ರಾಮನಗರ: ವಿದ್ಯಾರ್ಥಿನಿಯರಿಗೆ ಬಿಯರ್​ ಕುಡಿಸಿ ಉಪನ್ಯಾಸಕರಿಂದ ಕಿರುಕುಳ

ರಾಮನಗರ ಜಿಲ್ಲೆಯ ಕನಕಪುರ ಪಟ್ಟಣದ ರೂರಲ್‌ ಪದವಿ ಪೂರ್ವ ಕಾಲೇಜಿನ ಮೂವರು ಉಪನ್ಯಾಸಕರು ತಮ್ಮ ಜವಾಬ್ದಾರಿ ಮರೆತು, ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಪ್ರವಾಸಕ್ಕೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ವಿದ್ಯರ್ಥಿನಿಯರಿಗೆ ಬಿಯರ್​ ಕುಡಿಸಿದ್ದಾರೆ. ಮುಂದೇನಾಯ್ತು? ಈ ಸ್ಟೋರಿ ಓದಿ.

ರಾಮನಗರ: ವಿದ್ಯಾರ್ಥಿನಿಯರಿಗೆ ಬಿಯರ್​ ಕುಡಿಸಿ ಉಪನ್ಯಾಸಕರಿಂದ ಕಿರುಕುಳ
ಉಪನ್ಯಾಸಕ ಬಿಯರ್​​ ಸೇವನೆ, ವಿದ್ಯಾರ್ಥಿನಿಯರಿಗೆ ಕಿರುಕುಳ
Follow us
| Updated By: ವಿವೇಕ ಬಿರಾದಾರ

Updated on: Oct 18, 2024 | 10:18 AM

ರಾಮನಗರ, ಅಕ್ಟೋಬರ್​ 18: ವಿದ್ಯಾರ್ಥಿನಿಯರಿಗೆ (Students) ಬಿಯರ್ ಕುಡಿಸಿ, ಡ್ಯಾನ್ಸ್ ಮಾಡುವಂತೆ ಕಿರುಕುಳ ನೀಡಿದ ಆರೋಪದ ಮೇಲೆ ಕನಕಪುರ (Kanakapura) ಪಟ್ಟಣದ ರೂರಲ್‌ ಪದವಿ ಪೂರ್ವ ಕಾಲೇಜಿನ ಮೂವರು ಉಪನ್ಯಾಸಕರ (Lecturer) ವಿರುದ್ಧ ಕ್ರಮ ಕೈಗೊಳ್ಳುವಂತೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಆದೇಶಿಸಿದೆ. ಉಪನ್ಯಾಸಕರಾದ ವಿಶ್ವನಾಥ್​, ಲಕ್ಷ್ಮೀಶ್​, ನಾಗೇಶ್ ವಿರುದ್ಧ ದಾಖಲಾಗಿದೆ. ಅಕ್ಟೋಬರ್​​​ 09 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಕನಕಪುರ ಪಟ್ಟಣದ ರೂರಲ್‌ ಪದವಿ ಪೂರ್ವ ಕಾಲೇಜಿನಿಂದ ಅಕ್ಟೋಬರ್​​​ 5 ರಿಂದ 10ರವರೆಗೆ ಮಡಿಕೇರಿ ಪ್ರವಾಸ ಆಯೋಜಿಸಲಾಗಿತ್ತು. ಪ್ರವಾಸದಲ್ಲಿ ಪ್ರಾಂಶುಪಾಲರು ಬಿಯರ್​ ಕುಡಿದಿದ್ದಾರೆ. ಬಳಿಕ ಮೂವರು ವಿದ್ಯಾರ್ಥಿನಿಯರನ್ನು ಕೋಣೆಯಲ್ಲಿ ಕೂಡಿಹಾಕಿ ಬಲವಂತವಾಗಿ ಬಿಯರ್​ ಕುಡಿಸಿದ್ದಾರೆ. ಅಲ್ಲದೇ, ತಮ್ಮ ಜೊತೆ ಡ್ಯಾನ್ಸ್​ ಮಾಡುವಂತೆ ಬಲವಂತ ಮಾಡಿದ್ದಾರೆ.

ಇದನ್ನೂ ಓದಿ: ಸ್ವೀಟಿಯ ಅಕ್ರಮ ಸಂಬಂಧಕ್ಕೆ ಅಡ್ಡಿ, ಮಕ್ಕಳು ಬಲಿ

ಪ್ರವಾಸದಿಂದ ಕಾಲೇಜಿಗೆ ಬಂದ ಬಳಿಕ ವಿದ್ಯಾರ್ಥಿನಿಯರು ನಡೆದ ಘಟನೆ ಬಗ್ಗೆ ಮಹಿಳಾ ಉಪನ್ಯಾಸಕರಿಗೆ ಹೇಳಿದ್ದಾರೆ. ಅದಕ್ಕೆ ಮಹಿಳಾ ಉಪನ್ಯಾಸಕಿಯರು “ಕಾಲೇಜು ಅಂದಮೇಲೆ ಇದು ಕಾಮನ್” ಎಂದಿದ್ದಾರೆ. ಆದರೆ, ಈ ವಿಚಾರ ಮಕ್ಕಳಾ ಹಕ್ಕುಗಳ ರಕ್ಷಣಾ ಆಯೋಗಕ್ಕೆ ತಿಳಿದಿದೆ.

ವಿಚಾರ ತಿಳಿದ ಕೂಡಲೇ ಮಕ್ಕಳಾ ಹಕ್ಕುಗಳ ರಕ್ಷಣಾ ಆಯೋಗ, ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಪತ್ರ ಬರೆದು ಉಪನ್ಯಾಸಕರ ವಿರುದ್ಧ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದೆ. ಅಲ್ಲದೇ ಪ್ರಕರಣದ ತನಿಖೆ ನಡೆಸಿ ಏಳು ದಿನದೊಳಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ