ರೆಸಾರ್ಟ್​​ನಲ್ಲಿ ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ದುರ್ಮರಣ

ಇಂದು ಭಾನುವಾರವಾದ ಹಿನ್ನಲೆ 18 ಜನ ಸ್ನೇಹಿತರ ಜೊತೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ಗೆ ಬಂದಿದ್ದರು. ಈ ವೇಳೆ ರೆಸಾರ್ಟ್​​ನಲ್ಲಿ ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆ ಮ್ಯಾನೇಜರ್​​ನನ್ನು ವಶಕ್ಕೆ ಪಡೆಯಲಾಗಿದ್ದು, ಈ ಕುರಿತು ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರೆಸಾರ್ಟ್​​ನಲ್ಲಿ ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ದುರ್ಮರಣ
ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ದುರ್ಮರಣ
Edited By: ಕಿರಣ್ ಹನುಮಂತ್​ ಮಾದಾರ್

Updated on: May 19, 2024 | 9:16 PM

ರಾಮನಗರ, ಮೇ.19: ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್  ರೆಸಾರ್ಟ್(Jungle Trails Resort)​​ನಲ್ಲಿ ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಅತ್ತಿಬೆಲೆ ಮೂಲದ ರಂಜನಿ(35)‌ ಮೃತ ದುರ್ದೈವಿ. ಇಂದು ಭಾನುವಾರವಾದ ಹಿನ್ನಲೆ 18 ಜನ ಸ್ನೇಹಿತರ ಜೊತೆ ಜಂಗಲ್ ಟ್ರಯಲ್ಸ್ ರೆಸಾರ್ಟ್​ಗೆ ಬಂದಿದ್ದರು. ಬೆಳಿಗ್ಗೆ 11‌ಗಂಟೆಗೆ ತಂತಿಯ ಜಿಪ್ ನಲ್ಲಿ ಕೂತಿದ್ದ‌ ರಂಜನಿ, ಈ ವೇಳೆ ಜಿಪ್​ ಲೈನ್​ ತುಂಡಾಗಿ ನೆಲಕ್ಕೆ ಬಿದ್ದು ಕೊನೆಯುಸಿರೆಳೆದಿದ್ದಾರೆ.

ಜಿಪ್ ಲೈನ್ ಬಗ್ಗೆ ಹಲವು ಬಾರಿ ದೂರು ನೀಡಿದ್ರೂ ಡೋಂಟ್​​ಕೇರ್​

ಇನ್ನು ಮಹಿಳೆಯ ಮೃತದೇಹವನ್ನ ಮರಣೋತ್ತರ ಪರೀಕ್ಷೆ ನಡೆಸಿ ಹಸ್ತಾಂತರ ಮಾಡಲಾಗುತ್ತದೆ. ಘಟನೆ ಸಂಬಂಧ ರೆಸಾರ್ಟ್​ ಮ್ಯಾನೇಜರ್ ಪುಟ್ಟಮಾದು ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಜಿಪ್ ಲೈನ್ ಬಗ್ಗೆ ಹಲವು ಬಾರಿ ದೂರು ನೀಡಿದ್ರೂ ರೆಸಾರ್ಟ್ ಮಾಲಿಕ ಮಾತ್ರ ನಿರ್ಲಕ್ಷ್ಯ ತೋರಿದ್ದು, ಈ ಹಿನ್ನೆಲೆ ಮ್ಯಾನೇಜರ್​​ನನ್ನು ವಶಕ್ಕೆ ಪಡೆಯಲಾಗಿದ್ದು, ಈ ಕುರಿತು ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ಕಾಸರಗೋಡು: ಆ್ಯಂಬುಲೆನ್ಸ್ ಡಿಕ್ಕಿ: ಕಾರಿನಲ್ಲಿ ತೆರಳುತ್ತಿದ್ದ ಮೂವರ ದುರ್ಮರಣ

ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರುಪಾಲು

ಉಡುಪಿ: ಜಿಲ್ಲೆಯ ಕಾರ್ಕಳ ತಾಲೂಕಿನ ಶಿರ್ಲಾಲುವಿನ ಉಬ್ಬರಬೈಲು ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರುಪಾಲಾದ ಘಟನೆ ನಡೆದಿದೆ. ಮುಡ್ಡಾಯಿಗುಡ್ಡೆ ನಿವಾಸಿಗಳಾದ ಹರೀಶ್(48) ಮತ್ತು ಹೃತೇಶ್(18) ಸಾವನ್ನಪ್ಪಿದ್ದಾರೆ. ಮೀನಿಗೆ ಬಲೆ‌ ಹಾಕುವಾಗ ಆಯತಪ್ಪಿ ಕೆರೆಗೆ ಬಿದ್ದು ಈ ದುರ್ಘಟನೆ ನಡೆದಿದೆ. ಈ ಕುರಿತು ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us