ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್​​ ಪಾದಯಾತ್ರೆಗೆ ಚಾಲನೆ: ಯಾರೆಲ್ಲ ಭಾಗಿ?

ರಾಜ್ಯ ಸರ್ಕಾರದ ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ 'ನಮ್ಮ ಭೂಮಿ ನಮ್ಮ ಹಕ್ಕು' ಎಂಬ ಘೋಷಣೆಯಡಿ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಬೃಹತ್ ಪಾದಯಾತ್ರೆಗೆ ರಾಮನಗರ ಜಿಲ್ಲೆಯ ಬೈರಮಂಗಲ ಗ್ರಾಮದಲ್ಲಿ ಚಾಲನೆ ನೀಡಲಾಗಿದೆ. ಕೇಂದ್ರ ಸಚಿವ ಹೆಚ್​​.ಡಿ.ಕುಮಾರಸ್ವಾಮಿ ಮತ್ತು ಆರ್​. ಅಶೋಕ್​​​​​ ಪಾದಯಾತ್ರೆಗೆ ಹಸುರು ನಿಶಾನೆ ತೋರಿದ್ದು, ಬೈರಮಂಗಲದಿಂದ ಬೆಂಗಳೂರಿನ ಫ್ರೀಡಂಪಾರ್ಕ್​ವರೆಗೂ ಪಾದಯಾತ್ರೆ ನಡೆಯಲಿದೆ.

ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್​​ ಪಾದಯಾತ್ರೆಗೆ ಚಾಲನೆ: ಯಾರೆಲ್ಲ ಭಾಗಿ?
ಜೆಡಿಎಸ್​​ ಪಾದಯಾತ್ರೆ
Image Credit source: Tv9 Kannada
Edited By:

Updated on: Aug 09, 2026 | 2:03 PM

ಮುಖ್ಯಾಂಶಗಳು

  • ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಹೋರಾಟ
  • ಮೂರು ದಿನಗಳ ಜೆಡಿಎಸ್​ ಪಾದಯಾತ್ರೆಗೆ ಚಾಲನೆ
  • ನಮ್ಮ ಭೂಮಿ ನಮ್ಮ ಹಕ್ಕು ಹೆಸರಿನಲ್ಲಿ ಪಾದಯಾತ್ರೆ

ರಾಮನಗರ, ಆಗಸ್ಟ್​​ 09: ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್​​ ಪಾದಯಾತ್ರೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ಬೈರಮಂಗಲ ಗ್ರಾಮದಲ್ಲಿ ಚಾಲನೆ ಕೇಂದ್ರ ಸಚಿವ ಹೆಚ್​​.ಡಿ.ಕುಮಾರಸ್ವಾಮಿ ಮತ್ತು ಆರ್​. ಅಶೋಕ್​​​​​ ಚಾಲನೆ ನೀಡಿದ್ದಾರೆ. ಇಂದಿನಿಂದ ಮೂರು ದಿನಗಳ ಕಾಲ ಜೆಡಿಎಸ್​ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ನೇತೃತ್ವದಲ್ಲಿ ಬೈರಮಂಗಲದಿಂದ ಬೆಂಗಳೂರಿನ ಫ್ರೀಡಂಪಾರ್ಕ್​ವರೆಗೂ ಪಾದಯಾತ್ರೆ ನಡೆಯಲಿದೆ. ನಮ್ಮ ಭೂಮಿ ನಮ್ಮ ಹಕ್ಕು ಹೆಸರಿನಲ್ಲಿ ಜೆಡಿಎಸ್​ ಪಾದಯಾತ್ರೆಗೆ ಮೈತ್ರಿ ಪಕ್ಷ ಬಿಜೆಪಿ ನಾಯಕರೂ ಬೆಂಬಲ ಸೂಚಿಸಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧ ಅಶೋಕ್​​ ವಾಗ್ದಾಳಿ

ಸರ್ಕಾರ ಸಾವಿನ ಕೊನೆ ಮೊಳೆ ಹೊಡೆದುಕೊಳ್ತಿದ್ದು, ರೈತರನ್ನು ಎದುರುಹಾಕಿಕೊಂಡಿರುವ ಯಾವ ಸರ್ಕಾರವೂ ಉಳಿದಿಲ್ಲ ಎಂದು ಆರ್​. ಅಶೋಕ್​​ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರು ತಮ್ಮ ಭೂಮಿಗಾಗಿ ಹೋರಾಟ ಮಾಡುತ್ತಿದ್ದರೆ, ಇಂದು ಜಾಹೀರಾತುಗಾಗಿ ಕಾಂಗ್ರೆಸ್ಸಿಗರು 4 ಕೋಟಿ ಹಣ ಕೊಟ್ಟಿದ್ದಾರೆ. ಕಾಂಗ್ರೆಸನ್ನು ಮನೆಗೆ ಕಳುಹಿಸುವವರೆಗೂ ನಮ್ಮ ಹೋರಾಟ ಇರುತ್ತೆ. ಕುಮಾರಸ್ವಾಮಿ ರೈತರಿಗಾಗಿ ಯೋಜನೆ ಬಿಡುತ್ತೇನೆ ಎಂದಿದ್ದರು. ಆದರೆ ರಾಹುಲ್ ಗಾಂಧಿಗೆ ದುಡ್ಡು ಕಳುಹಿಸಲು ಇವರು ಮಾಡಿರುವ ಯೋಜನೆ ಇದು ಎಂದವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಬಿಡದಿ ಟೌನ್‌ಶಿಪ್‌ ವಿವಾದಕ್ಕೆ ಮತ್ತೊಂದು ತಿರುವು: ಅಭಿಪ್ರಾಯಗಳ ಸಮಗ್ರ ಪರಿಶೀಲನೆಗೆ ನ್ಯಾಯಮೂರ್ತಿ ನೇತೃತ್ವದ ಸಮಿತಿ ರಚನೆ

‘ರಾಜಕೀಯ ಲಾಭಕ್ಕಾಗಿ ಪಾದಯಾತ್ರೆಯಲ್ಲ’

ರೈತರ ಮೇಲೆ ಮರಣ ಶಾಸನ ಬರೆಯುವ ಯೋಜನೆ ಇದಾಗಿದ್ದು, ರಾಜಕೀಯ ಲಾಭಕ್ಕಾಗಿ ನಾವು ಪಾದಯಾತ್ರೆ ಮಾಡುತ್ತಿಲ್ಲ ಎಂದು JDS ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಹೋರಾಟಕ್ಕೆ ಮಾಜಿ ಪ್ರಧಾನಿ ದೇವೇಗೌಡರ ಮಾರ್ಗದರ್ಶನ ಇದ್ದು, ರೈತಾಪಿ ವರ್ಗ ಸಂಕಷ್ಟದಲ್ಲಿದೆ ಎಂದವರು ಆರೋಪಿಸಿದ್ದಾರೆ. ಪಾದಯಾತ್ರೆಯಲ್ಲಿ ಕೇಂದ್ರ ಸಚಿವ ಹೆಚ್​​.ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಶಾಸಕ ಅಶ್ವತ್ಥ್‌ ನಾರಾಯಣ, ಎಂಎಲ್​ಸಿ ರವಿಕುಮಾರ್‌, ಜೆಡಿಎಸ್​​ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಜೆಡಿಎಸ್​ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಸೇರಿದಂತೆ ಜೆಡಿಎಸ್​​, ಬಿಜೆಪಿ ನಾಯಕರು, ಸಾವಿರಾರು ರೈತರು ಭಾಗಿಯಾಗಿದ್ದರು.

ರಾರಾಜಿಸಿದ ಕೌಂಟರ್​ ಬ್ಯಾನರ್​ಗಳು

ಜೆಡಿಎಸ್​ ಪಾದಯಾತ್ರೆ ಹಿನ್ನೆಲೆ ಒಂದೆಡೆ ಜೆಡಿಎಸ್​ ಕಟೌಟ್ ಹಾಗೂ ಬ್ಯಾನರ್​ಗಳು ರಾರಾಜಿಸುತ್ತಿದ್ದರೆ ಮತ್ತೊಂದೆಡೆ ಕಾಂಗ್ರೆಸಿಗರು ಕೌಮಟರ್​​ ಬ್ಯಾನರ್​​ಗಳನ್ನು ಅಳವಡಿಸಿರೋದು ಕಂಡುಬಂದಿದೆ. ಪ್ರಾಯಶ್ಚಿತ್ತ ಯಾತ್ರೆಗೆ ಹಾರ್ದಿಕ ಸ್ವಾಗತ ಎಂದು ಬೈರಮಂಗಲ ಸರ್ಕಲ್​ನಲ್ಲಿ ಕಾಂಗ್ರೆಸಿಗರು ಬ್ಯಾನರ್ ಅಳವಡಿಕೆ ಮಾಡಿದ್ದಾರೆ. ಹೆಚ್​​ಡಿಕೆ, ಬಿಎಸ್​ವೈ ಪುತ್ರರನ್ನ ಕೈಹಿಡಿದು ಪಾದಯಾತ್ರೆ ನಡೆಸುವ ರೀತಿ ವ್ಯಂಗ್ಯವಾಡಲಾಗಿದ್ದು, ಬಿಡದಿ ಟೌನ್​​ಶಿಪ್ ರೂವಾರಿಗಳಾದ ಬಿಜೆಪಿ ಮತ್ತು JDSನ ಪ್ರಾಯಶ್ಚಿತ್ತದ ಯಾತ್ರೆ ಎಂದು ಬ್ಯಾನರ್​​ನಲ್ಲಿ ಬರೆಯಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 1:41 pm, Sun, 9 August 26

Loading...
Unable to load recommendations.
Follow Us