AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru-Mysore Expressway: ಹೆಚ್ಚುತ್ತಿರುವ ಅಪಘಾತ ಪ್ರಕರಣಗಳು, ಎಡಿಜಿಪಿ ಅಲೋಕ್ ಕುಮಾರ್​ ಪರಿಶೀಲನೆ

ಬೆಂಗಳೂರು-ಮೈಸೂರು ಎಕ್ಸಪ್ರೆಸ್​​ವೇನಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಎಡಿಜಿಪಿ ಅಲೋಕ್ ಕುಮಾರ್ ಅವರು ಬೆಂಗಳೂರು ದಕ್ಷಿಣ ತಾಲೂಕಿನ‌ ಬಾಬಾಸಾಹೇಬರ ಪಾಳ್ಯ ಬಳಿ ಹೈವೇಯನ್ನು ಪರಿಶೀಲಿಸಿದ್ದಾರೆ.

Bengaluru-Mysore Expressway: ಹೆಚ್ಚುತ್ತಿರುವ ಅಪಘಾತ ಪ್ರಕರಣಗಳು, ಎಡಿಜಿಪಿ ಅಲೋಕ್ ಕುಮಾರ್​ ಪರಿಶೀಲನೆ
ಎಡಿಜಿಪಿ ಅಲೋಕ್ ಕುಮಾರ್​ (ಎಡಚಿತ್ರ) ಬೆಂಗಳೂರು-ಮೈಸೂರು ಎಕ್ಸಪ್ರೆಸ್​ವೇ (ಬಲಚಿತ್ರ)
ವಿವೇಕ ಬಿರಾದಾರ
|

Updated on:Jun 27, 2023 | 2:07 PM

Share

ರಾಮನಗರ: ಬೆಂಗಳೂರು-ಮೈಸೂರು ಎಕ್ಸಪ್ರೆಸ್​​ವೇನಲ್ಲಿ (Bengaluru-Mysore Expressway) ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಎಡಿಜಿಪಿ ಅಲೋಕ್ ಕುಮಾರ್ (ADGP Alok Kumar) ಅವರು ಬೆಂಗಳೂರು ದಕ್ಷಿಣ ತಾಲೂಕಿನ‌ ಬಾಬಾಸಾಹೇಬರ ಪಾಳ್ಯ ಬಳಿ ಹೈವೇಯನ್ನು ಪರಿಶೀಲಿಸಿದ್ದಾರೆ. ಎಡಿಜಿಪಿ ಅಲೋಕ್​ ಕುಮಾರ್​ ಅವರಿಗೆ ಎನ್​ಹೆಚ್​ಎಐ (NHAI), ಪಿಡಬ್ಲೂ, ಆರ್​ಟಿಓ, ಆರೋಗ್ಯ ಅಧಿಕಾರಿಗಳು, ಐಜಿಪಿ ರವಿಕಾಂತೇಗೌಡ ಹಾಗೂ ಎಸ್​ಪಿ ಕಾರ್ತಿಕ್ ರೆಡ್ಡಿ ಸಾಥ್ ನೀಡಿದ್ದಾರೆ. ಪರಿಶೀಲನೆ ಬಳಿಕ ಅಧಿಕಾರಿಗಳ ಜೊತೆ ರಾಮನಗರದಲ್ಲಿ ಅಲೋಕ್ ಕುಮಾರ್​ ಸಭೆ ನಡೆಸಲಿದ್ದಾರೆ. ಇತ್ತೀಚೆಗೆ ‌ಹೆದ್ದಾರಿಯಲ್ಲಿ ಸಾವಿನ ಸಂಖ್ಯೆ ಹೆಚ್ಚಾಗಿತ್ತು. ಐದು ತಿಂಗಳಲ್ಲಿ 105 ಜನ ಸಾವನ್ನಪ್ಪಿದ್ದು, 250 ಅಪಘಾತ ಪ್ರಕರಣ ದಾಖಲಾಗಿವೆ.

ಅಪಘಾತಕ್ಕೆ ಕಾರಣಗಳ ಕುರಿತು ಎನ್​​ಹೆಚ್​ಎಐಗೆ ವರದಿ ಸಲ್ಲಿಸಿದ 2 ಜಿಲ್ಲಾಡಳಿತ

ರಾಜ್ಯದ ಮೊದಲ ಎಕ್ಸಪ್ರೆಸ್​​​ವೇ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಮೂರು ತಿಂಗಳಲ್ಲಿ ಅಪಘಾತದಿಂದ ಸಾವನ್ನಪ್ಪಿರುವ ಸಂಖ್ಯೆ ನೂರರ ಗಡಿ ದಾಟಿದೆ. ಮತ್ತು ಒಟ್ಟು ಗಾಯಗೊಂಡವರ ಸಂಖ್ಯೆ 350 ದಾಟಿದೆ. ಬಹುತೇಕ ಅಪಘಾತಗಳು ರಾಮನಗರ ಮತ್ತು ಮಂಡ್ಯ ಜಿಲ್ಲಾಡಳಿತ ವ್ಯಾಪ್ತಿಯ 117 ಕಿಮೀ ಉದ್ದದ ರಸ್ತೆಯಲ್ಲಿ ನಡೆದಿವೆ. ಈ ಹಿನ್ನೆಲೆ ವಾಹನ ಸವಾರರ ಸುರಕ್ಷತೆ ದೃಷ್ಟಿಯಿಂದ ಎರಡು ಜಿಲ್ಲಾಡಳಿತ ಅಪಘಾತಕ್ಕೆ ಕಾರಣವಾದ ಅಂಶಗಳನ್ನು ಅಧ್ಯಯನ ಮಾಡಿ ವಿವರವಾಗಿ ವಿಶ್ಲೇಷಣೆಯೊಂದಿಗೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ  ನೀಡಿವೆ. ಅಲ್ಲದೇ ಅಪಘಾತ ತಪ್ಪಿಸುವ ಬಗ್ಗೆಯೂ ಕೆಲವೊಂದು ಸಲಹೆ ನೀಡಿತ್ತು.

ಪ್ರತಿದಿನ ಸರಾಸರಿ 56,000 ವಾಹನಗಳು ಎಕ್ಸ್‌ಪ್ರೆಸ್‌ವೇನಲ್ಲಿ ಸಂಚರಿಸುತ್ತವೆ. ಈ ಹೆದ್ದಾರಿ ಎರಡು ನಗರಗಳ ನಡುವಿನ ಪ್ರಯಾಣದ ಸಮಯವನ್ನು ಸುಮಾರು 75 ನಿಮಿಷಗಳಿಗೆ ಇಳಿಸಿದೆ. ನೆರೆಯ ತಮಿಳುನಾಡು ಮತ್ತು ಕೇರಳಕ್ಕೆ ಪ್ರಮುಖ ಸಂಪರ್ಕ ರಸ್ತೆಯಾಗಿ ಕಾರ್ಯನಿರ್ವಹಿಸುತ್ತಿದೆ.

ಇದನ್ನೂ ಓದಿ: Bengaluru News: ಬಿಟ್​ ಕಾಯಿನ್ ಬಹುಕೋಟಿ ಅಕ್ರಮ ವ್ಯವಹಾರ ಪ್ರಕರಣ: ಮರು ತನಿಖೆ ನಡೆಸುವಂತೆ ಸಿಐಡಿಗೆ ಪತ್ರ ಬರೆದ ನಗರ ಪೊಲೀಸ್​ ಕಮಿಷನರ್ ದಯಾನಂದ್

ರಾಮನಗರ ಮತ್ತು ಮಂಡ್ಯ ಜಿಲ್ಲೆಯ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಹೆದ್ದಾರಿಯಲ್ಲಿ 79 ಮಾರಣಾಂತಿಕ ಅಪಘಾತಗಳು ಮತ್ತು 226 ಮಾರಣಾಂತಿಕವಲ್ಲದ ಅಪಘಾತಗಳು ಸಂಭವಿಸಿದ್ದು, 94 ಮಂದಿ ಸಾವನ್ನಪ್ಪಿದ್ದಾರೆ ಮತ್ತು 353 ಜನರಿಗೆ ಗಾಯಗಳಾಗಿದ್ದವು.

ಎಕ್ಸ್‌ಪ್ರೆಸ್‌ವೇಯ ಸ್ವಲ್ಪ ಭಾಗವು ಮೈಸೂರು ಸಿಟಿ ಪೊಲೀಸ್ ವ್ಯಾಪ್ತಿಯಲ್ಲಿ ಬರುತ್ತದೆ. ಅಲ್ಲಿ ನಾಲ್ಕು ಮಾರಣಾಂತಿಕ ಅಪಘಾತಗಳು ಸಂಭವಿಸಿದ್ದು ಐವರು ಸಾವನ್ನಪ್ಪಿದ್ದಾರೆ. ಈ ಎಕ್ಸಪ್ರೆಸ್​​ವೇಯಲ್ಲಿ ಸಂಭವಿಸುವ ಅಪಘಾತಗಳಿಗೆ ಕಾರಣ ಅತಿ ವೇಗ ಮತ್ತು ಅಜಾಗರೂಕ ಚಾಲನೆ ಎಂದು ಪೊಲೀಸರು ಉಲ್ಲೇಖಿಸಿದ್ದರು.

ಸ್ಥಳ ಪರಿಶೀಲನೆಯ ಸಮಯದಲ್ಲಿ, ಸ್ಕೈವಾಕ್‌ಗಳ ಕೊರತೆ, ರಸ್ತೆಯಲ್ಲಿ ನೀರು ನಿಲ್ಲುವುದು, ಸರ್ವಿಸ್ ರಸ್ತೆಗಳಿಂದ ಮುಖ್ಯರಸ್ತೆಗೆ ಸಂಪರ್ಕಿಸುವಾಗ ರಸ್ತೆ ಫಲಕಗಳ ಕೊರತೆ, ಫ್ಲೈಓವರ್‌ಗಳ ಅಡಿಯಲ್ಲಿ ಬೀದಿ ದೀಪಗಳ ಕೊರತೆಯಿಂದ ರಸ್ತೆ ಬಳಕೆದಾರರ ಜೀವಕ್ಕೆ ಅಪಾಯವನ್ನುಂಟಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:04 pm, Tue, 27 June 23

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ