Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTC ಬಸ್‌ನಲ್ಲಿ ಟಿಕೆಟ್ ಮಷಿನ್ ಖಾಸಗಿ ವ್ಯಕ್ತಿಗೆ ಕೊಟ್ಟು ಕೆಲಸ ಕಳೆದುಕೊಂಡ ಕಂಡಕ್ಟರ್

KSRTC ಬಸ್‌ ಕಂಡಕ್ಟರ್​ ಖಾಸಗಿ ವ್ಯಕ್ತಿಯೋರ್ವನಿಗೆ ಮಷಿನ್ ನೀಡಿ ಟಿಕೆಟ್​ ನೀಡುವಂತೆ ಹೇಳಿ ಕೆಲಸ ಕಳೆದುಕೊಂಡಿದ್ದಾನೆ. ಇನ್ನು ಖಾಸಗಿ ವ್ಯಕ್ತಿ ತಾನು ಟಿಕೆಟ್​ ಕೊಡುವ ಅನುಭವ ಪಡೆಯುತ್ತಿದ್ದೇನೆಂದು ರಾಜಾರೋಷವಾಗಿ ಪ್ರಯಾಣಿಕರಿಂದ ಹಣ ಸ್ವೀಕರಿಸಿದ್ದ. ಅಲ್ಲದೇ ಹಣ ಪಡೆದುಕೊಂಡು ಟಿಕೆಟ್​ ನೀಡುತ್ತಿರಲಿಲ್ಲ. ಟಿಕೆಟ್​ ಅಂತ ಪ್ರಯಾಣಿಕರು ಕೇಳಿದ್ರೆ ನಾನು ನೋಡಿಕೊಳ್ಳುತ್ತೇನೆ, ನಮ್ಮನ್ನು ಚೆಕ್​ ಮಾಡಲು ಯಾರು ಬರಲ್ಲ ಎಂದು ಹೇಳಿಕೊಂಡಿದ್ದಾನೆ. ಇದೀಗ ಕಂಡಕ್ಟರ್​ ಕೆಲಸ ಕಳೆದುಕೊಳ್ಳುವಂತಾಗಿದೆ.

KSRTC ಬಸ್‌ನಲ್ಲಿ ಟಿಕೆಟ್ ಮಷಿನ್ ಖಾಸಗಿ ವ್ಯಕ್ತಿಗೆ ಕೊಟ್ಟು ಕೆಲಸ ಕಳೆದುಕೊಂಡ ಕಂಡಕ್ಟರ್
Kanakapura Bus Conductor
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ರಮೇಶ್ ಬಿ. ಜವಳಗೇರಾ

Updated on:Jan 15, 2025 | 9:24 PM

ರಾಮನಗರ, (ಜನವರಿ 15): ಕೆಎಸ್ಆರ್‌ಟಿಸಿ ಬಸ್‌ ನಲ್ಲಿ (KSRTC Bus) ಖಾಸಗಿ ವ್ಯಕ್ತಿಯೋರ್ವ ಪ್ರಯಾಣಿಕರಿಗೆ ಟಿಕೆಟ್ ವಿತರಣೆ ‌ಮಾಡ್ತಿದ್ದ ಪ್ರಕರಣ ಸಂಬಂಧ ಬಸ್ ನಿರ್ವಾಹಕನನ್ನ (Bus Conductor) ಅಮಾನತು ಮಾಡಲಾಗಿದೆ. ಕನಕಪುರ ಡಿಪೋಗೆ ಸೇರಿದ KA42-F0746 ಕೆಎಸ್ಆರ್‌ಟಿಸಿ ಬಸ್‌ನಲ್ಲಿ ನಿರ್ವಾಹಕ, ಟಿಕೆಟ್​ ಮಷಿನ್​ ಖಾಸಗಿ ವ್ಯಕ್ತಿಗೆ ಕೊಟ್ಟು ಇದೀಗ ಕೆಲಸ ಕಳೆದುಕೊಂಡಿದ್ದಾರೆ. ಚಾಲಕ ಕಂ ನಿರ್ವಾಹಕ ನವೀನ್​ ಟಿ.ಎನ್​ ಎನ್ನುವರನ್ನು ಅಮಾನತು ಮಾಡಿ ಶಿಸ್ತುಪಾಲನಾ ವಿಭಾಗೀಯ ನಿಯಂತ್ರಣಾಧಿಕಾರಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಟಿಕೆಟ್​ ನೀಡಿದ್ದ ಖಾಸಗಿ ವ್ಯಕ್ತಿ ವಿರುದ್ಧ ಕನಕಪುರ ಡಿಪೋ ಮ್ಯಾನೇಜರ್ ಕೋಡಿಹಳ್ಳಿ ಠಾಣೆಗೆ ದೂರು ನೀಡಿದ್ದಾರೆ.

ಕಂಡಕ್ಟರ್ ನವೀನ್​ ಖಾಸಗಿ ವ್ಯಕ್ತಿಗೆ ಟಿಕೆಟ್ ಮಷಿನ್ ನೀಡಿದ್ದರು. ಇನ್ನು ಆ ವ್ಯಕ್ತಿ ಪ್ರಯಾಣಿಕರಿಗೆ ಟಿಕೆಟ್ ವಿತರಣೆ ಮಾಡುತ್ತಿದ್ದ. ಜೊತೆಗೆ ಮಹಿಳೆಯರಿಗೆ ಉಚಿತ ಟಿಕೆಟ್ ನೀಡಿ, ಪುರುಷರು ಹಣ ಕೊಟ್ಟರೂ ಟಿಕೆಟ್ ನೀಡದೇ ರಾಜರೋಷವಾಗಿ ಅಧಿಕಾರಿಗಳಿಗೆ ಮಾಮೂಲಿ ಕೊಡುತ್ತೇವೆ ನಮ್ಮ ಬಸ್ ಚೆಕ್ಕಿಂಗ್ ಮಾಡಲು ಯಾರೂ ಬರಲ್ಲ ಎಂದಿದ್ದ. ಇದನ್ನ ಪ್ರಯಾಣಿಕನೋರ್ವ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ವಿಡಿಯೋ ಫುಲ್ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಅಧಿಕಾರಿಗಳು ಕಂಡಕ್ಟರ್​ ವಿರುದ್ಧ ಕ್ರಮಕೈಗೊಂಡಿದ್ದಾರೆ.

ರಾಜಾರೋಷವಾಗಿ ಪುರುಷರ ಬಳಿ ದುಡ್ಡು ಸ್ವೀಕರಿಸಿ ಟಿಕೆಟ್ ನೀಡುತ್ತಿರಲಿಲ್ಲ. ಇದಕ್ಕೆ ಪ್ರಯಾಣಿಕರು ಸಹ ಚೆಕ್ಕಿಂಗ್ ಅಧಿಕಾರಿಗಳು ಬಂದ್ರೆ ಏನು ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸಿದ ಯುವಕ, ಅದೆಲ್ಲಾ ನಾನು ನೋಡಿಕೊಳ್ಳುತ್ತೇನೆ. ಅಧಿಕಾರಿಗಳಿಗೆ ತಿಂಗಳು ಮಾಮೂಲಿ ಕೊಡುತ್ತೇವೆ. ಅವರೆಲ್ಲಾ ನಮ್ಮ ಬಸ್ ಚೆಕ್ ಮಾಡುವುದಿಲ್ಲ ಎಂದಿದ್ದಾನೆ. ಇದನ್ನ ಪ್ರಯಾಣಿಕನೋರ್ವ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು.ಇದರಿಂದ ಎಚ್ಚೆತ್ತ ಅಧಿಕಾರಿಗಳು ಕರ್ತವ್ಯ ಲೋಪವೆಸಗಿದ್ದ ಕೆಎಸ್ಆರ್‌ಟಿಸಿ ಬಸ್‌ನ ನಿರ್ವಾಹಕನನ್ನ ಅಮಾನತು ಮಾಡಿದ್ದಾರೆ.

Published On - 9:22 pm, Wed, 15 January 25

ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!
ಸೀರೆಯುಟ್ಟು, ಚಪ್ಪಲಿ ಧರಿಸಿ ಲಂಡನ್​ನ ಪಾರ್ಕ್​ನಲ್ಲಿ ಮಮತಾ ಜಾಗಿಂಗ್
ಸೀರೆಯುಟ್ಟು, ಚಪ್ಪಲಿ ಧರಿಸಿ ಲಂಡನ್​ನ ಪಾರ್ಕ್​ನಲ್ಲಿ ಮಮತಾ ಜಾಗಿಂಗ್
ದಾವಣಗೆರೆ: ನೋಡ ನೋಡ್ತಿದ್ದಂತೆಯೇ ಸುಟ್ಟು ಕರಕಲಾದ ಕಾರುಗಳು
ದಾವಣಗೆರೆ: ನೋಡ ನೋಡ್ತಿದ್ದಂತೆಯೇ ಸುಟ್ಟು ಕರಕಲಾದ ಕಾರುಗಳು
ಕೋಲಾರ: ಹೆಲ್ಮೆಟ್ ತೆಗೀತಿದ್ದಂತೆ ಬುಸ್ ಎಂದ ನಾಗಪ್ಪ! ಆಮೇಲೇನಾಯ್ತು ನೋಡಿ
ಕೋಲಾರ: ಹೆಲ್ಮೆಟ್ ತೆಗೀತಿದ್ದಂತೆ ಬುಸ್ ಎಂದ ನಾಗಪ್ಪ! ಆಮೇಲೇನಾಯ್ತು ನೋಡಿ
ಧಗ ಧಗನೆ ಹೊತ್ತಿ ಉರಿದ ಸಿಲಿಂಡರ್ ತುಂಬಿದ್ದ ಟ್ರಕ್, ಹಲವು ಬಾರಿ ಸ್ಫೋಟ
ಧಗ ಧಗನೆ ಹೊತ್ತಿ ಉರಿದ ಸಿಲಿಂಡರ್ ತುಂಬಿದ್ದ ಟ್ರಕ್, ಹಲವು ಬಾರಿ ಸ್ಫೋಟ
VIDEO: ರನೌಟ್ ಮಾಡಲು ಕುಲ್ದೀಪ್ ಯಾದವ್​ನ ತಳ್ಳಿದ ರಿಷಭ್ ಪಂತ್
VIDEO: ರನೌಟ್ ಮಾಡಲು ಕುಲ್ದೀಪ್ ಯಾದವ್​ನ ತಳ್ಳಿದ ರಿಷಭ್ ಪಂತ್
VIDEO: ಗೆಲ್ಲುವ ಪಂದ್ಯವನ್ನು 'ಕೈ ಚೆಲ್ಲಿದ' ರಿಷಭ್ ಪಂತ್
VIDEO: ಗೆಲ್ಲುವ ಪಂದ್ಯವನ್ನು 'ಕೈ ಚೆಲ್ಲಿದ' ರಿಷಭ್ ಪಂತ್
Daily Devotional: ಸ್ತ್ರೀಯರಿಗೆ ಎಡಗಣ್ಣು ಅದುರುವುದರ ಹಿಂದಿನ ರಹಸ್ಯ
Daily Devotional: ಸ್ತ್ರೀಯರಿಗೆ ಎಡಗಣ್ಣು ಅದುರುವುದರ ಹಿಂದಿನ ರಹಸ್ಯ