ರಾಮನಗರದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 8 ಮಕ್ಕಳು ಸೇರಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ. ಈಗಾಗಲೇ ಅಧಿಕಾರಿಗಳು ಊಟವನ್ನು ಸ್ಯಾಂಪಲ್ ತರಿಸಿಕೊಂಡಿದ್ದಾರೆ. ಕಳೆದ ಒಂದು ವಾರದಲ್ಲಿ ಇಂತಹದ್ದೇ ಮೂರನೇ ಘಟನೆ ಇದಾಗಿದೆ.

ರಾಮನಗರದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ
ರಾಮನಗರದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ ಅಸ್ವಸ್ಥ
Edited By:

Updated on: May 10, 2024 | 10:04 PM

ರಾಮನಗರ, ಮೇ.10: ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ರಾಮನಗರ (Ramanagara)ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ನಡೆದಿದೆ. ಸಂತೋಷ್ ಎಂಬುವವರ ಮನೆಯಲ್ಲಿ ಇಂದು(ಮೇ.10) ಗೃಹ ಪ್ರವೇಶವನ್ನು ಹಮ್ಮಿಕೊಂಡಿದ್ದರು. ಅದರಂತೆ ಮಧ್ಯಾಹ್ನ 1.30 ರ ಸಮಯದಲ್ಲಿ ಬಂದಂತಹ ಅತಿಥಿಗಳು ಊಟ‌ ಮಾಡಿದ್ದರು. ಬಳಿಕ ಹಲವರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದ್ದು, ಕೂಡಲೇ 28 ಕ್ಕೂ ಹೆಚ್ಚು ಜನರನ್ನು ರಾಮನಗರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪ್ರಾಣಾಪಾಯದ ತೊಂದರೆ‌ ಇಲ್ಲ ಎಂದು ವೈದ್ಯರ ಸ್ಪಷ್ಟನೆ

ಇನ್ನು ಇದರಲ್ಲಿ 8 ಮಕ್ಕಳು ಇದ್ದು, ಎಲ್ಲರಿಗೂ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಮಾತನಾಡಿದ ಜಿಲ್ಲಾಸ್ಪತ್ರೆ ವೈದ್ಯರು ಯಾವುದೇ ಪ್ರಾಣಾಪಾಯದ ತೊಂದರೆ‌ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಬಿಸಿಲಿನ ಕಾರಣ ಫುಡ್ ಪಾಯಿಸನ್ ಆಗಿರುವ ಕುರಿತು ಅನುಮಾನ ಮೂಡಿದೆ. ಈಗಾಗಲೇ ಅಧಿಕಾರಿಗಳು ಊಟವನ್ನು ಸ್ಯಾಂಪಲ್ ತರಿಸಿಕೊಂಡಿದ್ದಾರೆ. ಕಳೆದ ಒಂದು ವಾರದಲ್ಲಿ ಇಂತಹದ್ದೇ ಮೂರನೇ ಘಟನೆ ಇದಾಗಿದೆ.

ಇದನ್ನೂ ಓದಿ:ಬೀಗರೂಟ ಮಾಡಿ 200ಕ್ಕೂ ಹೆಚ್ಚು ಜನ ಅಸ್ವಸ್ಥ, ವೆಜ್ ಸೇವಿಸಿ ಸಚಿವ ಬಚಾವ್

ನಾಲ್ಕು ದಿನದ ಹಿಂದೆ ಜಿಲ್ಲೆಯಲ್ಲಿ  ಐಸ್​ಕ್ರೀಂ ಸೇವಿಸಿ 80 ಜನರು ಅಸ್ವಸ್ಥ

ಇನ್ನು ಇದೇ ಮೇ.06 ರಂದು ರಾಮನಗರ ಜಿಲ್ಲೆಯ ಚನ್ನಪಟ್ಟಣದ ಟಿಪ್ಪುನಗರದಲ್ಲಿ ನಡೆದಿದ್ದ ಮದುವೆ ಸಮಾರಂಭದಲ್ಲಿ ಐಸ್​ಕ್ರೀಂ ಸೇವಿಸಿ 80 ಜನರು ಅಸ್ವಸ್ಥಗೊಂಡಿದ್ದರು. ಮದುವೆ ಸಮಾರಂಭದಲ್ಲಿ ಊಟದ ಬಳಿಕ ಐಸ್​ಕ್ರೀಂ ತಿಂದು ತಮ್ಮ ಊರುಗಳಿಗೆ ತೆರಳುತ್ತಿದ್ದರು. ಈ ವೇಳೆ ದಾರಿ ಮಧ್ಯೆ ವಾಂತಿ, ಭೇದಿ ಶುರುವಾಗಿದ್ದು, ಕೂಡಲೇ ಅವರನ್ನು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿತ್ತು. ಬಳಿಕ ಸಮಾರಂಭದಲ್ಲಿ ಅವಧಿ ಮೀರಿದ ಐಸ್​ಕ್ರೀಂ ನೀಡಿರುವ ಆರೋಪ ಕೇಳಿಬಂದಿತ್ತು. ಇದೀಗ ಮತ್ತೊಂದು ಇಂತಹ ಘಟನೆ ಬೆಳಕಿಗೆ ಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us