Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ವಿದ್ಯಾರ್ಥಿನಿಯರಿಗೆ ಬಿಯರ್​ ಕುಡಿಸಿ ಉಪನ್ಯಾಸಕರಿಂದ ಕಿರುಕುಳ

ರಾಮನಗರ ಜಿಲ್ಲೆಯ ಕನಕಪುರ ಪಟ್ಟಣದ ರೂರಲ್‌ ಪದವಿ ಪೂರ್ವ ಕಾಲೇಜಿನ ಮೂವರು ಉಪನ್ಯಾಸಕರು ತಮ್ಮ ಜವಾಬ್ದಾರಿ ಮರೆತು, ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಪ್ರವಾಸಕ್ಕೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ವಿದ್ಯರ್ಥಿನಿಯರಿಗೆ ಬಿಯರ್​ ಕುಡಿಸಿದ್ದಾರೆ. ಮುಂದೇನಾಯ್ತು? ಈ ಸ್ಟೋರಿ ಓದಿ.

ರಾಮನಗರ: ವಿದ್ಯಾರ್ಥಿನಿಯರಿಗೆ ಬಿಯರ್​ ಕುಡಿಸಿ ಉಪನ್ಯಾಸಕರಿಂದ ಕಿರುಕುಳ
ಉಪನ್ಯಾಸಕ ಬಿಯರ್​​ ಸೇವನೆ, ವಿದ್ಯಾರ್ಥಿನಿಯರಿಗೆ ಕಿರುಕುಳ
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ವಿವೇಕ ಬಿರಾದಾರ

Updated on: Oct 18, 2024 | 10:18 AM

ರಾಮನಗರ, ಅಕ್ಟೋಬರ್​ 18: ವಿದ್ಯಾರ್ಥಿನಿಯರಿಗೆ (Students) ಬಿಯರ್ ಕುಡಿಸಿ, ಡ್ಯಾನ್ಸ್ ಮಾಡುವಂತೆ ಕಿರುಕುಳ ನೀಡಿದ ಆರೋಪದ ಮೇಲೆ ಕನಕಪುರ (Kanakapura) ಪಟ್ಟಣದ ರೂರಲ್‌ ಪದವಿ ಪೂರ್ವ ಕಾಲೇಜಿನ ಮೂವರು ಉಪನ್ಯಾಸಕರ (Lecturer) ವಿರುದ್ಧ ಕ್ರಮ ಕೈಗೊಳ್ಳುವಂತೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಆದೇಶಿಸಿದೆ. ಉಪನ್ಯಾಸಕರಾದ ವಿಶ್ವನಾಥ್​, ಲಕ್ಷ್ಮೀಶ್​, ನಾಗೇಶ್ ವಿರುದ್ಧ ದಾಖಲಾಗಿದೆ. ಅಕ್ಟೋಬರ್​​​ 09 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಕನಕಪುರ ಪಟ್ಟಣದ ರೂರಲ್‌ ಪದವಿ ಪೂರ್ವ ಕಾಲೇಜಿನಿಂದ ಅಕ್ಟೋಬರ್​​​ 5 ರಿಂದ 10ರವರೆಗೆ ಮಡಿಕೇರಿ ಪ್ರವಾಸ ಆಯೋಜಿಸಲಾಗಿತ್ತು. ಪ್ರವಾಸದಲ್ಲಿ ಪ್ರಾಂಶುಪಾಲರು ಬಿಯರ್​ ಕುಡಿದಿದ್ದಾರೆ. ಬಳಿಕ ಮೂವರು ವಿದ್ಯಾರ್ಥಿನಿಯರನ್ನು ಕೋಣೆಯಲ್ಲಿ ಕೂಡಿಹಾಕಿ ಬಲವಂತವಾಗಿ ಬಿಯರ್​ ಕುಡಿಸಿದ್ದಾರೆ. ಅಲ್ಲದೇ, ತಮ್ಮ ಜೊತೆ ಡ್ಯಾನ್ಸ್​ ಮಾಡುವಂತೆ ಬಲವಂತ ಮಾಡಿದ್ದಾರೆ.

ಇದನ್ನೂ ಓದಿ: ಸ್ವೀಟಿಯ ಅಕ್ರಮ ಸಂಬಂಧಕ್ಕೆ ಅಡ್ಡಿ, ಮಕ್ಕಳು ಬಲಿ

ಪ್ರವಾಸದಿಂದ ಕಾಲೇಜಿಗೆ ಬಂದ ಬಳಿಕ ವಿದ್ಯಾರ್ಥಿನಿಯರು ನಡೆದ ಘಟನೆ ಬಗ್ಗೆ ಮಹಿಳಾ ಉಪನ್ಯಾಸಕರಿಗೆ ಹೇಳಿದ್ದಾರೆ. ಅದಕ್ಕೆ ಮಹಿಳಾ ಉಪನ್ಯಾಸಕಿಯರು “ಕಾಲೇಜು ಅಂದಮೇಲೆ ಇದು ಕಾಮನ್” ಎಂದಿದ್ದಾರೆ. ಆದರೆ, ಈ ವಿಚಾರ ಮಕ್ಕಳಾ ಹಕ್ಕುಗಳ ರಕ್ಷಣಾ ಆಯೋಗಕ್ಕೆ ತಿಳಿದಿದೆ.

ವಿಚಾರ ತಿಳಿದ ಕೂಡಲೇ ಮಕ್ಕಳಾ ಹಕ್ಕುಗಳ ರಕ್ಷಣಾ ಆಯೋಗ, ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಪತ್ರ ಬರೆದು ಉಪನ್ಯಾಸಕರ ವಿರುದ್ಧ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದೆ. ಅಲ್ಲದೇ ಪ್ರಕರಣದ ತನಿಖೆ ನಡೆಸಿ ಏಳು ದಿನದೊಳಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು