Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ಹೊಸ್ತಿಲಲ್ಲಿ ರಾಜಕೀಯ ಕಿಚ್ಚು, ರಾಮನಗರ ಜಿಲ್ಲಾಸ್ಪತ್ರೆ ಉದ್ಘಾಟನೆ ವೇಳೆ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ, ಗುಡುಗಿದ ಡಿಕೆ ಸುರೇಶ್

ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜಕೀಯ ಕಿಚ್ಚು ಹೆಚ್ಚುತ್ತಲೇ ಇದೆ. ಸದ್ಯ ರಾಮನಗರ ಜಿಲ್ಲೆ ಕೇಂದ್ರ ಬಿಂದುವಾಗಿದೆ.

ಚುನಾವಣೆ ಹೊಸ್ತಿಲಲ್ಲಿ ರಾಜಕೀಯ ಕಿಚ್ಚು, ರಾಮನಗರ ಜಿಲ್ಲಾಸ್ಪತ್ರೆ ಉದ್ಘಾಟನೆ ವೇಳೆ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ, ಗುಡುಗಿದ ಡಿಕೆ ಸುರೇಶ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Mar 02, 2023 | 12:17 PM

ರಾಮನಗರ:  ಚನ್ನಪಟ್ಟಣದಲ್ಲಿ ಇತ್ತೀಚೆಗೆ ವಿವಿಧ ಕಾಮಗಾರಿಗೆ ಚಾಲನೆ ನೀಡುವ ಸಂಬಂಧ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ದೊಡ್ಡ ಗಲಾಟೆಯಾಗಿತ್ತು. ಇದರ ಬೆನ್ನಲ್ಲೇ ಇದೀಗ ಇಂದು(ಮಾ.02) ರಾಮನಗರ(Ramanagara) ಜಿಲ್ಲಾ ಆಸ್ಪತ್ರೆ ಉದ್ಘಾಟನೆ ವಿಚಾರವಾಗಿ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ  ಮಧ್ಯೆ ಗಲಾಟೆ ನಡೆದಿದೆ. ಕುಮಾರಸ್ವಾಮಿ ಆಗಮಿಸುವುದಕ್ಕೂ ಮುನ್ನ ಆಸ್ಪತ್ರೆ ಉದ್ಘಾಟನೆ ಸರಿ ಅಲ್ಲ ಎಂದು ಜೆಡಿಎಸ್​ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತರು ಸಹ ಘೋಷಣೆಗಳನ್ನು ಕೂಗಿದ್ದಾರೆ. ಹೀಗೆ ಪರಸ್ಪರ ಘೋಷಣೆ ಕೂಗುತ್ತಿದ್ದ ಎರಡೂ ಪಕ್ಷದ ಕಾರ್ಯಕರ್ತರ ನಡುವೆ  ನೂಕಾಟ ತಳ್ಳಾಟ ನಡೆಯಿತು. ಇದರ ಮಧ್ಯೆ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ (DK Suresh) ಜಿ್ಲ್ಲಾಡಳಿ ಹಾಗೂ ಸಚಿವ ಅಶ್ವತ್ಥ್ ನಾರಾಯಣ ವಿರುದ್ಧ ಗುಡುಗಿದ್ದಾರೆ.

ಇದನ್ನೂ ಓದಿ: ರಾಮನಗರ: ಯೋಗೇಶ್ವರ್ ಕಾರಿಗೆ ಜೆಡಿ (ಎಸ್) ಕಾರ್ಯಕರ್ತರ ಮುತ್ತಿಗೆ, ಮೊಟ್ಟೆ ಎಸೆತ

ಸುಮಾರು‌ ನೂರು ಕೋಟಿ ರೂ ವೆಚ್ಚದಲ್ಲಿ ‌ನಿರ್ಮಾಣ ಮಾಡಲಾಗಿರುವ 374 ಹಾಸಿಗೆ ಸಾಮರ್ಥ್ಯದ ನೂತನ ಜಿಲ್ಲಾಸ್ಪತ್ರೆಯನ್ನು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿಎನ್. ಅಶ್ವತ್ಥ್ ನಾರಾಯಣ ಉದ್ಘಾಟನೆಗೆ ಮುಂದಾದರು. ಈ ವೇಳೆ ಜೆಡಿಎಸ್​ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದು, ಕುಮಾರಸ್ವಾಮಿ ಬರುವವರೆಗೆ ಉದ್ಘಾಟನೆ ಮಾಡಬಾರದು ಎಂದು ಆಗ್ರಹಿಸಿದರು. ವಿರೋಧದ ನಡುವೆಯೂ ಅನಿತಾ ಕುಮಾರಸ್ವಾಮಿ, ಹೆಚ್​ಡಿ ಕುಮಾರಸ್ವಾಮಿ ಬರುವ ಮೊದಲೇ ರಾಮನಗರ ಜಿಲ್ಲಾಸ್ಪತ್ರೆಯನ್ನು ಉದ್ಘಾಟನೆ ಮಾಡಲಾಯ್ತು.

ಉದ್ಘಾಟನೆಯಾದ ಬಳಿಕ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ತಡವಾಗಿ ಆಗಮಿಸಿದರು. ಬಳಿಕ ಕಾರ್ಯಕರ್ತರು ಪರಸ್ಪರ ಘೋಷಣೆ ಕೂಗುವುದನ್ನು ನಿಲ್ಲಿಸಿದರು. ಇದರಿಂದ ಗಲಾಟೆ ಅಲ್ಲಿಗೆ ಕೊನೆಗೊಂಡಿದೆ. ಇನ್ನು ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಕುಮಾರಸ್ವಾಮಿ, ಆಸ್ಪತ್ರೆಯನ್ನು ಉದ್ಘಾಟನೆ ಮಾಡಲು ನಾನೇ ಸಚಿವರಿಗೆ ಹೇಳಿದ್ದೆ. ಹೀಗಾಗಿ ಕಾರ್ಯಕರ್ತರ ನಡುವೆ ಗೊಂದಲ ಆಗಿದೆ. ಆಸ್ಪತ್ರೆ ಉದ್ಘಾಟನೆ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಈ ವಿಚಾರದಲ್ಲಿ ಯಾರೂ ರಾಜಕೀಯ ಮಾಡುವುದು ಬೇಡ. ಆಸ್ಪತ್ರೆ ಉದ್ಘಾಟನೆ ಒಳ್ಳೆಯ ಕಾರ್ಯಕ್ರಮ. ಎಲ್ಲರೂ ಶಾಂತಿಯಿಂದ ಸಹಕಾರ ನೀಡಬೇಕು ಎಂದು ಹೆಚ್​​.ಡಿ.ಕುಮಾರಸ್ವಾಮಿ ಮನವಿ ಮಾಡಿದರು.

ಇದನ್ನೂ ಓದಿ: ಚನ್ನಪಟ್ಟಣ ಜಟಾಪಟಿ: 14 ಜೆಡಿಎಸ್ ಕಾರ್ಯಕರ್ತರ ವಿರುದ್ಧ ಎಫ್​ಐಆರ್, ಡಿವೈಎಸ್​ಪಿ ಕಚೇರಿಗೆ ಧಾವಿಸಿದ ನಿಖಿಲ್ ಕುಮಾರಸ್ವಾಮಿ 

ಗುಡುಗಿದ ಡಿಕೆ ಸುರೇಶ್

ಇದರ ಮಧ್ಯೆ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಜಿಲ್ಲಾಡಳಿತಕ್ಕೆ ತರಾಟೆಗೆ ತೆಗೆದುಕೊಂಡಿರುವ ಪ್ರಸಂಗ ನಡೆಯಿತು. ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎಂದು ಆಕ್ರೋಶಗೊಂಡಿರುವ ಸುರೇಶ್, ಹೇ ಮಂತ್ರಿಗಳೇ ನಿಂತ್ಕೊಳ್ರೀ, ಏನ್ರೀ ಪ್ರೋಟಾಕಾಲ್​ ಇಲ್ವಾ? ನಾನು ಈ ಕ್ಷೇತ್ರದ ಸಂಸದ, ನನಗೆ ಪ್ರೋಟಾಕಾಲ್​ ಇಲ್ವಾ? ಯಾರೀ ಸಿಇಒ, ಡಿಸಿ?, ಅವರಿಗೆ ಪ್ರೋಟಾಕಾಲ್​ ಗೊತ್ತಿಲ್ವಾ? ನೀವೊಬ್ಬ ಜಿಲ್ಲಾ ಉಸ್ತುವಾರಿ ಸಚಿವರಾಗಿ ಪ್ರೋಟಾಕಾಲ್​ ಗೊತ್ತಿಲ್ವಾ? ರಾತ್ರಿ ಆಹ್ವಾನ ಪತ್ರಿಕೆ ಕಳುಹಿಸಿ, ಬೆಳಗ್ಗೆ ಉದ್ಘಾಟನೆ ಮಾಡುವುದಲ್ಲ. ಈ ಜಿಲ್ಲಾಸ್ಪತ್ರೆ ನೀವು ಮಾಡಿದ್ದಲ್ಲ, ನಾವು ಮಾಡಿರುವುದು ಎಂದು ಸಚಿವ ಅಶ್ವತ್ಥ್ ನಾರಾಯಣ ವಿರುದ್ಧ ಗುಡುಗಿದರು.

ಇನ್ನು ಈ ಕಾರ್ಯಕ್ರಮಲ್ಲಿ ಜೆಡಿಎಸ್, ಕಾಂಗ್ರೆಸ್ ಹಾಗೂ ಬಿಜೆಪಿಯ ಘಟಾನುಘಟಿ ನಾಯಕರು ಭಾಗಿದ್ದಾರೆ. ಸಚಿವರಾದ ಅಶ್ವತ್ಥ್ ನಾರಾಯಣ, ಡಾ. ಕೆ. ಸುಧಾಕರ್​, ಹೆಚ್​ಡಿ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ಸಂಸದ ಡಿಕೆ ಸುರೇಶ್ ಉಪಸ್ಥಿತರಿದ್ದರು.

Published On - 12:14 pm, Thu, 2 March 23

ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ