Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಗರಸಭೆ ನಿರ್ಲಕ್ಷ್ಯದಿಂದ ಅನೈತಿಕ ಚಟುವಟಿಕೆಗಳ ತಾಣವಾದ ರಾಮನಗರದ ಹೃದಯಭಾಗದಲ್ಲಿನ ಮಹಾತ್ಮಗಾಂಧಿ ಪಾರ್ಕ್​​

ರಾಮನಗರದ ಹೃದಯಭಾಗದಲ್ಲಿರೋ ಏಕೈಕ ಉದ್ಯಾನವನ ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸೂಕ್ತ ನಿರ್ವಾಹಣೆ ಇಲ್ಲದೇ ಅನೈತಿಕ ಚಟುವಟಿಕೆ ತಾಣವಾಗಿದೆ.

ನಗರಸಭೆ ನಿರ್ಲಕ್ಷ್ಯದಿಂದ ಅನೈತಿಕ ಚಟುವಟಿಕೆಗಳ ತಾಣವಾದ ರಾಮನಗರದ ಹೃದಯಭಾಗದಲ್ಲಿನ ಮಹಾತ್ಮಗಾಂಧಿ ಪಾರ್ಕ್​​
ರಾಮನಗರ ಮಹಾತ್ಮಗಾಂಧಿ ಉದ್ಯಾನವನ
Follow us
TV9 Web
| Updated By: ವಿವೇಕ ಬಿರಾದಾರ

Updated on: Dec 02, 2022 | 9:46 PM

ರಾಮನಗರ: ರೇಷ್ಮೆನಗರಿ ರಾಮನಗರದ ಹೃದಯಭಾಗದಲ್ಲಿರೋ ಏಕೈಕ ಉದ್ಯಾನವನ ಅದು. ನಗರಕ್ಕೆ ವಿವಿಧ ಕೆಲಸಗಳ ನಿಮಿತ್ತ ಬರುವ ಜನರಿಗೆ ವಿಶ್ರಾಂತಿ ತಾಣ. ಆದರೆ, ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸೂಕ್ತ ನಿರ್ವಾಹಣೆ ಇಲ್ಲದೇ ಆ ಪಾರ್ಕ್ ಅನಾಥವಾಗಿದೆ. ವಾಯುವಿಹಾರಿಗಳಿಗೆ ಅನುಕೂಲವಾಗಲಿ ಅಂತ ಲಕ್ಷಾಂತರ ರೂ ಖರ್ಚು ಮಾಡಿ ನಿರ್ಮಾಣ ಮಾಡಿರೋ ಜಿಮ್ ಯಂತ್ರಗಳು ತುಕ್ಕು ಹಿಡಿದು ಕಳಚಿ ಬಿದ್ದಿವೆ. ಮತ್ತೊಂದೆಡೆ ಪಾರ್ಕ್ ಸೋಂಬೆರಿಗಳ ಅಡ್ಡವಾಗಿದೆ. ಇಷ್ಟೆಲ್ಲ ಇದ್ದರು ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಕಣ್ಣು ಮುಚ್ಚಿ ಕುಳಿತಿದ್ದಾರೆ.

ರಾಮನಗರದ ಕೋರ್ಟ್ ಹಾಗೂ ತಾಲೂಕು ಕಚೇರಿ ಪಕ್ಕದಲ್ಲೇ ನಗರದ ಹೃದಯ ಭಾಗದಲ್ಲಿರುವ ಮಹಾತ್ಮಗಾಂಧಿ ಉದ್ಯಾನವನ ಸೂಕ್ತ ನಿರ್ವಹಣೆ ಇಲ್ಲದೇ ಅನಾಥವಾಗಿದೆ. ಅವ್ಯವಸ್ಥೆಗಳೇ ತುಂಬಿ ತುಳುಕುತ್ತಿರುವ ಈ ಉದ್ಯಾನವನದಲ್ಲಿ ಮಧ್ಯಾಹ್ನದ ವೇಳೆ ಕಾಲೇಜು ವಿದ್ಯಾರ್ಥಿಗಳ ಅನೈತಿಕ ತಾಣವಾದರೇ, ಸಂಜೆಯಾಗುತ್ತಿದ್ದಂತೆ ಕುಡುಕರ ಅಡ್ಡೆಯಾಗಿ ಮಾರ್ಪಟ್ಟಿದೆ. ಇದರಿಂದಾಗಿ ಕೆಲವು ವಿಶ್ರಾಂತಿ ಪಡೆಯಲು ಬರುವ ಜನರು ಮುಜುಗರ ಪಡುವಂತಾಗಿದೆ. ಇಷ್ಟೇ ಅಲ್ಲದೆ ಸಂಬಂಧಪಟ್ಟ ಅಧಿಕಾರಿಗಳು ಪಾರ್ಕ್ ನಿರ್ವಹಣೆ ಸಹ ಮಾಡಿಲ್ಲ. ಇನ್ನು ಕೆಲವೇ ದಿನಗಳ ಕೆಳಗೆ ಸ್ಥಾಪನೆ ಮಾಡಲಾದ ಗಾಂಧೀಜಿ ಪ್ರತಿಮೆ ಕೂಡ ನಾಪತ್ತೆಯಾಗಿದೆ. ಇಷ್ಟೆಲ್ಲಾದರು ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ.

ಪ್ರತಿನಿತ್ಯ ನೂರಾರು ಜನರು ನ್ಯಾಯಾಲಯ ಹಾಗೂ ತಾಲೂಕು ಕಚೇರಿಗೆ ಬರುವ ಜನರು ಹೆಚ್ಚಿರುತ್ತಾರೆ. ಕೆಲಸ ವಿಳಂಬವಾದರೆ, ವಿಶ್ರಾಂತಿ ಪಡೆಯಲು ಈ ಮಹಾತ್ಮಗಾಂಧಿ ಉದ್ಯಾನವನಕ್ಕೆ ಬಂದು ಕೂರುತ್ತಾರೆ. ಇನ್ನು ಮಳೆ ಬಂದಾಗ ಪಾರ್ಕ್ ಹಚ್ಚಹಸಿರಿನಿಂದ ಕೂಡಿರುತ್ತದೆ. ಮಳೆ ಬಾರದಿದ್ದರೇ ನೀರು ಹಾಕುವವರೇ ಇಲ್ಲದೇ ಉದ್ಯಾನವನ ಸಪ್ಪೆಯಾಗಿರುತ್ತದೆ.

ಇನ್ನು ವಾಯುವಿಹಾರಿಗಳಿಗೆ ಅನುಕೂಲವಾಗಲಿ ಎಂದು ಲಕ್ಷಾಂತರ ರೂ ಖರ್ಚು ಮಾಡಿ ಜಿಮ್ ಯಂತ್ರಗಳನ್ನ ಅಳವಡಿಸಲಾಗಿದೆ. ಆದರೆ ಇವು ಸಹ ಬಳಕೆಗೆ ಬಾರದಂತೆ ಆಗಿವೆ. ಸೈಕಲ್, ಫನ್ವಾಕರ್, ಶೋಲ್ಡರ್, ಪ್ರೆಸ್ ಸೇರಿದಂತೆ ವ್ಯಾಯಾಮ ಸಾಧನಗಳು ತುಕ್ಕು ಹಿಡಿದಿವೆ. ಕೆಲವು ಕಳಚಿ ಬಿದ್ದಿವೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕೆಂದು ಸ್ಥಳೀಯರು ಆಗ್ರಹಿಸುತ್ತಿದ್ದಾರೆ.

ಒಟ್ಟಾರೆಯಾಗಿ ನಿರ್ವಹಣೆ ಇಲ್ಲದೇ ಅನಾಥವಾಗಿರುವ ಮಹಾತ್ಮಗಾಂಧಿ ಉದ್ಯಾನವನದ ನಿರ್ವಾಹಣೆ ಮಾಡಬೇಕಿದೆ. ಇನ್ನಾದರು ಸಂಬಂಧಪಟ್ಟ ನಗರಸಭೆ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕಿದೆ.

ಪ್ರಶಾಂತ್ ಹುಲಿಕೆರೆ, ಟಿವಿ9 ರಾಮನಗರ

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ