AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಕ್ರಾಂತಿ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದು ಅನುಮಾನ: ಮಾಜಿ ಸಚಿವ ಸಿಪಿ ಯೋಗೇಶ್ವರ್

2023 ಮುಗಿದ ಬಳಿಕ ರಾಜಕೀಯ ಬದಲಾವಣೆ ನಿರೀಕ್ಷೆಯಿದೆ. ಸಂಕ್ರಾಂತಿಗೆ ಸೂರ್ಯ ಪಥ ಬದಲಿಸುವ ರೀತಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದು ಅನುಮಾನ. ಶಾಸಕರು ನಿರುದ್ಯೋಗಿಗಳಾಗಿದ್ದಾರೆ‌. ಕಾಂಗ್ರೆಸ್ ಶಾಸಕರೇ ಸರ್ಕಾರದ ವಿರುದ್ಧ ತಿರುಗಿ ಬೀಳುತ್ತಾರೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್​ ಕಿಡಿಕಾರಿದ್ದಾರೆ.

ಸಂಕ್ರಾಂತಿ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದು ಅನುಮಾನ: ಮಾಜಿ ಸಚಿವ ಸಿಪಿ ಯೋಗೇಶ್ವರ್
ಮಾಜಿ ಸಚಿವ ಸಿ.ಪಿ.ಯೋಗೇಶ್ವರ್
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Oct 02, 2023 | 12:08 PM

Share

ರಾಮನಗರ, ಅಕ್ಟೋಬರ್​ 02: ಸಂಕ್ರಾಂತಿಗೆ ಸೂರ್ಯ ಪಥ ಬದಲಿಸುವ ರೀತಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದು ಅನುಮಾನ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ (CP Yogeshwar)​ ಹೇಳಿದ್ದಾರೆ. ಜಿಲ್ಲೆಯ ಚನ್ನಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಸಕ್ತ ರಾಜಕೀಯ ಬೆಳವಣಿಗೆ, ಕಾಂಗ್ರೆಸ್ ನಾಯಕರ ನಡೆಯೇ ಇದಕ್ಕೆ ಕಾರಣ. 2023 ಮುಗಿದ ಬಳಿಕ ರಾಜಕೀಯ ಬದಲಾವಣೆ ನಿರೀಕ್ಷೆಯಿದೆ. ಕಾಂಗ್ರೆಸ್​ನ ಅಸಮಾಧಾನಿತ ಶಾಸಕರು ವಿಮುಖವಾಗಿ ಯೋಚನೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಕೆಲ ಕಾಂಗ್ರೆಸ್ ಶಾಸಕರು ವೈಯಕ್ತಿಕವಾಗಿ ನನ್ನ ಜೊತೆ ಮಾತನಾಡಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಶಾಸಕರು ಡಮ್ಮಿಗಳಾಗಿದ್ದಾರೆ‌. ಅವರಿಗೆ ಶಾಸಕರ ಕಾರ್ಯ ನಿರ್ವಹಿಸಲು ಆಗುತ್ತಿಲ್ಲ. ಸರ್ಕಾರ ಐದು ಗ್ಯಾರಂಟಿ ಕೊಟ್ಟಿದೆ ಹಾಗಾಗಿ ಅನುದಾನ ಕೊಡಲ್ಲ ಅಂತ ಹೇಳಿದ್ದಾರೆ‌. ಯಾವುದೇ ಅಭಿವೃದ್ಧಿ ಕಾರ್ಯಕ್ಕೆ ಸರ್ಕಾರದಲ್ಲಿ ದುಡ್ಡಿಲ್ಲ. ಹಾಗಾಗಿ ಕಾಂಗ್ರೆಸ್ ಶಾಸಕರು ನಿರುದ್ಯೋಗಿಗಳಾಗಿದ್ದಾರೆ‌ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗದ ಮುಗ್ಧ ನಾಗರಿಕರ ಪ್ರಶ್ನೆಗಳಿಗೆ ಉತ್ತರಿಸುವ ತಾಕತ್ತು ‘ಜಾತ್ಯಾತೀತ’ ಸಿದ್ದರಾಮಯ್ಯರಿಗಿದೆಯೇ? ಬಿಜೆಪಿ ಪ್ರಶ್ನೆ

ಕಾಂಗ್ರೆಸ್ ಶಾಸಕರಿಗೆ ರಾಜಕೀಯ ಭವಿಷ್ಯದ ಆತಂಕ ಇದೆ. ಹಾಗಾಗಿ ಇದರ ಪರಿಣಾಮವನ್ನ ಸಂಕ್ರಾಂತಿ ವೇಳೆಗೆ ಎಲ್ಲರೂ ನೋಡುತ್ತೀರಾ. ನಾವು ಯಾವುದೇ ರೀತಿಯ ಆಪರೇಷನ್ ಮಾಡುತ್ತಿಲ್ಲ. ನಮ್ಮ ಸಂಪರ್ಕದಲ್ಲಿ ಯಾರೂ ಇಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಶಾಸಕರೇ ಸರ್ಕಾರದ ವಿರುದ್ಧ ತಿರುಗಿ ಬೀಳುತ್ತಾರೆ: ಹೊಸ ಬಾಂಬ್​ ಸಿಡಿಸಿದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್  

ಡಿಸಿಎಂ ಡಿಕೆ ಶಿವಕುಮಾರ್​ ರೀತಿ ಆಪರೇಷನ್ ಹಸ್ತದ ಕೆಲಸವನ್ನೂ ನಾವು ಮಾಡಲ್ಲ. ಸದ್ಯ ನನಗಿರುವ ಮಾಹಿತಿ ಪ್ರಕಾರ ಹೇಳಿದ್ದೇನೆ. ಖಾಸಗಿಯಾಗಿ ಸಿಕ್ಕಾಗ ಕೆಲವರು ನೋವನ್ನ ಹೇಳಿಕೊಂಡಿದ್ದಾರೆ. ಕಾಂಗ್ರೆಸ್ ಶಾಸಕರೇ ಸರ್ಕಾರದ ವಿರುದ್ಧ ತಿರುಗಿ ಬೀಳುತ್ತಾರೆ ಎಂದು ಹೊಸ ಬಾಂಬ್​ ಸಿಡಿಸಿದ್ದಾರೆ.

ಬಿಜೆಪಿ-ಜೆಡಿಎಸ್ ಎರಡೂ ಪಕ್ಷಕ್ಕೂ ಅನುಕೂಲ

ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ವಿಚಾರವಾಗಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಎದುರಿಸಲು ಮೈತ್ರಿ ಅನಿವಾರ್ಯ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಧಮನಕಾರಿ ಆಡಳಿತ ಮಾಡುತ್ತಿದೆ. ಡಿಕೆ ಶಿವಕುಮಾರ್​ ಆಪರೇಷನ್ ಹಸ್ತ ಅಂತ ಪ್ರಾರಂಭ ಮಾಡಿದ್ದಾರೆ. ಹಾಗಾಗಿ ಅವರನ್ನ ಎದುರಿಸಲು ಹೊಂದಾಣಿಕೆ ಆಗಿದೆ. ಇದರಿಂದ ಬಿಜೆಪಿ-ಜೆಡಿಎಸ್ ಎರಡೂ ಪಕ್ಷಕ್ಕೂ ಅನುಕೂಲ ಆಗಲಿದೆ ಎಂದರು.

ಇದನ್ನೂ ಓದಿ: ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಖರ್ಗೆ ಅಳಿಯ ಕಣಕ್ಕೆ: ಅಚ್ಚರಿಯ ಹೇಳಿಕೆ ನೀಡಿದ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್​

ಮೈತ್ರಿ ಬಗ್ಗೆ ನಿನ್ನೆ ಜೆಡಿಎಸ್ ಸರ್ವಾನುಮತದ ಒಪ್ಪಿಗೆ ಪಡೆದಿದೆ. ಮುಂದಿನವಾರ ಚನ್ನಪಟ್ಟಣ ಬಿಜೆಪಿ ಸ್ಥಳೀಯ ನಾಯಕರ ಸಭೆ ನಡೆಸುತ್ತೇವೆ. ಮೈತ್ರಿ ಬಗ್ಗೆ ಭೂತ್ ಮಟ್ಟದ ನಾಯಕರು, ಕಾರ್ಯಕರ್ತರಿಗೆ ಮನವರಿಕೆ ಮಾಡಲಾಗುವುದು. ಬಳಿಕ ಜೆಡಿಎಸ್ ನಾಯಕರ ಜೊತೆ ಮತ್ತೊಂದು ಸಭೆ ಮಾಡುತ್ತೇವೆ.

ಟಿಕೆಟ್​ ಹಂಚಿಕೆ ವಿಚಾರ ಹೈಕಮಾಂಡ್​ಗೆ ಬಿಟ್ಟಿದ್ದು. ಬೆಂಗಳೂರು ಗ್ರಾಮಾಂತರ ವಿಚಾರದಲ್ಲಿ ಪಕ್ಷದ ವರಿಷ್ಠರು ಏನೇ ತೀರ್ಮಾನ ಮಾಡಿದರೂ ಬದ್ದ. ಬಿಜೆಪಿಗೆ ಅವಕಾಶ ಸಿಕ್ಕಿದ್ದರೆ, ನನ್ನನ್ನ ಚುನಾವಣೆಗೆ ನಿಲ್ಲಲು ಸೂಚಿಸಿದರೆ ನಾನು ಸ್ಪರ್ಧೆ ಮಾಡುತ್ತೇನೆ. ಒಂದು ವೇಳೆ ಜೆಡಿಎಸ್​ಗೆ ಅವಕಾಶ ನೀಡಿದರೆ ಅವರಿಗೆ ಬೆಂಬಲ ನೀಡುತ್ತೇನೆ. ಮುಂದಿನ ರಾಜಕೀಯ ದೃಷ್ಟಿಯಿಂದ ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Syed Nizamuddin
Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ