AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಂಡತಿ ಜೊತೆ ಅನೈತಿಕ ಸಂಬಂಧ ಆರೋಪ; ಯುವಕನನ್ನು ಕೊಂದು ಪೊಲೀಸರ ಮುಂದೆ ಶರಣಾದ ವ್ಯಕ್ತಿ

ಬೆಂಗಳೂರಿನಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಜಗದೀಶ್, ಹಬ್ಬಕ್ಕೆಂದು ಊರಿಗೆ ಬಂದಿದ್ದ. ಈ ವೇಳೆ ಕೊಲೆ ಮಾಡಲಾಗಿದೆ. ಇದೇ ಗ್ರಾಮದ ರಾಮು ಎಂಬ ವ್ಯಕ್ತಿಯ ಪತ್ನಿ ಜೊತೆ ಜಗದೀಶ್ ಅನೈತಿಕ ಸಂಬಂಧ ಹೊಂದಿದ್ದನಂತೆ.

ಹೆಂಡತಿ ಜೊತೆ ಅನೈತಿಕ ಸಂಬಂಧ ಆರೋಪ; ಯುವಕನನ್ನು ಕೊಂದು ಪೊಲೀಸರ ಮುಂದೆ ಶರಣಾದ ವ್ಯಕ್ತಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 16, 2022 | 9:03 AM

Share

ರಾಮನಗರ: ಅನೈತಿಕ ಸಂಬಂಧ ಆರೋಪ ಹಿನ್ನೆಲೆ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ‌ ತಾಲೂಕಿನ ತೇರಿನದೊಡ್ಡಿ ಗ್ರಾಮದಲ್ಲಿ ನಡೆದಿದೆ. 28 ವರ್ಷದ ಜಗದೀಶ್ ಹತ್ಯೆಯಾದ ಯುವಕ.

ಬೆಂಗಳೂರಿನಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಜಗದೀಶ್, ಹಬ್ಬಕ್ಕೆಂದು ಊರಿಗೆ ಬಂದಿದ್ದ. ಈ ವೇಳೆ ಕೊಲೆ ಮಾಡಲಾಗಿದೆ. ಇದೇ ಗ್ರಾಮದ ರಾಮು ಎಂಬ ವ್ಯಕ್ತಿಯ ಪತ್ನಿ ಜೊತೆ ಜಗದೀಶ್ ಅನೈತಿಕ ಸಂಬಂಧ ಹೊಂದಿದ್ದನಂತೆ. ಹೀಗಾಗಿ ರಾಮು(32) ಜಗದೀಶ್ ಬೆಂಗಳೂರಿನಿಂದ ಗ್ರಾಮಕ್ಕೆ ಬಂದ ಸುದ್ದಿ ತಿಳಿಯುತ್ತಿದ್ದಂತೆ ಕೊಲೆ ಮಾಡಲು ಮುಂದಾಗಿದ್ದಾನೆ. ಸಂಕ್ರಾಂತಿ ಹಬ್ಬದ ಹಿನ್ನೆಲೆ ನಿನ್ನೆ ರಾತ್ರಿ ಕಿಚ್ಚು ಹಾಯಿಸಿದ ನಂತರ ಜಗದೀಶ್ನನ್ನು ರಾಮು ಕೊಲೆ ಮಾಡಿದ್ದಾನೆ. ಬಳಿಕ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ. ಕನಕಪುರ ಗ್ರಾಮಾಂತರ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

4-5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ 4-5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮೊಹಮ್ಮದ್ ತಬ್ರೇಜ್ ಪಾಷಾ ಅಲಿಯಾಸ್ ಛೋಟಾ ಟೈಗರ್​ನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಯತ್ನ, ಸುಲಿಗೆ, ದರೋಡೆ ಪ್ರಕರಣಗಳ ಆರೋಪಿ ತಬ್ರೇಜ್ ಪಾಷಾ ವಿರುದ್ಧ 16 ಪ್ರಕರಣಗಳು ಇವೆ. ಹಾಗೂ ಈತ 2 ಮದುವೆ ಸಹ ಆಗಿದ್ದಾನೆ. ಹೆಲ್ಮೆಟ್ ಹಾಕಿಕೊಂಡು‌ ಸುಲಿಗೆ ಮಾಡೋದು ಈತನ ಸ್ಟೈಲ್.

ಆರೋಪಿ ತಬ್ರೇಜ್ ಡಿಸೆಂಬರ್ 17ರಂದು ಬೇಕರಿಗೆ ನುಗ್ಗಿ‌ ಸುಲಿಗೆ ಮಾಡಿದ್ದ. ಫೈನಾನ್ಸ್ ಹಣ ಕಲೆಕ್ಟ್ ಮಾಡಲು ಬಂದಿದ್ದ ಏಜೆಂಟ್ ನಿಂದ 28 ಸಾವಿರ ಹಣ ಕಿತ್ತುಕೊಂಡು ಪರಾರಿಯಾಗಿದ್ದ. 2017 ರಲ್ಲಿ ಆರ್.ಟಿ ನಗರದಲ್ಲಿ ಅರೆಸ್ಟ್ ಅಗಿದ್ದ. ಆ ನಂತರದಿಂದ ಯಾರ ಕೈಗೂ ಸಿಗದೇ ತಲೆಮರೆಸಿಕೊಂಡಿದ್ದ. ರಾಬರಿ ಯಾರನ್ನು ಬಳಸಿಕೊಳ್ಳದೇ ಒಬ್ಬನೆ ಮಾಡ್ತಾನೆ. ಮಾಹಿತಿಗೆ ಮಾತ್ರ ಬೇರೆ ಹುಡುಗರ ಬಳಸಿಕೊಳ್ತಾನೆ. ನಗರದ ಕೆ.ಜಿ ಹಳ್ಳಿ , ಡಿ.ಜೆ ಹಳ್ಳಿ, ಜೆಸಿ ನಗರ ಭಾಗದಲ್ಲಿ ಮೈಕ್ರೊ ಫೈನಾನ್ಸ್ ಗಳನ್ನೆ ಟಾರ್ಗೆಟ್ ಮಾಡ್ತಿದ್ದ. ಇಪ್ಪತೈದು ಮೂವತ್ತು ಫೈನಾನ್ಸ್ ಗಳ ಬಳಿ ಮಂತ್ಲಿ ಫಿಕ್ಸ್ ಮಾಡಿಕೊಂಡಿದ್ದ. ಮಂತ್ಲಿ ಕೊಡಲ್ಲಾ ಅಂದವರ ಮೇಲೆ ಅಟ್ಯಾಕ್ ಮಾಡ್ತಿದ್ದ. ಡಿಸೆಂಬರ್ 17 ರಂದು ಮಂಜುನಾಥ್ ಎಂಬ ಕಲೆಕ್ಷನ್ ಏಜೆಂಟ್ ಗೆ ಹೆದರಿಸಿ ಹಣ ಕಿತ್ತುಕೊಂಡಿದ್ದ. ಚಾಕು ತೋರಿಸಿ ಅವನ ಬಳಿ ಇದ್ದ ಇಪ್ಪತ್ತೇಳು ಸಾವಿರ ಹಣ ದೋಚಿದ್ದ. ಹೆಬ್ಬಾಳ, ವಿದ್ಯಾರಣ್ಯಪುರ, ಯಶವಂತಪುರ ಸೇರಿ ಹಲವೆಡೆ ಇದೇ ರೀತಿ ಕೃತ್ಯ ಎಸಗಿದ್ದ. ನಗರದಲ್ಲಿ ಪೊಲೀಸರು ಬೆನ್ನು ಹತ್ತಿದ್ದಾರೆ ಅಂದ್ರೆ ಮೈಸೂರು ಹೋಗ್ತಿದ್ದ. ಸದ್ಯ ಈಗ ಪೊಲೀಸರು ಆರೋಪಿ ತಬ್ರೇಜ್​ನನ್ನು ಅರೆಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಪ್ರಿಯಕರನಿಗಾಗಿ ಪತಿಯ ಕೊಲೆ ಮಾಡಿ ಮೂರ್ಛೆ ರೋಗದಿಂದ ಸಾವು ಎಂದು ಕತೆ ಕಟ್ಟಿದ್ದ ಖರ್ತನಾಕ್ ಲೇಡಿಯ ಬಂಧನ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ