ಕನಕಪುರ ತಾಲೂಕನ್ನು ಬೆಂಗಳೂರು ಜಿಲ್ಲೆಗೆ ಸೇರಿಸುತ್ತೇನೆ: ಡಿಕೆ ಶಿವಕುಮಾರ್​​​

ವಿಜಯದಶಮಿ ದಿನ ಹೇಳುತ್ತಿದ್ದೇನೆ, ಕನಕಪುರ ಬೆಂಗಳೂರು ಜಿಲ್ಲೆಗೆ ಸೇರುತ್ತೆ. ಇಲ್ಲಿನ ಭೂಮಿ ಅಡಿ ಲೆಕ್ಕದಲ್ಲಿ ವ್ಯವಹಾರ ಆಗಲಿದೆ, ಭೂಮಿ ಮಾರಬೇಡಿ. ನಾನೇನು ಮಾಡಬೇಕು ಅದನ್ನು ಮಾಡೇ ಮಾಡುತ್ತೇನೆ. ನಂಬಿಕೆ ಇದೇ ತಾನೇ ಅಂತ‌ ಡಿಕೆ ಶಿವಕಯಮಾರ್​ ಸಾರ್ವಜನಿಕರಿಗೆ ಪ್ರಶ್ನೆ ಮಾಡಿದರು.

ಕನಕಪುರ ತಾಲೂಕನ್ನು ಬೆಂಗಳೂರು ಜಿಲ್ಲೆಗೆ ಸೇರಿಸುತ್ತೇನೆ: ಡಿಕೆ ಶಿವಕುಮಾರ್​​​
ಡಿಸಿಎಂ ಡಿಕೆ ಶಿವಕುಮಾರ್​
Edited By: ವಿವೇಕ ಬಿರಾದಾರ

Updated on: Oct 24, 2023 | 12:39 PM

ರಾಮನಗರ ಅ.24: ಕನಕಪುರ (Kanakpura) ತಾಲೂಕನ್ನು ಬೆಂಗಳೂರು ಜಿಲ್ಲೆಗೆ ಸೇರಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar)​ ಹೇಳಿದರು. ಕನಕಪುರ ತಾಲೂಕಿನ ಶಿವನಹಳ್ಳಿಯಲ್ಲಿ ವೀರಭದ್ರಸ್ವಾಮಿ ದೇವಸ್ಥಾನ ಶಿಲಾ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಯಾರೋ ಹೆಸರು ಮಾಡಿಕೊಳ್ಳುವುದಕ್ಕೆ ರಾಮನಗರ ಜಿಲ್ಲೆ ಮಾಡಿದ್ದಾರೆ. ನಮ್ಮನ್ನು ರಾಮನಗರ (Ramnagar) ಜಿಲ್ಲೆ ಅಂತಾ ಮೂಲೆಗೆ ತಳ್ಳಬೇಡಿ. ಕನಕಪುರದವರು ಬೆಂಗಳೂರು ಜಿಲ್ಲೆಯವರು ಎಂದರು.

ವಿಜಯದಶಮಿ ದಿನ ಹೇಳುತ್ತಿದ್ದೇನೆ, ಕನಕಪುರ ಬೆಂಗಳೂರು ಜಿಲ್ಲೆಗೆ ಸೇರುತ್ತೆ. ಇಲ್ಲಿನ ಭೂಮಿ ಅಡಿ ಲೆಕ್ಕದಲ್ಲಿ ವ್ಯವಹಾರ ಆಗಲಿದೆ, ಭೂಮಿ ಮಾರಬೇಡಿ. ಬರೀ ಡಿಕೆ ಶಿವಕುಮಾರ್, ಸಿಂಧ್ಯಾ, ಜಯಶಂಕರ್ ನಂಬಿಕೊಳ್ಳಬೇಡಿ. ನಾನೇನು ಮಾಡಬೇಕು ಅದನ್ನು ಮಾಡೇ ಮಾಡುತ್ತೇನೆ. ನಂಬಿಕೆ ಇದೇ ತಾನೇ ಅಂತ‌ ಡಿಕೆ ಶಿವಕಯಮಾರ್​ ಸಾರ್ವಜನಿಕರಿಗೆ ಪ್ರಶ್ನೆ ಮಾಡಿದರು.

ಇದನ್ನೂ ಓದಿ: ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗಲೇ ಮೆಡಿಕಲ್ ಕಾಲೇಜನ್ನು ರಾಮನಗರದಿಂದ ಕನಕಪುರಕ್ಕೆ ಸ್ಥಳಾಂತರಿಸುವ ನಿರ್ಧಾರ ಪ್ರಕಟಿಸಿದ್ದರು: ಡಿಕೆ ಶಿವಕುಮಾರ್

ಕನಕಪುರ ತಾಲೂಕಿನ ಬಗ್ಗೆ ಒಂದಿಷ್ಟು ಮಾಹಿತಿ

ರಾಮನಗರ ಜಿಲ್ಲೆಯ ಕನಕಪುರ ತಾಲೂಕು ಅರ್ಕಾವತಿ ನದಿ ದಂಡೆಯಲ್ಲಿದೆ. ದೇಶದಲ್ಲಿಯೇ ಅತೀ ಹೆಚ್ಚು ರೇಷ್ಮೆ ಉತ್ಪಾದಿಸುವ ಕನಕಪುರ  ”’ರೇಷ್ಮೆ ಕಣಿವೆ”’ ಎಂದೇ ಖ್ಯಾತಿಗಳಿಸಿದೆ. ಗ್ರಾನೈಟ್ ಉತ್ಪಾದನೆಯಲ್ಲಿ ಸಹ ಕರ್ನಾಟಕದಲ್ಲಿ ಬಹಳ ಮುಂಚೂಣಿಯಲ್ಲಿದೆ ಆದ್ದರಿಂದ ಕರ್ನಾಟಕದ ಗ್ರಾನೈಟ್ ರಾಜಧಾನಿ ಎಂದು ಪ್ರಸಿದ್ಧಿ ಪಡೆದಿದೆ. ಈ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸೇರಿತ್ತು. ಹಾಗೂ ಹಿಂದೆ ದೇಶದ ಅತಿ ದೊಡ್ಡ ಲೋಕಸಭಾಕ್ಷೇತ್ರವಾಗಿತ್ತು.

ಈ ತಾಲೂಕು ಬಹಳ ವಿಸ್ತಾರವಾಗಿ ಹರಡಿದೆ ಇದೆ. ಈ ತಾಲೂಕಿನಲ್ಲಿ ಅರಣ್ಯ ಪ್ರದೇಶ ಬಹಳ ವಿಶಾಲವಾಗಿದ್ದು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಸುಮಾರು ಅರ್ಧದಷ್ಟು ಭಾಗ ಕನಕಪುರದಲ್ಲಿದೆ. ಕೋಡಿಹಳ್ಳಿ ವನ್ಯ ಜೀವಿ ವಲಯ, ಹಾರೋಹಳ್ಳಿ ವನ್ಯಜೀವಿವಲಯ ಇದರ ವಿಭಾಗಗಳು. ಹಾಗೂ ಕಾವೇರಿ ವನ್ಯಜೀವಿ ಧಾಮದ ಎರಡು ಪ್ರಮುಖ ವಲಯಗಳನ್ನು ಒಳಗೊಂಡಿದೆ. ಅವುಗಳೆಂದರೆ ಸಂಗಮ ವನ್ಯ ಜೀವಿ ವಲಯ , ಮುಗ್ಗೂರು ವನ್ಯ ಜೀವಿವಲಯ, 23.08.2007ರಲ್ಲಿ ರಾಮನಗರ ಜಿಲ್ಲೆಗೆ ಸೇರಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us