ಕಿಚ್ಚ ಸುದೀಪ್ ಮಾತಿದು: ಕನ್ನಡ ಉಳಿಸಿ ಅನ್ನಬೇಡಿ, ಕನ್ನಡ ಬೆಳೆಸಿ ಎಂದು ಹೇಳಿ

ಯಾವನಿಗಿದೆ ಕನ್ನಡವನ್ನ ಕಿತ್ತುಕೊಳ್ಳುವ ತಾಕತ್ತು, ಬರೋಕೆ ಹೇಳಿ. ಇಲ್ಲಿ ಬೇರೆ ಭಾಷೆ ಹೆಚ್ಚಾಗಿರುವುದಕ್ಕೆ ಕಾರಣ ನೀವೇ ಯೋಚಿಸಿ. ನೀವೇ ಯೋಚಿಸಿದ್ರೆ ಅರ್ಥ ಸಿಗಲಿದೆ ಎಂದು ರಾಮನಗರ ತಾಲೂಕಿನ ಬಿಡದಿಯಲ್ಲಿ ನಟ ಸುದೀಪ್ ಹೇಳಿದ್ದಾರೆ.

ಕಿಚ್ಚ ಸುದೀಪ್ ಮಾತಿದು: ಕನ್ನಡ ಉಳಿಸಿ ಅನ್ನಬೇಡಿ, ಕನ್ನಡ ಬೆಳೆಸಿ ಎಂದು ಹೇಳಿ
ಕಿಚ್ಚ ಸುದೀಪ
Follow us
| Updated By: ganapathi bhat

Updated on:Apr 06, 2022 | 7:25 PM

ರಾಮನಗರ: ಕನ್ನಡವನ್ನು ಉಳಿಸಿ ಎಂದು ಹೇಳ್ತೀರಾ, ಅದು ತಪ್ಪು. ಕನ್ನಡವನ್ನ ಕಿತ್ತುಕೊಂಡವರು ಯಾರು, ಯಾರಿಗಿದೆ ಆ ಧೈರ್ಯ. ಕನ್ನಡಕ್ಕೆ ಇರುವ ಇತಿಹಾಸ ಬೇರೆ ಯಾವ ಭಾಷೆಗೂ ಇಲ್ಲ ಎಂದು ಸ್ಯಾಂಡಲ್​ವುಡ್ ನಟ ಕಿಚ್ಚ ಸುದೀಪ್ ಹೇಳಿದ್ದಾರೆ. ಯಾವನಿಗಿದೆ ಕನ್ನಡವನ್ನ ಕಿತ್ತುಕೊಳ್ಳುವ ತಾಕತ್ತು, ಬರೋಕೆ ಹೇಳಿ. ಇಲ್ಲಿ ಬೇರೆ ಭಾಷೆ ಹೆಚ್ಚಾಗಿರುವುದಕ್ಕೆ ಕಾರಣ ನೀವೇ ಯೋಚಿಸಿ. ನೀವೇ ಯೋಚಿಸಿದ್ರೆ ಅರ್ಥ ಸಿಗಲಿದೆ ಎಂದು ರಾಮನಗರ ತಾಲೂಕಿನ ಬಿಡದಿಯಲ್ಲಿ ನಟ ಸುದೀಪ್ ಹೇಳಿದ್ದಾರೆ.

ಕನ್ನಡದ ಮೇಲೆ ಅಭಿಮಾನ ಇಲ್ಲಾಂದ್ರೆ, ಬಿಟ್ಟಾಕಿ ಅವರನ್ನು. ಅಭಿಮಾನ ಇರೋರನ್ನ ಗುರುತಿಸಿ ಬೆಳೆಸಿ. ಕನ್ನಡ ಉಳಿಸಿ ಅನ್ನಬೇಡಿ, ಕನ್ನಡ ಬೆಳೆಸಿ ಎಂದು ಹೇಳಿ ಎಂದು ಸುದೀಪ್ ತಿಳಿಸಿದ್ದಾರೆ. ಬುರ್ಜ್‌ ಖಲೀಫಾದಲ್ಲಿ ಕನ್ನಡದ ಬಾವುಟ ಪ್ರದರ್ಶನ ಹಿನ್ನೆಲೆ, ಕಿಚ್ಚ ಸುದೀಪ್‌ಗೆ ಕನ್ನಡಪರ ಹೋರಾಟಗಾರರಿಂದ ಸನ್ಮಾನ ಮಾಡಲಾಗಿದ್ದು, ಆ ಸಂದರ್ಭ ಸುದೀಪ್ ಮಾತನಾಡಿದ್ದಾರೆ.

ನಮ್ಮಲ್ಲಿ ಕನ್ನಡದ ವಿಚಾರವಾಗಿ ಯಾವುದೇ ಗೊಂದಲವಿಲ್ಲ. ಆದರೆ, ಕೆಲ ಕನ್ನಡಪರ ಸಂಘಟನೆಗಳಲ್ಲೇ ಗೊಂದಲವಿದೆ ಎಂದು ಕಿಚ್ಚ ಸುದೀಪ್ ಹೇಳಿಕೆ ನೀಡಿದ್ದಾರೆ. ನೀವು ಮೊದಲು ನಿಮ್ಮ ಗೊಂದಲಗಳನ್ನು ಸರಿಪಡಿಸಿಕೊಳ್ಳಿ. ಕನ್ನಡದ ಶಾಲು ಹಾಕಿ ಮನೆಗೆ ಬಂದರೆ ಖುಷಿ ಪಡಬೇಕಾ, ಇಲ್ಲ ಭಯ ಪಡಬೇಕಾ ಎಂದು ಗೊತ್ತಾಗಲ್ಲ ನನಗೆ ಎಂದು ಸುದೀಪ್ ಹೇಳಿದ್ದಾರೆ.

ನನಗೆ ಬೈಯಲು ಬಂದಿದ್ದೀರಾ, ಹೊಗಳಲು ಬಂದಿದ್ದೀರಾ, ಇದು ಸಹ ನನಗೆ ಗೊತ್ತಾಗುತ್ತಿಲ್ಲ. ಕನ್ನಡ ಮಾತಾಡಿದ್ರೂ ಬೈತೀರಾ, ಮಾತಾಡದಿದ್ರೂ ಬೈತೀರಾ. ನಮಗೆ ಬೇರೆ ಭಾಷೆಗಳ ಮೇಲೂ ಅಭಿಮಾನ ಇರಬೇಕು. ಬೇರೆಯವರು ನಮ್ಮ ಭಾಷೆ ಮಾತಾಡುವಾಗ ತುಸು ತಪ್ಪಾದರೆ ಗಲಾಟೆ ಆಗುತ್ತೆ. ಆಗ ನನಗೆ ಗೊಂದಲ ಆಗುತ್ತೆ ಎಂದು ಸುದೀಪ್ ತಿಳಿಸಿದ್ದಾರೆ.

ಸಂಘಟನೆಯವರ ಹಿಂದೆ ನೂರಾರು, ಸಾವಿರಾರು ಜನ ಬರ್ತೀರಿ. ಕಲಾವಿದರಿಗೆ ಅಭಿಮಾನಿಗಳಷ್ಟೇ ಇದ್ದಾರೆ, ಎಲ್ಲಾ ಕಡೆ ಇರ್ತಾರೆ. ಆದರೆ, ನೀವು ನಮ್ಮನ್ನ ಹೊಡೆಯಲು ಬಂದ್ರೆ ನಾವೊಬ್ಬರೇ ಸಿಗುತ್ತೇವೆ. ಕೆಲವರು ಏನಾದರೂ ಸ್ಟೆಪ್ ತೆಗೆದುಕೊಂಡಾಗ ಸ್ವಲ್ಪ ಯೋಚಿಸಿ ಎಂದು ನಟ ಸುದೀಪ್ ಹೇಳಿದ್ದಾರೆ.

ಇದನ್ನೂ ಓದಿ: ದರ್ಶನ್​ ಮತ್ತು ಸುದೀಪ್​ ಸ್ನೇಹ ಮುರಿದು ಬಿದ್ದ ಆ ಕಹಿ ಘಳಿಗೆಗೆ ಈಗ ನಾಲ್ಕು ವರ್ಷ!

ಇದನ್ನೂ ಓದಿ: ‘ಸುದೀಪ್ ಅಂಕಲ್.. ದಯವಿಟ್ಟು ಮನಸ್ಸು ಮಾಡಿ ನನಗೆ ಬಿಗ್​ ಬಾಸ್ ಮನೆಗೆ ಹೋಗೋಕೆ ಅವಕಾಶ ಮಾಡಿಕೊಡಿ, ಪ್ಲೀಸ್​!’

Published On - 10:05 pm, Fri, 5 March 21

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!