ರಾಮನಗರದಲ್ಲಿ ಆರಂಭವಾದ ಕರ್ನಾಟಕದ ಪ್ರಥಮ ತ್ಯಾಜ್ಯ ಇಂಧನ ಘಟಕ

ರಾಮನಗರದಲ್ಲಿ ನಿರ್ಮಾಣ ಮಾಡಲಾಗುತ್ತಿರುವ ತ್ಯಾಜ್ಯ ಇಂಧನ ಘಟಕಗಳ ಪೈಕಿ ಒಂದನ್ನು ಇಂದು ಪ್ರಾಯೋಗಿಕವಾಗಿ ಆರಂಭಿಸಲಾಗಿದೆ. ತ್ಯಾಜ್ಯದಿಂದ 11.5 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಿಕೊಳ್ಳಲು ರಾಜ್ಯ ಇಂಧನ ಇಲಾಖೆ ಪ್ಲಾನ್ ಮಾಡಿಕೊಂಡಿದೆ.

ರಾಮನಗರದಲ್ಲಿ ಆರಂಭವಾದ ಕರ್ನಾಟಕದ ಪ್ರಥಮ ತ್ಯಾಜ್ಯ ಇಂಧನ ಘಟಕ
ರಾಮನಗರದಲ್ಲಿ ಆರಂಭವಾದ ಕರ್ನಾಟಕದ ಪ್ರಥಮ ತಾಜ್ಯ ಇಂಧನ ಘಟಕ (ಸಾಂದರ್ಭಿಕ ಚಿತ್ರ)
Edited By: Rakesh Nayak Manchi

Updated on: Aug 03, 2023 | 7:05 PM

ರಾಮನಗರ, ಆಗಸ್ಟ್ 3: ಜಿಲ್ಲೆಯ ಬಿಡದಿಯ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಿರ್ಮಾಣವಾದ ರಾಜ್ಯದ ಪ್ರಥಮ ತ್ಯಾಜ್ಯ ಇಂಧನ ಘಟಕ ಇಂದಿನಿಂದ ಕಾರ್ಯಾರಂಭವಾಗಿದೆ. ತ್ಯಾಜ್ಯದಿಂದ 11.5 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಿಕೊಳ್ಳಲು ರಾಜ್ಯ ಇಂಧನ ಇಲಾಖೆ ಈ ಘಟನವನ್ನು ಆರಂಭಿಸಿದೆ.

ರಾಜ್ಯ ಸರ್ಕಾರವು ಪ್ರತಿ ಯುನಿಟ್​ಗೆ 8 ರೂಪಾಯಿ ಖರ್ಚು ಮಾಡಲಿದೆ. ತಾಜ್ಯ ವಿದ್ಯುತ್ ಸ್ಥಾವರವು 15 ಎಕರೆ‌ ವಿಸ್ತೀರ್ಣದಲ್ಲಿ ನಿರ್ಮಾಣಗೊಳ್ಳುತ್ತಿದ್ದು, ಪ್ರಾಯೋಗಿಕವಾಗಿ ಒಂದು ಸ್ಥಾವರಕ್ಕೆ ಇಂದು ಚಾಲನೆ ನೀಡಲಾಗಿದೆ. ವಿದ್ಯುತ್ ಉತ್ಪಾದನಾ‌ ಸಾಮರ್ಥ್ಯ ತಿಳಿದ ನಂತರ ಮತ್ತಷ್ಟು ಸ್ಥಾವರ ನಿರ್ಮಾಣಕ್ಕೆ ಪ್ಲ್ಯಾನ್ ಮಾಡಲಾಗುತ್ತದೆ.

ಇದನ್ನೂ ಓದಿ: ಜಮೀನು ವಿಚಾರಕ್ಕಾಗಿ‌ ಎರಡು ಸಮುದಾಯಗಳ ನಡುವೆ ಮಾರಾಮಾರಿ: ದೂರು ದಾಖಲು

ಯೋಜನೆ ಅನುಷ್ಟಾನಕ್ಕಾಗಿ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಮೊರೆ ಹೋಗಲಿದೆ. ಸಬ್ಸಿಡಿ ಸಿಕ್ಕರೆ ಇನ್ನಷ್ಟು ಸ್ಥಾವರಗಳ ನಿರ್ಮಾಣಕ್ಕೆ ಚಿಂತನೆ ಮಾಡಲಾಗುತ್ತಿದೆ. ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿಎಲ್) ಮತ್ತು ಬಿಬಿಎಂಪಿ ಜಂಟಿಯಾಗಿ ಸ್ಥಾವರ ನಿರ್ಮಾಣ ಮಾಡಲಿದೆ.

ನಾಡಕಚೇರಿಯಿಂದ ಧ್ವಜ ಸಂಹಿತೆ ಉಲ್ಲಂಘನೆ

ರಾಮನಗರ ಪಟ್ಟಣದ ತಹಶಿಲ್ದಾರ್​ ಕಚೇರಿಯು ಧ್ವಜ ಸಂಹಿತೆ ಉಲ್ಲಂಘನೆ ಮಾಡಿದೆ. ಹಳೇಯ ಹಾಗೂ ಕೊಳೆ ಹತ್ತಿದ ಧ್ವಜ ಹಾರಾಟ ಆಗಬಾರದು ಎಂದು ನೀತಿ ಸಂಹಿತಿ ಹೇಳುತ್ತದೆ. ಆದರೆ, ರಾಮನಗರದ‌ ಮುಖ್ಯ ಹೆದ್ದಾರಿಯಲ್ಲಿರುವ ನಾಡಕಚೇರಿಯಲ್ಲಿಯಲ್ಲಿ ಬಣ್ಣ ಹೋಗಿ ಹಳೇಯದಾದರೂ ಧ್ವಜ ಹಾರಿಸಲಾಗಿದೆ. ಆ ಮೂಲಕ ಸರ್ಕಾರಿ ಅಧಿಕಾರಿಗಳೇ ರಾಷ್ಟ್ರ ಧ್ವಜಕ್ಕೆ ಅಗೌರವ ತೋರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:04 pm, Thu, 3 August 23

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us