AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Urban Local Bodies Election: ಮತ ಕೇಳುವ ವಿಚಾರಕ್ಕೆ ಮತಗಟ್ಟೆ ಬಳಿ JDS, ಕಾಂಗ್ರೆಸ್ ಕಾರ್ಯಕರ್ತರ ಹೊಡೆದಾಟ

ರಾಮನಗರ ಜಿಲ್ಲೆ ಬಿಡದಿಯ ವಾರ್ಡ್ ನಂಬರ್ 1ರಲ್ಲಿ ಕಾರ್ಯಕರ್ತರ ನಡುವೆ ಭಾರಿ ಗಲಾಟೆಯಾಗಿದೆ. ರಕ್ತ ಬರುವಂತೆ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದಾರೆ.

Urban Local Bodies Election: ಮತ ಕೇಳುವ ವಿಚಾರಕ್ಕೆ ಮತಗಟ್ಟೆ ಬಳಿ JDS, ಕಾಂಗ್ರೆಸ್ ಕಾರ್ಯಕರ್ತರ ಹೊಡೆದಾಟ
ಮತ ಕೇಳುವ ವಿಚಾರಕ್ಕೆ ಮತಗಟ್ಟೆ ಬಳಿ JDS, ಕಾಂಗ್ರೆಸ್ ಕಾರ್ಯಕರ್ತರ ಹೊಡೆದಾಟ
TV9 Web
| Edited By: |

Updated on:Dec 27, 2021 | 12:39 PM

Share

ರಾಮನಗರ: ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಇಂದು ಮತದಾನ ಶುರುವಾಗಿದೆ. ಐದು ನಗರಸಭೆ, 19 ಪುರಸಭೆ, 34 ಪಟ್ಟಣ ಪಂಚಾಯಿತಿಗಳ ಒಟ್ಟು 1185 ವಾರ್ಡ್‌ಗಳಲ್ಲಿಂದು ವೋಟಿಂಗ್ ನಡೆಯುತ್ತಿದೆ. ಆದ್ರೆ ಬಿಡದಿ‌ ಪುರಸಭೆ ಚುನಾವಣೆ ಹಿನ್ನೆಲೆ ಮತಗಟ್ಟೆ ಬಳಿ JDS, ಕಾಂಗ್ರೆಸ್ ಕಾರ್ಯಕರ್ತರು ಹೊಡೆದಾಡಿಕೊಂಡ ಘಟನೆ ನಡೆದಿದೆ.

ರಾಮನಗರ ಜಿಲ್ಲೆ ಬಿಡದಿಯ ವಾರ್ಡ್ ನಂಬರ್ 1ರಲ್ಲಿ ಕಾರ್ಯಕರ್ತರ ನಡುವೆ ಭಾರಿ ಗಲಾಟೆಯಾಗಿದೆ. ರಕ್ತ ಬರುವಂತೆ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದಾರೆ. ಜೆಡಿಎಸ್ನ ಯಲ್ಲಪ್ಪ ಕಾಂಗ್ರೆಸ್ನ ಸಿದ್ಧರಾಜು ನಡುವೆ ಮತ ಕೇಳುವ ವಿಚಾರವಾಗಿ ಪರಸ್ಪರ ಗಲಾಟೆ ನಡೆದಿದ್ದು ಹೊಡೆದಾಡಿಕೊಂಡಿದ್ದಾರೆ. ಸದ್ಯ ಪೊಲೀಸರು ಮಧ್ಯಪ್ರವೇಶ ಮಾಡಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.

ಇನ್ನು ಮತ್ತೊಂದು ಕಡೆ ಇದೇ ರೀತಿಯ ಘಟನೆ ಮರುಕಳಿಸಿದೆ. ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ವಾಗ್ವಾದ ನಡೆದಿದ್ದು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪಟ್ಟಣದ 3ನೇ ವಾರ್ಡ್ ಮತಗಟ್ಟೆ ಬಳಿ ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳು ಮತಯಾಚನೆ ಮಾಡ್ತಿದ್ದರು. ಮತಗಟ್ಟೆ ಬಳಿಯೇ ಮತಯಾಚನೆ ವಿಚಾರವಾಗಿ ಶುರುವಾದ ವಾಗ್ವಾದ ಜಗಳಕ್ಕೆ ಇಳಿದು ಹಲ್ಲೆ ನಡೆದಿದೆ. ಮಧ್ಯಪ್ರವೇಶ ಮಾಡಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಗದಗ: ಮತಗಟ್ಟೆ ಬಳಿಯೇ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಗಲಾಟೆ ಗದಗದ ಬೆಟಗೇರಿಯ ವಾರ್ಡ್ ನಂಬರ್ 10ರ ಮತಗಟ್ಟೆ ಬಳಿಯೇ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರು ಗಲಾಟೆ ಮಾಡಿಕೊಂಡಿದ್ದಾರೆ. ಮತಗಟ್ಟೆ ಬಳಿ ಪ್ರಚಾರಕ್ಕೆ ಕಾಂಗ್ರೆಸ್‌ಗೆ ಅವಕಾಶ ನೀಡಿದ್ದಾರೆಂದು ಆರೋಪಿಸಿ ಪೊಲೀಸರ ಜೊತೆ ಬಿಜೆಪಿ ಕಾರ್ಯಕರ್ತರು ವಾಗ್ವಾದ ನಡೆಸಿದ್ದಾರೆ. ಸದ್ಯ ಕಾರ್ಯಕರ್ತರನ್ನು ಪೊಲೀಸರು ಸಮಾಧಾನ ಮಾಡಿದ್ದಾರೆ.

ಇದನ್ನೂ ಓದಿ: ಅಮೆರಿಕದಲ್ಲಿ ಒಮಿಕ್ರಾನ್ ಹೆಚ್ಚಳ; ನ್ಯೂಯಾರ್ಕ್ ಆಸ್ಪತ್ರೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿದ್ದಾರೆ ಮಕ್ಕಳು

Published On - 11:11 am, Mon, 27 December 21

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?