಕಳುಹಿಸಿದ್ದಕ್ಕೆ 42 ವರ್ಷದ ವ್ಯಕ್ತಿ ಆತ್ಮಹತ್ಯೆ (suicide) ಮಾಡಿಕೊಂಡಿದ್ದಾರೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತರು ಚನ್ನಪಟ್ಟಣದ ಶೆಟ್ಟಿಹಳ್ಳಿ ನಿವಾಸಿ ಪ್ರಕಾಶ್. ಪ್ರಕಾಶ್ ಮತ್ತು ಅವರ ಪತ್ನಿ ಚನ್ನಪಟ್ಟಣದ ಮಂಗಳವಾರಪೇಟೆಯಲ್ಲಿರುವ (Mangalawarapet in Channapatna) ಖಾಸಗಿ ಫೈನಾನ್ಸ್ ಸಂಸ್ಥೆಯಲ್ಲಿ ಸಾಲ ಮಾಡಿದ್ದರು. ಪ್ರಕಾಶ್ ತಮ್ಮ ಪತ್ನಿಯ ಹೆಸರಿನಲ್ಲಿ ಸಾಲ (loan) ಪಡೆದಿದ್ದು, ಆಕೆಯ ಫೋನ್ ನಂಬರ್, ಫೋಟೋ ಮುಂತಾದ ವಿವರಗಳನ್ನು ಸಾಲದ ಏಜೆಂಟ್ ಕೆಂಪರಾಜು ಎಂಬಾತನಿಗೆ ನೀಡಿದ್ದರು.

ಮಂಡ್ಯದ ಮಳವಳ್ಳಿಯ ಸಾಲ ವಸೂಲಾತಿ ಏಜೆಂಟ್ ಆಗಿರುವ ಆರೋಪಿ ಕೆಂಪರಾಜು ಸಾಲ ಮರುಪಾವತಿ ವಿಚಾರವಾಗಿ ತನಗೆ ಕರೆ ಮಾಡಿ ಸ್ನೇಹ ಬೆಳೆಸುತ್ತಿದ್ದ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಅ ವೇಳೆಯಲ್ಲೆಲ್ಲಾ ತನಗೆ ಕರೆ ಮಾಡಿ, ನಗ್ನ ಛಾಯಾಚಿತ್ರಗಳನ್ನು ಕಳುಹಿಸುವಂತೆ ಕೇಳುತ್ತಿದ್ದ ಎಂದು ಮಹಿಳೆ ದೂರಿದ್ದಾರೆ. ಆಕೆ ಅದಕ್ಕೆ ನಿರಾಕರಿಸಿದ್ದರಿಂದ ಆಕೆಯ ಅಶ್ಲೀಲ ಫೋಟೋಗಳನ್ನು ಸೃಷ್ಟಿಸಿ, ಪತಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಆಕೆ ಮಣಿಯದೇ ಇದ್ದಾಗ ಆಕೆಗೆ ನಕಲಿ ಅಶ್ಲೀಲ ಚಿತ್ರಗಳನ್ನು ತೋರಿಸಿ ಹಣ ಹಾಗೂ ಚಿನ್ನಾಭರಣಕ್ಕೆ ಬೇಡಿಕೆ ಇಡುತ್ತಿದ್ದ. ಅಲ್ಲದೇ, ಅದನ್ನು ಕುಟುಂಬದವರು ಹಾಗೂ ಸಂಬಂಧಿಕರೊಂದಿಗೆ ಹಂಚಿಕೊಳ್ಳುವುದಾಗಿ ಬೆದರಿಕೆ ಹಾಕುತ್ತಿದ್ದನಂತೆ.

Also Read: ತಂದೆಯ ಬರ್ಬರ ಹತ್ಯೆ, ಅಪ್ಪನಿಗೂ ಗೊತ್ತಿತ್ತು ಪುತ್ರಿಯೇ ತನ್ನನ್ನು ಸಾಯಿಸಬಹುದು ಅಂತಾ, ಹತ್ಯೆ ಮಾಡಿದ ಮಗಳು ಎಲ್ಲಿ ಹೋದಳು

ಆಗಸ್ಟ್ 30 ರಂದು ಕೆಂಪರಾಜು ಮಾರ್ಫ್ ಮಾಡಿದ ನನ್ನ ಅಶ್ಲೀಲ ಫೋಟೋಗಳನ್ನು ತನ್ನ ಪತಿಗೆ ಕಳುಹಿಸಿದ್ದನು. ಇದರಿಂದ ಮನನೊಂದ ಪ್ರಕಾಶ್ ಶನಿವಾರ ಬೆಳಗ್ಗೆ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ದೂರಿನ ಆಧಾರದ ಮೇಲೆ ಕೆಂಪರಾಜು ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆತ್ಮಹತ್ಯೆ ಮತ್ತು ಐಟಿ ಕಾಯ್ದೆ ಸೇರಿದಂತೆ ಇತರೆ ಆರೋಪಗಳನ್ನು ಹೊರಿಸಲಾಗಿದೆ. ಆರೋಪಿಯನ್ನು ಹಿಡಿಯುವ ಪ್ರಯತ್ನ ನಡೆದಿದೆ ಎಂದು ಚನ್ನಪಟ್ಟಣ ಟೌನ್ ಪೊಲೀಸರು ತಿಳಿಸಿದ್ದಾರೆ.

ರಾಮನಗರ ಜಿಲ್ಲಾ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ