Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ; ಮೇಕೆದಾಟು ಪಾದಯಾತ್ರೆ ಮೇಲೆ ನೇರ ಕರಿನೆರಳು: ನಾವಿಬ್ಬರೇ ಹೆಜ್ಜೆ ಹಾಕ್ತೀವಿ -ಸಿದ್ಧರಾಮಯ್ಯ

ಕಾಂಗ್ರೆಸ್ ಪಾದಯಾತ್ರೆ ಆರಂಭಗೊಳ್ಳುವ ಸಂಗಮದಲ್ಲೂ ನಿಷೇಧಾಜ್ಷೆ ಜಾರಿ ಮಾಡಲಾಗಿದೆ. ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಮೇಕೆದಾಟು ಪಾದಯಾತ್ರೆ ಮೇಲೆ ಜಿಲ್ಲಾಡಳಿತದ ಈ ಕ್ರಮ ಪರಿಣಾಮ ಬೀರುವ ಸಾಧ್ಯತೆಯಿದೆ.

ರಾಮನಗರ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ; ಮೇಕೆದಾಟು ಪಾದಯಾತ್ರೆ ಮೇಲೆ ನೇರ ಕರಿನೆರಳು: ನಾವಿಬ್ಬರೇ ಹೆಜ್ಜೆ ಹಾಕ್ತೀವಿ -ಸಿದ್ಧರಾಮಯ್ಯ
ರಾಮನಗರ (Pic: Indian Holoday)
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jan 06, 2022 | 1:40 PM

ರಾಮನಗರ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ರಾಮದೇವರಬೆಟ್ಟ, ರೇವಣಸಿದ್ದೇಶ್ವರ ಬೆಟ್ಟ, ಕಣ್ವ ಜಲಾಶಯ, ಮಂಚನಬೆಲೆ, ಸಾವನದುರ್ಗ, ಸಂಗಮ, ಮೇಕೆದಾಟು, ಚುಂಚಿ ಫಾಲ್ಸ್‌ಗಳಲ್ಲಿ ಪ್ರವಾಸಿಗರಿಗೆ ನಿರ್ಬಂಧ ಹೇರಿ ರಾಮನಗರ ಜಿಲ್ಲಾಧಿಕಾರಿ ಡಾ.ರಾಕೇಶ್‌ಕುಮಾರ್ ಆದೇಶ ಹೊರಡಿಸಿದ್ದಾರೆ.

ಕಾಂಗ್ರೆಸ್ ಪಾದಯಾತ್ರೆ ಆರಂಭಗೊಳ್ಳುವ ಸಂಗಮದಲ್ಲೂ ನಿಷೇಧಾಜ್ಷೆ ಜಾರಿ ಮಾಡಲಾಗಿದೆ. ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಮೇಕೆದಾಟು ಪಾದಯಾತ್ರೆ ಮೇಲೆ ಜಿಲ್ಲಾಡಳಿತದ ಈ ಕ್ರಮ ಪರಿಣಾಮ ಬೀರುವ ಸಾಧ್ಯತೆಯಿದೆ.

ಸಂಗಮಕ್ಕೆ ರಾಮನಗರ SP ಗಿರೀಶ್‌ ಭೇಟಿ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಜ.9ರಿಂದ ‘ಕೈ’ ಪಾದಯಾತ್ರೆ ಹಿನ್ನೆಲೆ ಪಾದಯಾತ್ರೆ ಆರಂಭವಾಗುವ ಸ್ಥಳಕ್ಕೆ ರಾಮನಗರ SP ಗಿರೀಶ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಧರಣಿ ಆರಂಭ ಸ್ಥಳ ಸಂಗಮ ಬಳಿ ಪರಿಶೀಲನೆ ನಡೆಸಿದ್ದಾರೆ.

144 ಸೆಕ್ಷನ್ ವಿಧಿಸಿದರೆ ನಾವಿಬ್ಬರಾದರೂ ನಡೆಯುತ್ತೇವೆ: ಚಿತ್ರದುರ್ಗದಲ್ಲಿ ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿಕೆ ನಿಷೇಧಾಜ್ಞೆ ಅಂದರೆ 4 ಜನ ಸೇರಬಾರದು ಅಲ್ಲವಾ, ಆಯ್ತು ನಾವಿಬ್ಬರೇ ಜೊತೆಯಾಗಿ ಹೆಜ್ಜೆ ಹಾಕುತ್ತೇವೆ. ಅದಕ್ಕೇನೂ ಅಡ್ಡಿಯಿಲ್ಲ ಎಂಬೋ ಧಾಟಿಯಲ್ಲಿ ಚಿತ್ರದುರ್ಗದಲ್ಲಿ ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ.

ಮುಂಜಾಗ್ರತಾ ಕ್ರಮವಹಿಸಿಯೇ ಮೇಕೆದಾಟು ಹೋರಾಟ ಮಾಡ್ತೀವಿ. 144 ಸೆಕ್ಷನ್ ವಿಧಿಸಿದರೆ ನಾವಿಬ್ಬರಾದರೂ ನಡೆಯುತ್ತೇವೆ ಎಂದರು ಹಾಗೂ ಮೇಕೆದಾಟು ಹೋರಾಟ ರಾಜಕೀಯ ಅಜೆಂಡಾ ಎಂದ ಕೋಡಿಹಳ್ಳಿ ಚಂದ್ರಶೇಖರ್​ಗೆ ಸಿದ್ಧರಾಮಯ್ಯ ಟಾಂಗ್ ಕೊಟ್ಟಿದ್ದಾರೆ. ರೈತ ಸಂಘದವರಾ? ಏನ್ ಹೇಳಿದ್ದಾರೆ ಎಂದು ಮರುಪ್ರಶ್ನೆ ಮಾಡಿದ್ದಾರೆ. ಹಾಗೂ ಕಾಂಗ್ರೆಸ್ ಪಕ್ಷ ರಾಜಕೀಯ ಪಕ್ಷ ನಿಜ, ರಾಜಕೀಯ ಅಜೆಂಡಾ ಅಲ್ಲ ಎಂದಿದ್ದಾರೆ. ನಾನು ಸಿಎಂ ಆಗಿದ್ದಾಗ ಮೇಕೆದಾಟು ಯೋಜನೆ ಡಿಪಿಆರ್ ಸಿದ್ಧತೆ. ಆದ್ರೆ ಎರಡೂವರೆ ವರ್ಷದಿಂದ ರಾಜ್ಯ ಬಿಜೆಪಿ ಸರ್ಕಾರ ಮಲಗಿದೆ. ಮೇಕೆದಾಟು ಯೋಜನೆ ಪ್ರಾರಂಭಿಸಲು ಕಾನೂನು ತಡೆ ಇಲ್ಲ. ರಾಜಕೀಯಕ್ಕಾಗಿ ತಮಿಳುನಾಡು ಕ್ಯಾತೆ, ಬಿಜೆಪಿ ಕುಮ್ಮಕ್ಕು ನೀಡ್ತಿದೆ. ಧರಣಿಗೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಕುಮ್ಮಕ್ಕು ಇದೆ. ತಮಿಳುನಾಡಲ್ಲಿ ಬಿಜೆಪಿ ಕಟ್ಟಲು ಮೇಕೆದಾಟು ಯೋಜನೆ ನಿರ್ಲಕ್ಷ್ಯ ಮಾಡಲಾಗುತ್ತಿದೆ.

ಬಿಜೆಪಿ ಅಧ್ಯಕ್ಷ ಕಟೀಲ್​ಗೆ ರಾಜಕೀಯವಾಗಿ ಬುದ್ಧಿ ಬೆಳೆದಿಲ್ಲ ಎಂದು ಕಾಂಗ್ರೆಸ್​ಗೆ ದಮ್ ಇದ್ದರೆ ಹಿಂದೂಗಳ ಮತ ಬೇಡ ಎಂದು ಹೇಳಲಿ ಎಂದ ಕಟೀಲ್​ಗೆ ತಿರುಗೇಟು ಕೊಟ್ಟಿದ್ದಾರೆ. ದೇವಸ್ಥಾನಗಳು ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿವೆ. ದೇವಸ್ಥಾನಗಳನ್ನು ಆರ್.ಎಸ್.ಎಸ್ ಗೆ ಕೊಡಬೇಡಿ ಎಂದಿದ್ದೇವೆ ಅಷ್ಟೇ. ಅದರರ್ಥ ಹಿಂದೂಗಳಿಗೆ ಕೊಡಬೇಡಿ, ಹಿಂದುಗಳಿಗೆ ವಿರೋಧ ಅಂತ ಅಲ್ಲ. ಆರ್.ಎಸ್.ಎಸ್ ನವರಿಗೆ ಕೊಟ್ಟರೆ ಅವರ ಬಳಿ ಕೈಮುಗಿದು ನಿಲ್ಲಬೇಕಾಗುತ್ತದೆ ಎಂದರು.

ಇದನ್ನೂ ಓದಿ: ಪ್ರಧಾನಮಂತ್ರಿ ಭದ್ರತೆ ಲೋಪ; ತನಿಖೆ ನಡೆಸಲು ಉನ್ನತ ಮಟ್ಟದ ಸಮಿತಿ ರಚಿಸಿದ ಪಂಜಾಬ್​ ಸರ್ಕಾರ

Published On - 1:35 pm, Thu, 6 January 22

ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ