AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramanagara News: ನಾಡಿನಲ್ಲಿ ಬಹಳ ಜನ ಸಿಎಂ ಆಗಬೇಕೆಂದು ಆಸೆ ಪಟ್ಟಿದ್ದಾರೆ; ಆದರೆ ಭಗವಂತನ ಇಚ್ಛೆ ಬೇರೆ ಇದೆ ಎಂದ ಕುಮಾರಸ್ವಾಮಿ

ತಾಯಿ ಚಾಮುಂಡೇಶ್ವರಿ ಇಚ್ಛೆ ಬೇರೆ ಇದೆ. ಚಾಮುಂಡೇಶ್ವರಿ ಮತ್ತು ಜನರ ಆಶಿರ್ವಾದದಿಂದ ರಾಜ್ಯದಲ್ಲಿ ಮತ್ತೆ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.

Ramanagara News: ನಾಡಿನಲ್ಲಿ ಬಹಳ ಜನ ಸಿಎಂ ಆಗಬೇಕೆಂದು ಆಸೆ ಪಟ್ಟಿದ್ದಾರೆ; ಆದರೆ ಭಗವಂತನ ಇಚ್ಛೆ ಬೇರೆ ಇದೆ ಎಂದ ಕುಮಾರಸ್ವಾಮಿ
ಮಾಜಿ ಸಿಎಂ H.D.ಕುಮಾರಸ್ವಾಮಿ
TV9 Web
| Edited By: |

Updated on:Jul 20, 2022 | 7:55 AM

Share

ರಾಮನಗರ: ನಾಡಿನಲ್ಲಿ ಬಹಳ ಜನ ಸಿಎಂ ಆಗಬೇಕೆಂದು ಆಸೆ ಪಟ್ಟಿದ್ದಾರೆ. ಆದರೆ ಭಗವಂತನ ಇಚ್ಛೆ ಬೇರೆ ಇದೆ ಎಂದು ರಾಮನಗರದಲ್ಲಿ ಆಯೋಜಿಸಿದ್ದ ಚಾಮುಂಡೇಶ್ವರಿ ಕರಗ ಮಹೋತ್ಸವದ ಸಾಂಸ್ಕೃತಿಕ ‌ಕಾರ್ಯಕ್ರಮದಲ್ಲಿ ಮಾಜಿ ಸಿಎಂ H.D.ಕುಮಾರಸ್ವಾಮಿ ಹೇಳಿಕೆ ನೀಡಿದರು. ತಾಯಿ ಚಾಮುಂಡೇಶ್ವರಿ ಇಚ್ಛೆ ಬೇರೆ ಇದೆ. ಚಾಮುಂಡೇಶ್ವರಿ ಮತ್ತು ಜನರ ಆಶಿರ್ವಾದದಿಂದ ರಾಜ್ಯದಲ್ಲಿ ಮತ್ತೆ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು. ಕಳೆದ ಮೂರು ವರ್ಷ ಕೊವಿಡ್​ನಿಂದ ಕರಗ ಮಾಡಲು ಸಾಧ್ಯವಾಗಿರಲಿಲ್ಲ. ನನಗೆ ರಾಜಕೀಯ ಜನ್ಮ ಕೊಟ್ಟಿರುವ ನಿಮ್ಮ ಜೊತೆ ಮನಸ್ಸಿನಲ್ಲಿ ಇರುವ ಭಾವನೆ ಹಂಚಿಕೊಳ್ಳಲು ಈ ಕಾರ್ಯಕ್ರಮ. ರೈತರು ನೆಮ್ಮದಿಯಿಂದ ಬದಕಲು ಚಾಮುಂಡೇಶ್ವರಿ ತಾಯಿ ಕರುಣಿಸಲಿ. 2019ರ ಜುಲೈ ರಂದು ನನ್ನ ಅಧಿಕಾರವನ್ನ ಕುತಂತ್ರದಿಂದ ತೆಗೆಯಲಾಗಿತ್ತು. ತಾಯಿ ಚಾಮುಂಡೇಶ್ವರಿ ಆಶಿರ್ವಾದ ಪಡೆದು, ನಿಮ್ಮ ಸಮ್ಮುಖದಲ್ಲಿ ಪ್ರತಿಜ್ಷೆ ಮಾಡಿ ಹೊರಟಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೂ ಶಿವಕುಮಾರ ಮುಖ್ಯಮಂತ್ರಿ ಆಗೋದು ಕಷ್ಟ: ಹೆಚ್ ಡಿ ಕುಮಾರಸ್ವಾಮಿ

ನಮ್ಮ ಬದುಕು ಇರುವುದು ಹಳ್ಳಿಯಲ್ಲಿ. ಕಳೆದ ರಾಜಕೀಯ ಸನ್ನಿವೇಶದಲ್ಲಿ ಎರಡು ಕಡೆ ಕಾರ್ಯಕರ್ತರ ಒತ್ತಡದಿಂದ ಚುನಾವಣೆಗೆ ಸ್ವರ್ಧೆ ಮಾಡಿದ್ದೇ. ಸಸಿಯಾಗಿ ನೆಟ್ಟು, ರಾಜ್ಯದಲ್ಲಿ ಹೆಮ್ಮಾರವಾಗಿ ಬೆಳೆಸಿದ್ದೀರಿ. ನಾನು ಮಣ್ಣಲಿ ಮಣ್ಣಾಗುವುದು ಇದೇ ಮಣ್ಣಿನಲ್ಲಿ. ನೀವು ಕೊಟ್ಟ ಶಕ್ತಿಯನ್ನ ಲಕ್ಷಾಂತರ ಜನರಿಗೆ ಧಾರೆ ಎರೆದಿದ್ದೇನೆ. ನನ್ನ ರಾಮನಗರ ತಾಲೂಕಿನ ಸಂಬಂಧ ತಾಯಿ ಮಗನ ಸಂಬಂಧ. ಚನ್ನಪಟ್ಟಣ ಕ್ಷೇತ್ರಕ್ಕೆ ರಾಜೀನಾಮೆ ಕೊಟ್ಟರೆ ಮತ್ತೆ ಅಲ್ಲಿ ಗೆಲ್ಲಲೂ ಕಷ್ಟ ಎಂದು ಅಲ್ಲ. ನಾವು ಎಂದು ಜನರಿಗೆ ತೊಂದರೆ ಕೊಟ್ಟಿಲ್ಲ. ನನ್ನ ಜೀವನದ ಸವಾಲು ಪಂಚರತ್ನ‌ ಯೋಜನೆ. ನಾನು ಬದುಕಿರುವ ಒಂದೊಂದು ಕ್ಷಣ ಬಡವರಿಗಾಗಿ. ನೀವು ಕೊಟ್ಟಿರುವ ಶಕ್ತಿಯಿಂದ ಕೆಲಸ ಮಾಡುತ್ತಿದ್ದೇನೆ.

ರಾಜೀವ್ ಗಾಂಧಿ ವಿವಿ ಕಾಮಗಾರಿಗೆ ಗುದ್ದಲಿ ಪೂಜೆ ಮಾಡುತ್ತೇನೆ ಎನ್ನುತ್ತಾರೆ ಅಷ್ಟೇ. ಆದರೆ ಕಾಮಗಾರಿ ಆರಂಭಿಸಿಲ್ಲ. ರಾಮನಗರದಲ್ಲಿ ಕೆಲ ತಪ್ಪಿನ ರಾಜಕಾರಣ ‌ಮಾಡುತ್ತಿದ್ದಾರೆ. ಆರೋಗ್ಯದ ಸಮಸ್ಯೆ ಇದ್ದರು ನಿಮ್ಮ ಸೇವೆ ಮಾಡಲು ಹೊರಟಿದ್ದೇನೆ. ನಾನು ಶಿಕ್ಷಣ ಸಂಸ್ಥೆ, ಕೈಗಾರಿಕೆ ‌ಹೊಂದಿಲ್ಲ. ಕೇತಗಾನಬಳಿ‌ 45 ಎಕರೆ ಜಮೀನು ಬಿಟ್ಟರೇ ಬೇರೆ ಏನು ಇಲ್ಲ. ಪ್ರತಿನಿತ್ಯ ಮನೆಯ ಬಳಿ‌ ಜನರು ಬರುತ್ತಾರೆ ಎಲ್ಲಿಂದ ಕೊಡಲಿ. ಐದು ವರ್ಷದ ಸರ್ಕಾರ ಕೊಟ್ಟರೆ ನಿಮ್ಮ ಮನೆ ಮಗನಾಗಿ ಕೆಲಸ ಮಾಡುತ್ತೇನೆ. ಕೆವರಿಗೆ ತಪ್ಪಾಗಿದ್ದರೇ ನನ್ನಿಂದ ಆಗಿಲ್ಲ. ಭಗವಂತನಿಂದ ಆಗಿದೆ. ಅಪಪ್ರಚಾರಕ್ಕೆ ಒಳಗಾಗಬೇಡಿ. ಏನೇ ಇದ್ದರು ನನ್ನ ಬಳಿ ಬಂದು ತಿಳಿಸಿ. ನನ್ನ ಸಂಕಲ್ಪಕ್ಕೆ ನಿಮ್ಮ ಆರ್ಶಿವಾದ ಬೇಕು. ನನ್ನ ಭಾವನೆಗಳನ್ನ ನಿಮ್ಮ ಮುಂದೆ ಇಟ್ಟಿದ್ದೇನೆ. ನನಗೆ ತಾಯಿ ಚಾಮುಂಡೇಶ್ವರಿ ಮೇಲೆ ನಂಬಿಕೆ ಇದೆ ಎಂದು ಮಾಜಿ ಸಿಎಂ H.D.ಕುಮಾರಸ್ವಾಮಿ ಹೇಳಿದರು.

Published On - 7:54 am, Wed, 20 July 22

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು