AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಇದೇ ರೀತಿ ದಂಡ ವಿಧಿಸುತ್ತಿದ್ದರೆ ಎಸ್‌ಪಿ ಕಚೇರಿ ಮುಂದೆ ಧರಣಿ ನಡೆಸುತ್ತೇನೆ- ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ

ಮೇಕೆದಾಟು ಪಾದಯಾತ್ರೆ ಹಣೆಬರಹ ಎಲ್ಲಿಗೆ ಬಂದಿದೆ. 10 ದಿನ ಭೂರಿ ಭೋಜನ ತಿಂದಿದ್ದೇ ಸಿಕ್ಕಿದ್ದು ಇವರಿಗೆ. ಬಜೆಟ್‌ನಲ್ಲಿ 1,000 ಕೋಟಿ ಪಡೆದು ಏನು ಮಾಡ್ತೀರಾ. ಸಾವಿರ ಕೋಟಿಯಲ್ಲಿ ಕೆಲಸ ಮಾಡಲು ಸಾಧ್ಯವೇ ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ರಾಮನಗರ: ಇದೇ ರೀತಿ ದಂಡ ವಿಧಿಸುತ್ತಿದ್ದರೆ ಎಸ್‌ಪಿ ಕಚೇರಿ ಮುಂದೆ ಧರಣಿ ನಡೆಸುತ್ತೇನೆ- ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ
ಹೆಚ್​ಡಿ ಕುಮಾರಸ್ವಾಮಿ
TV9 Web
| Edited By: |

Updated on:Mar 07, 2022 | 2:07 PM

Share

ರಾಮನಗರ: ಪೊಲೀಸರಿಗೆ 500 ರೂಪಾಯಿ ವ್ಯಾಲ್ಯೂ ಗೊತ್ತಿರುವುದಿಲ್ಲ. ಆದರೆ ರೈತನಿಗೆ ಪ್ರತಿ ರೂಪಾಯಿಯೂ ಮುಖ್ಯವಾಗಿರುತ್ತೆ. ಇದೇ ರೀತಿ ದಂಡ ವಿಧಿಸುತ್ತಿದ್ದರೆ ಪ್ರತಿಭಟನೆ ಮಾಡುತ್ತೇನೆ. ಎಸ್‌ಪಿ ಕಚೇರಿ ಮುಂದೆ ಧರಣಿ ಕೂರುವುದಾಗಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಎಚ್ಚರಿಕೆ ಕೊಟ್ಟಿದ್ದಾರೆ. ಅವನು ಇಲ್ಲಿಗೆ ಏಕೆ ಬಂದಿದ್ದಾನೆಂದು ನನಗೆ ಗೊತ್ತಿದೆ ಎಂದು ರಾಮನಗರ ಎಸ್.ಪಿ ಸಂತೋಷ್ ಬಾಬು ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಗುಡುಗಿದ್ದಾರೆ.

ಇಲ್ಲಿ ಪೊಲೀಸರು ದಂಡ ವಿಧಿಸುವುದು ಹೆಚ್ಚಾಗಿದೆ ಎಂದು ಜೆಡಿಎಸ್ ಕಾರ್ಯಕರ್ತರಿಂದ ಕುಮಾರಸ್ವಾಮಿಗೆ ದೂರು ನೀಡಲಾಗಿದೆ. ಈ ವೇಳೆ ಪೊಲೀಸರ ವಿರುದ್ಧ ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೀಗೆ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕ ಸರ್ಕಾರ ಪೊಲೀಸರಿಗೆ ಸಂಬಳ ನೀಡುವುದಿಲ್ಲವಾ? ನಾನು ರಾಮನಗರ ಎಸ್‌ಪಿ ಜತೆ ಮಾನತಾಡುವುದಿಲ್ಲ. ನೀವು ಹೋಗಿ ಎಸ್‌ಪಿಯನ್ನು ಕೇಳಿ ಎಂದು ಹೆಚ್‌.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಚನ್ನಪಟ್ಟಣ ಜನರನ್ನು ದಾರಿ ತಪ್ಪಿಸಲು ಸಾಧ್ಯವಿಲ್ಲ. ಇಂಜಿನಿಯರ್ ಕರೆದೊಯ್ದು MLCಯಿಂದ ಕೆರೆ ವೀಕ್ಷಣೆ ಮಾಡಲಾಗಿದೆ. ಕೆಲಸ ಮಾಡಿಸ್ತಿರುವುದು ನಾನು, ಸ್ಕೋಪ್ ಬೇರೆಯವರದ್ದು. ಸಿ.ಪಿ. ಯೋಗೇಶ್ವರ್ ಸ್ಕೋಪ್ ತೆಗೆದುಕೊಳ್ಳಲು ಬಂದಿದ್ದಾರೆ ಎಂದು ಇದಕ್ಕೂ ಮೊದಲು ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಚಕ್ಕೆರೆ ಗ್ರಾಮದಲ್ಲಿ ಮಾತನಾಡಿ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಮೇಕೆದಾಟು ಪಾದಯಾತ್ರೆ ಹಣೆಬರಹ ಎಲ್ಲಿಗೆ ಬಂದಿದೆ. 10 ದಿನ ಭೂರಿ ಭೋಜನ ತಿಂದಿದ್ದೇ ಸಿಕ್ಕಿದ್ದು ಇವರಿಗೆ. ಬಜೆಟ್‌ನಲ್ಲಿ 1,000 ಕೋಟಿ ಪಡೆದು ಏನು ಮಾಡ್ತೀರಾ. ಸಾವಿರ ಕೋಟಿಯಲ್ಲಿ ಕೆಲಸ ಮಾಡಲು ಸಾಧ್ಯವೇ ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ರಾಮನಗರ: ಗೌಡಗೆರೆ ಗ್ರಾಮದ ಚಾಮುಂಡೇಶ್ವರಿ ದೇಗುಲದಲ್ಲಿದ್ದ ಪವಾಡ ಬಸವಪ್ಪ ನಿಧನ

ಇದನ್ನೂ ಓದಿ: ಉಕ್ರೇನ್​ನಿಂದ ಬಂದ ಎಂಬಿಬಿಎಸ್ ವಿದ್ಯಾರ್ಥಿಗಳ ಭವಿಷ್ಯವೇನು? ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಟ್ವೀಟ್

Published On - 2:04 pm, Mon, 7 March 22

ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್