AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕ್ರಮವಾಗಿ 15 ಇ ಖಾತೆ ಮಾಡಿಕೊಟ್ಟ ಆರೋಪ, ಕನಕಪುರದ ಕಾಂಗ್ರೆಸ್ ಮುಖಂಡನ ಮನೆಯ ಮೇಲೆ ಪೊಲೀಸರ ದಾಳಿ

ಭ್ರಷ್ಟಾಚಾರ ಮತ್ತು ಆಕ್ರಮ ಖಾತೆ ವಿಚಾರವಾಗಿ ರಾಮನಗರ ‌ಜಿಲ್ಲೆಯ ಕನಕಪುರ ನಗರಸಭೆ ಮತ್ತು ಮಾಗಡಿ ಪುರಸಭೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಮನಗರ ಎಸಿಬಿ ಡಿವೈಎಸ್ ಪಿ ಗೋಪಾಲ್ ಜೋಗಿನ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಕಚೇರಿಯಲ್ಲಿ ಕಡತಗಳ ಪರಿಶೀಲನೆ ನಡೆದಿದೆ.

ಆಕ್ರಮವಾಗಿ 15 ಇ ಖಾತೆ ಮಾಡಿಕೊಟ್ಟ ಆರೋಪ, ಕನಕಪುರದ ಕಾಂಗ್ರೆಸ್ ಮುಖಂಡನ ಮನೆಯ ಮೇಲೆ ಪೊಲೀಸರ ದಾಳಿ
ಆಕ್ರಮವಾಗಿ 15 ಇ ಖಾತೆ ಆರೋಪ, ಕನಕಪುರದ ಕಾಂಗ್ರೆಸ್ ಮುಖಂಡನ ಮನೆಯ ಮೇಲೆ ಪೊಲೀಸರ ದಾಳಿ
TV9 Web
| Updated By: ಸಾಧು ಶ್ರೀನಾಥ್​|

Updated on:May 10, 2022 | 3:40 PM

Share

ರಾಮನಗರ: ಆಕ್ರಮವಾಗಿ ಡಿಜಿಟಲ್ ಕೀ ಬಳಸಿ 15 ಇ ಖಾತೆಗಳನ್ನು (Illegal E Khatha) ಮಾಡಿಕೊಟ್ಟಿರುವ ಆರೋಪದ ಮೇಲೆ ಕನಕಪುರ ನಗರಸಭೆ ಉಪಾಧ್ಯಕ್ಷ ರಾಮು (Kanakapura city municipal council deputy chairman) ಮನೆ ಹಾಗೂ ಆತನಿಗೆ ಸೇರಿದ ದುರ್ಗಾ ಸೈಬರ್ ಸೆಂಟರ್ ಮೇಲೆ ರಾಮನಗರ ಸಿಇಎನ್ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ (CEN police raid). ಕನಕಪುರ‌ದ ಬೂದಿಗೆರೆ ನಗರದಲ್ಲಿ ಇರುವ ಸೈಬರ್ ಸೆಂಟರ್ ಮತ್ತು ಮಹದೇಶ್ವರ ಬಡಾವಣೆಯಲ್ಲಿರೋ ಮನೆಯ ಮೇಲೆ ಈ ದಾಳಿ ನಡೆದಿದೆ. ಡಿಜಿಟಲ್ ಕೀ ಬಳಸಿ ಆಕ್ರಮ ಇ ಖಾತೆ ಕೊಟ್ಟ ಆರೋಪದ ಹಿನ್ನೆಲೆ ದಾಳಿ ನಡೆಸಿದಾಗ ಸೈಬರ್ ಸೆಂಟರ್ ನಲ್ಲಿ ಸಾವಿರಾರು ಖಾತೆಗಳನ್ನ ಮಾಡಿಕೊಟ್ಟರೊ ಶಂಕೆ ವ್ಯಕ್ತವಾಗಿದೆ.

ಕನಕಪುರದ ಕಾಂಗ್ರೆಸ್ ಮುಖಂಡ, ಹಾಲಿ ನಗರಸಭೆ ಉಪಾಧ್ಯಕ್ಷ ರಾಮು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಆಪ್ತ ಎಂದು ತಿಳಿದುಬಂದಿದೆ. ದಾಳಿ ನಡೆದ ಎರಡೂ ಕಡೆಗಳಲ್ಲಿ ಸಿಇಎನ್ ಠಾಣೆ ಪೊಲೀಸರು ಕಂಪ್ಯೂಟರ್ ಗಳ ಪರಿಶೀಲನೆ ನಡೆಸುತ್ತಿದ್ದಾರೆ. ಸೈಬರ್ ರಾಮು ಸದ್ಯ ತಲೆ ಮರೆಸಿಕೊಂಡಿದ್ದಾರೆ. ಮಂಚನಾಯನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 15 ಇ ಖಾತೆಗಳನ್ನ ನಕಲಿ‌ ಮಾಡಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಸಿಇಎನ್ ಠಾಣೆಯಲ್ಲಿ ರಾಮು ವಿರುದ್ದ ಪ್ರಕರಣ ದಾಖಲಾಗಿತ್ತು.

ಎಸಿಬಿ ಅಧಿಕಾರಿಗಳಿಂದ ದಾಳಿ: ಭ್ರಷ್ಟಾಚಾರ ಮತ್ತು ಆಕ್ರಮ ಖಾತೆ ವಿಚಾರವಾಗಿ ರಾಮನಗರ ‌ಜಿಲ್ಲೆಯ ಕನಕಪುರ ನಗರಸಭೆ ಮತ್ತು ಮಾಗಡಿ ಪುರಸಭೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಮನಗರ ಎಸಿಬಿ ಡಿವೈಎಸ್ ಪಿ ಗೋಪಾಲ್ ಜೋಗಿನ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಕಚೇರಿಯಲ್ಲಿ ಕಡತಗಳ ಪರಿಶೀಲನೆ ನಡೆದಿದೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:34 pm, Tue, 10 May 22

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ