AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಸಾರ್ಟ್​​ನಲ್ಲಿ ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ದುರ್ಮರಣ

ಇಂದು ಭಾನುವಾರವಾದ ಹಿನ್ನಲೆ 18 ಜನ ಸ್ನೇಹಿತರ ಜೊತೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ಗೆ ಬಂದಿದ್ದರು. ಈ ವೇಳೆ ರೆಸಾರ್ಟ್​​ನಲ್ಲಿ ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆ ಮ್ಯಾನೇಜರ್​​ನನ್ನು ವಶಕ್ಕೆ ಪಡೆಯಲಾಗಿದ್ದು, ಈ ಕುರಿತು ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರೆಸಾರ್ಟ್​​ನಲ್ಲಿ ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ದುರ್ಮರಣ
ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ದುರ್ಮರಣ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: ಕಿರಣ್ ಹನುಮಂತ್​ ಮಾದಾರ್|

Updated on: May 19, 2024 | 9:16 PM

Share

ರಾಮನಗರ, ಮೇ.19: ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್  ರೆಸಾರ್ಟ್(Jungle Trails Resort)​​ನಲ್ಲಿ ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಅತ್ತಿಬೆಲೆ ಮೂಲದ ರಂಜನಿ(35)‌ ಮೃತ ದುರ್ದೈವಿ. ಇಂದು ಭಾನುವಾರವಾದ ಹಿನ್ನಲೆ 18 ಜನ ಸ್ನೇಹಿತರ ಜೊತೆ ಜಂಗಲ್ ಟ್ರಯಲ್ಸ್ ರೆಸಾರ್ಟ್​ಗೆ ಬಂದಿದ್ದರು. ಬೆಳಿಗ್ಗೆ 11‌ಗಂಟೆಗೆ ತಂತಿಯ ಜಿಪ್ ನಲ್ಲಿ ಕೂತಿದ್ದ‌ ರಂಜನಿ, ಈ ವೇಳೆ ಜಿಪ್​ ಲೈನ್​ ತುಂಡಾಗಿ ನೆಲಕ್ಕೆ ಬಿದ್ದು ಕೊನೆಯುಸಿರೆಳೆದಿದ್ದಾರೆ.

ಜಿಪ್ ಲೈನ್ ಬಗ್ಗೆ ಹಲವು ಬಾರಿ ದೂರು ನೀಡಿದ್ರೂ ಡೋಂಟ್​​ಕೇರ್​

ಇನ್ನು ಮಹಿಳೆಯ ಮೃತದೇಹವನ್ನ ಮರಣೋತ್ತರ ಪರೀಕ್ಷೆ ನಡೆಸಿ ಹಸ್ತಾಂತರ ಮಾಡಲಾಗುತ್ತದೆ. ಘಟನೆ ಸಂಬಂಧ ರೆಸಾರ್ಟ್​ ಮ್ಯಾನೇಜರ್ ಪುಟ್ಟಮಾದು ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಜಿಪ್ ಲೈನ್ ಬಗ್ಗೆ ಹಲವು ಬಾರಿ ದೂರು ನೀಡಿದ್ರೂ ರೆಸಾರ್ಟ್ ಮಾಲಿಕ ಮಾತ್ರ ನಿರ್ಲಕ್ಷ್ಯ ತೋರಿದ್ದು, ಈ ಹಿನ್ನೆಲೆ ಮ್ಯಾನೇಜರ್​​ನನ್ನು ವಶಕ್ಕೆ ಪಡೆಯಲಾಗಿದ್ದು, ಈ ಕುರಿತು ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ಕಾಸರಗೋಡು: ಆ್ಯಂಬುಲೆನ್ಸ್ ಡಿಕ್ಕಿ: ಕಾರಿನಲ್ಲಿ ತೆರಳುತ್ತಿದ್ದ ಮೂವರ ದುರ್ಮರಣ

ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರುಪಾಲು

ಉಡುಪಿ: ಜಿಲ್ಲೆಯ ಕಾರ್ಕಳ ತಾಲೂಕಿನ ಶಿರ್ಲಾಲುವಿನ ಉಬ್ಬರಬೈಲು ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರುಪಾಲಾದ ಘಟನೆ ನಡೆದಿದೆ. ಮುಡ್ಡಾಯಿಗುಡ್ಡೆ ನಿವಾಸಿಗಳಾದ ಹರೀಶ್(48) ಮತ್ತು ಹೃತೇಶ್(18) ಸಾವನ್ನಪ್ಪಿದ್ದಾರೆ. ಮೀನಿಗೆ ಬಲೆ‌ ಹಾಕುವಾಗ ಆಯತಪ್ಪಿ ಕೆರೆಗೆ ಬಿದ್ದು ಈ ದುರ್ಘಟನೆ ನಡೆದಿದೆ. ಈ ಕುರಿತು ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!