AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಳುಗ್ತಿದ್ದ ಬಸ್ಸಿನಿಂದ ಪ್ರಯಾಣಿಕರ ಪ್ರಾಣ ಕಾಪಾಡಿ ಮಾನವೀಯತೆ ಮೆರೆದ ಚಾಲನಾ ಸಿಬ್ಬಂದಿ, ಕಾರ್ಯಕ್ಕೆ ಶ್ಲಾಘನೆ

ಚಾಲಕ ಕಂ ನಿರ್ವಾಹಕ ಲಿಂಗರಾಜು ಮತ್ತು ಚಾಲಕ ಕಂ ನಿರ್ವಾಹಕ ವೆಂಕಟೇಶ ಓರ್ವ ವೃದ್ದ ಮಹಿಳೆ ಸೇರಿ ಕೆಲ ಪ್ರಯಾಣಿಕರನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಇವರ ಮಾನವೀಯ ನೆಲೆಯಲ್ಲಿನ ಸೇವಾ ಮನೋಭಾವವು ನಿಜಕ್ಕೂ ಅನನ್ಯ, ಅನುಕರಣೀಯವೆಂದು ಬಣ್ಣಿಸಿ, ಚಾಲನಾ ಸಿಬ್ಬಂದಿಗಳ ಕಾರ್ಯವನ್ನು ಪ್ರಶಂಸಿಸಿ , ಅಭಿನಂದನಾ ಪತ್ರವನ್ನು ನೀಡಿ ಶ್ಲಾಘಿಸಲಾಗಿದೆ.

ಮುಳುಗ್ತಿದ್ದ ಬಸ್ಸಿನಿಂದ ಪ್ರಯಾಣಿಕರ ಪ್ರಾಣ ಕಾಪಾಡಿ ಮಾನವೀಯತೆ ಮೆರೆದ ಚಾಲನಾ ಸಿಬ್ಬಂದಿ, ಕಾರ್ಯಕ್ಕೆ ಶ್ಲಾಘನೆ
ಮುಳುಗ್ತಿದ್ದ ಬಸ್ಸಿನಿಂದ ಪ್ರಯಾಣಿಕರ ಪ್ರಾಣ ಕಾಪಾಡಿ ಮಾನವೀಯತೆ ಮೆರೆದ ಚಾಲನಾ ಸಿಬ್ಬಂದಿ, ಕಾರ್ಯಕ್ಕೆ ಶ್ಲಾಘನೆ
TV9 Web
| Updated By: ಆಯೇಷಾ ಬಾನು|

Updated on:Sep 05, 2022 | 4:23 PM

Share

ರಾಮನಗರ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಇದರ ಪರಿಣಾಮ ಊರಿಗೆ ಊರೇ ನೀರಿನಲ್ಲಿ ಮುಳುಗುತ್ತಿದ್ದು, ಹೆದ್ದಾರಿಗಳೆಲ್ಲಾ ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತವಾಗಿದೆ. ಈ ರಕ್ಕಸ ಮಳೆಯಲ್ಲಿ ಸಾರಿಗೆ ಬಸ್ಸುಗಳನ್ನು ಚಲಾಯಿಸುವುದು ಚಾಲಕರಿಗೆ ದೊಡ್ಡ ಸವಾಲು. ಆದ್ರೆ ಇಲ್ಲಿ ಇಂತಹ ರಣ ಮಳೆಯಲ್ಲೂ ನಿಗಮದ ಚಾಲನಾ ಸಿಬ್ಬಂದಿ ಮುಳುಗಿದ ಬಸ್​ನಿಂದ ಪ್ರಯಾಣಿಕರ ಪ್ರಾಣಾ ಕಾಪಾಡಿ ಮಾನವೀಯತೆ ಮೆರೆದಿದ್ದಾರೆ.

ಆಗಸ್ಟ್ 29ರಂದು ರಾಮನಗರ ಮೈಸೂರು – ಬೆಂಗಳೂರು ಹೆದ್ದಾರಿ ಅಕ್ಷರಶಃ ನೀರಿನಿಂದ ಮುಳುಗಿತ್ತು. ಈ ವೇಳೆ ವಾಹನ ಸಂಖ್ಯೆ ಕೆಎ42-ಎಫ್0502 ಅನುಸೂಚಿ ಸಂಖ್ಯೆ-117 (ಉರಗಹಳ್ಳಿ-ರಾಮನಗರ) ಮಾರ್ಗದಲ್ಲಿ ಚಾಲನೆಯಲ್ಲಿದ್ದಾಗ, ರಾಮನಗರ ರೈಲ್ವೇ ಬ್ರಿಡ್ಜ್ ಅಂಡರ್ ಪಾಸ್ ನಲ್ಲಿ ಬರುತ್ತಿದ್ದ ಬಸ್ಸು ಮಳೆ ನೀರಿಗೆ ಸಿಲುಕಿ ಮುಳುಗಿತ್ತು. ಸ್ವಲ್ಪ ಮುಂದೆ ಇದೇ ಮಾರ್ಗದಲ್ಲಿ ಮತ್ತೊಂದು ಖಾಸಗಿ ವಾಹನ ಕೆಟ್ಟು ನಿಂತಿದ್ದರಿಂದ ಬಸ್ಸನ್ನು ಮುಂದೆ ಚಲಾಯಿಸಲು ಸಾಧ್ಯವಾಗಲೇ ಇಲ್ಲ. ಈ ಸಂದರ್ಭದಲ್ಲಿ, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರನ್ನು ಸಾರ್ವಜನಿಕರ ಸಹಾಯದೊಂದಿಗೆ ಸುರಕ್ಷಿತವಾಗಿ ರಕ್ಷಿಸಿ, ನೀರಿನ ಮಟ್ಟ ಜಾಸ್ತಿಯಾಗುತ್ತಿದ್ದರೂ, ತಮಗೆ ಈಜಲು ಬಾರದಿದ್ದರೂ ಸಹ ಎದೆಗುಂದದೆ ಧೈರ್ಯದಿಂದ ತಮ್ಮ ಪ್ರಾಣವನ್ನೂ ಲೆಕ್ಕಿಸದೆ, ಆ ಸಮಯದಲ್ಲಿ ಏಣಿಯನ್ನು ಹುಡುಕಿ ತಂದು ನಿಗಮದ ಚಾಲನಾ ಸಿಬ್ಬಂದಿ ಮಾನವೀಯತೆ ಮೆರೆದಿದ್ದಾರೆ.

ಚಾಲಕ ಕಂ ನಿರ್ವಾಹಕ ಲಿಂಗರಾಜು ಮತ್ತು ಚಾಲಕ ಕಂ ನಿರ್ವಾಹಕ ವೆಂಕಟೇಶ ಓರ್ವ ವೃದ್ದ ಮಹಿಳೆ ಸೇರಿ ಕೆಲ ಪ್ರಯಾಣಿಕರನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಇವರ ಮಾನವೀಯ ನೆಲೆಯಲ್ಲಿನ ಸೇವಾ ಮನೋಭಾವವು ನಿಜಕ್ಕೂ ಅನನ್ಯ, ಅನುಕರಣೀಯವೆಂದು ಬಣ್ಣಿಸಿ, ಚಾಲನಾ ಸಿಬ್ಬಂದಿಗಳ ಕಾರ್ಯವನ್ನು ಪ್ರಶಂಸಿಸಿ , ಅಭಿನಂದನಾ ಪತ್ರವನ್ನು ನೀಡಿ ಶ್ಲಾಘಿಸಲಾಗಿದೆ. ಲಿಂಗರಾಜು ಮತ್ತು ವೆಂಕಟೇಶ ಕೇಂದ್ರ ಕಚೇರಿಯಲ್ಲಿ ವ್ಯವಸ್ಥಾಪಕ ನಿರ್ದೇಶಕರನ್ನು ಭೇಟಿ ಮಾಡಿ ನಡೆದ ಘಟನೆಯನ್ನು ವಿವರಿಸಿದ್ದಾರೆ.

ಈಜು ಬರದ ನಾವಿಬ್ಬರೂ, ಬಸ್ಸಿನಲ್ಲಿ ಸಿಲುಕಿರುವ ಪ್ರಯಾಣಿಕರನ್ನು ಉಳಿಸಲು ಕಷ್ಟಪಟ್ಟಿದ್ದೇವೆ. ಅದೇ ರೀತಿ ಪ್ರಯಾಣಿಕರು ಕೂಡ ನಮ್ಮನ್ನು ಉಳಿಸಿದರು. ಹಾಗೂ ಈ ಸಂದರ್ಭದಲ್ಲಿ ತಮ್ಮ ಮೊಬೈಲ್ ಫೋನ್‌ಗಳು ಕೂಡ ನೀರು ತುಂಬಿ ಹಾಳಾಯಿತು. ಯಾವ ಅಧಿಕಾರಿಗಳನ್ನು ಸಂರ್ಪಕಿಸಲು ಸಾಧ್ಯವಾಗದ ಪರಿಸ್ಥಿತಿ ಇತ್ತು, ನಮಗೆ ಆ ಸಮಯದಲ್ಲಿ ನಮ್ಮ ಪ್ರಯಾಣಿಕರನ್ನು ಪ್ರಾಣಾಪಾಯದಿಂದ ಪಾರು ಮಾಡಬೇಕೆಂಬ ಉದ್ದೇಶ ಮಾತ್ರ ಇತ್ತು ಎಂದು ವ್ಯವಸ್ಥಾಪಕ ನಿರ್ದೇಶಕರಾದ ವಿ.ಅನ್ಬುಕುಮಾರ್ ಬಳಿ ಘಟನೆಯ ವಿವರ ನೀಡಿದ್ದಾರೆ. ಆಗ ಅವರು ಚಾಲಕರನ್ನು ಮನತುಂಬಿ ಹಾರೈಸಿ, ತಮ್ಮ ಈ ಉತ್ಕೃಷ್ಟ ಕಾರ್ಯತತ್ಪರತೆ ಇತರರಿಗೆ ಮಾದರಿ ಹಾಗೂ ಸ್ಫೂರ್ತಿದಾಯಕವಾಗಿದೆ. ದೇವರು ತಮಗೆ ಮತ್ತು ತಮ್ಮ ಪರಿವಾರದವರಿಗೆ ಒಳ್ಳೆಯದು ಮಾಡಲಿ ಎಂದು ಹಾರೈಸಿದರು. ಈ ಸಮಯದಲ್ಲಿ ಸಿಬ್ಬಂದಿಗಳ ಮೊಬೈಲ್ ಹಾಳಾಗಿದ್ದಕ್ಕೆ , ಇಬ್ಬರಿಗೂ ಒಂದೊಂದು ಸ್ಮಾರ್ಟ್ ಮೊಬೈಲ್ ಫೋನ್ ಅನ್ನು ನಿಗಮದ ವತಿಯಿಂದ ಉಡುಗೊರೆಯಾಗಿ ನೀಡಿದರು.

Published On - 4:23 pm, Mon, 5 September 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ