AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನತಾ ದರ್ಶನ: ಜನರ ಸಮಸ್ಯೆ ಪರಿಹಾರಕ್ಕೆ ನಮ್ಮ ಸರಕಾರ ಬದ್ಧ: ಸಚಿವ ರಾಮಲಿಂಗಾರೆಡ್ಡಿ

ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಇಂದು ರಾಮನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಜನಸ್ಪಂದನಾ ಕಾರ್ಯಕ್ರಮ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು, ಪ್ರಪಂಚ ಇರುವವರೆಗೂ ಸಮಸ್ಯೆಗಳು ಬಗೆ ಹರಿಯಲ್ಲ. ಬಗೆ ಹರಿಸುವ ಸಮಸ್ಯೆ ಗಳನ್ನು ಬಗೆಹರಿಸುತ್ತೇವೆ. ಸಮಸ್ಯೆ ಪರಿಹಾರಕ್ಕೆ ನಮ್ಮ ಸರಕಾರ ಬದ್ಧವಾಗಿದೆ ಎಂದಿದ್ದಾರೆ.

ಜನತಾ ದರ್ಶನ: ಜನರ ಸಮಸ್ಯೆ ಪರಿಹಾರಕ್ಕೆ ನಮ್ಮ ಸರಕಾರ ಬದ್ಧ: ಸಚಿವ ರಾಮಲಿಂಗಾರೆಡ್ಡಿ
ಜನರ ಸಮಸ್ಯೆ ಆಲಿಸಿದ ಸಚಿವ ರಾಮಲಿಂಗಾರೆಡ್ಡಿ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Sep 25, 2023 | 2:52 PM

Share

ರಾಮನಗರ, ಸೆಪ್ಟೆಂಬರ್​ 25: ಪ್ರಪಂಚ ಇರುವವರೆಗೂ ಸಮಸ್ಯೆಗಳು ಬಗೆ ಹರಿಯಲ್ಲ. ಬಗೆ ಹರಿಸುವ ಸಮಸ್ಯೆ ಗಳನ್ನು ಬಗೆಹರಿಸುತ್ತೇವೆ. ಜನರ ಸಮಸ್ಯೆ ಪರಿಹಾರಕ್ಕೆ ನಮ್ಮ ಸರಕಾರ ಬದ್ಧವಾಗಿದೆ ಎಂದು ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಹೇಳಿದ್ದಾರೆ. ನಗರದಲ್ಲಿ ಆಯೋಜಿಸಿದ್ದ ನೂತನ ಸರ್ಕಾರದ ಪ್ರಥಮ ಜನತಾ ದರ್ಶನ ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಇಂದು ಜನಸ್ಪಂದನಾ ಕಾರ್ಯಕ್ರಮ ಮಾಡುತ್ತಿದ್ದೇವೆ. ಜಿಲ್ಲಾಧಿಕಾರಿಗಳು ಪ್ರತಿ 15 ದಿನಕ್ಕೊಮ್ಮೆ ಸಭೆ ನಡೆಸಿ ಜನರ ಸಮಸ್ಯೆಗಳನ್ನು ಪರಿಹರಿಸಬೇಕು. ಜನರ ಸಮಸ್ಯೆಗಳನ್ನು ಆಲಿಸಲು ಸಭೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಪೊಲೀಸ್, ಹಕ್ಕುಪತ್ರ,‌ ಚರಂಡಿ ಹಾಗೂ ಆನೆ ದಾಳಿ ಸಮಸ್ಯೆಗಳು ಸೇರಿದಂತೆ ಸುಮಾರು ಇನ್ನೂರು ಮನವಿಗಳು ಬಂದಿದೆ. ಮುಂದಿನ ಸಲದ ಜನತಾ ದರ್ಶನಕ್ಕೆ ಬರುವ ವೇಳೆ ಸಮಸ್ಯೆ ಬಗೆಹರಿಯಬೇಕು ಅಂತ ಹೇಳಲಾಗಿದೆ ಎಂದರು.

ಹೆಚ್​ಡಿ ಕುಮಾರಸ್ವಾಮಿಗೆ ಸಚಿವ ರಾಮಲಿಂಗರೆಡ್ಡಿ ತಿರುಗೇಟು

ಇವರೇನು ಅಭಿವೃದ್ಧಿ ಮಾಡುವುದು ಬೇಕಾಗಿಲ್ಲ, ಕ್ಷೇತ್ರವನ್ನು ನೋಡಿಕೊಂಡು ಹೋಗಲಿ ಸಾಕು ಎಂಬ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಕ್ಷೇತ್ರದಲ್ಲಿ ಮೂಲಭೂತ ಸಮಸ್ಯೆ ಗಳಿವೆ. ಸಮಸ್ಯೆಗಳೆ ಇಲ್ಲ ಅಂತ ಇಲ್ಲ. ಇವು ಬಗೆಹರಿಯುವ ಸಮಸ್ಯೆಗಳಲ್ಲ. ಮುಂದಿನ ಚುನಾವಣೆಗಳಲ್ಲಿ ಕುಮಾರಸ್ವಾಮಿ ಅವರ ಮಾತಿಗೆ ಉತ್ತರ ಸಿಗಲಿದೆ ಎಂದು ಸಚಿವ ರಾಮಲಿಂಗರೆಡ್ಡಿ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಮಹಿಳಾ ಮೀಸಲಾತಿ ಮಸೂದೆ ವಿರುದ್ಧ ಕೈ ತಗಾದೆ; ಬೆಂಗಳೂರು ಸೇರಿದಂತೆ 21 ನಗರಗಳಲ್ಲಿ ಇಂದು 21 ಪತ್ರಿಕಾಗೋಷ್ಠಿ; ಯಾವ್ಯಾವ ಮುಖಂಡರು ಮಾತನಾಡಲಿದ್ದಾರೆ, ಇಲ್ಲಿದೆ ಪಟ್ಟಿ

ತಮ್ಮ ಕ್ಷೇತ್ರದಲ್ಲ ಡಿಕೆ ಬ್ರದರ್ಸ್ ಇನ್ವಾಲ್ಮೆಂಟ್ ವಿಚಾರವಾಗಿ ಮಾತನಾಡಿದ್ದು, ಅವರವರ ಕೆಲಸ ಅವರು ಮಾಡುತ್ತಿದ್ದಾರೆ. ಸಂಸದರು ಅವರ ಕೆಲಸ ಅವರು ಮಾಡುತ್ತಾರೆ ನನ್ನ ಕೆಲಸ ನಾನು ಮಾಡುತ್ತೇನೆ. ಅವರ ಅಧಿಕಾರ ವ್ಯಾಪ್ತಿಗೆ ಬರುವ ಕೆಲಸ ಅವರು ಮಾಡುತ್ತಿದ್ದಾರಷ್ಟೇ ಎಂದರು.

ಇದನ್ನೂ ಓದಿ: ಮೈಸೂರು: ಕುಕ್ಕರ್, ಐರನ್ ಬಾಕ್ಸ್ ಹಂಚಿದ್ದಾಗಿ ಹೇಳಿಕೆ, ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದೂರು

ನಾಳೆ ಬೆಂಗಳೂರು ಬಂದ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಿಎಂಟಿಸಿ, ಕೆಎಸ್​ಆರ್​ಟಿಸಿ ಯೂನಿಯನ್ ಬಂದ್ ಬಗ್ಗೆ ನಿರ್ಣಯ ಮಾಡುತ್ತದೆ ಎಂದು ಹೇಳಿದ್ದಾರೆ.

ಡಿಸಿಎಂ ಹುದ್ದೆ ಬಗ್ಗೆ ಮಾತನಾಡುವುದು ಅನಾವಶ್ಯಕ

ಡಿಸಿಎಂ ಹುದ್ದೆ ಬಗ್ಗೆ ಮಾತನಾಡುವುದು ಅನಾವಶ್ಯಕ. ವೇಣುಗೋಪಾಲ್ ಅವರು ಸಹ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಅನಾವಶ್ಯಕ ಗೊಂದಲ ಸೃಷ್ಟಿಸುವುದು ಬೇಕಿಲ್ಲ. ನೈಸ್ ರಸ್ತೆ ಅಕ್ರಮ ದಾಖಲೆ ವಿಚಾರವಾಗಿ ಮಾತನಾಡಿ, ನೈಸ್ ಅಕ್ರಮದ ಬಗ್ಗೆ ದಾಖಲೆಗಳು ಬಹಿರಂಗಗೊಳ್ಳಲಿ. ಸಂಬಂಧಿಸಿದ ಸಂಸ್ಥೆಗಳಿಗೆ ತನಿಖೆ ನೀಡಲಿ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Syed Nizamuddin
Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ