AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಕೆದಾಟು ಯೋಜನೆ ಮಾಡುತ್ತೀರೋ, ಇಲ್ಲವೋ? ಕೋಡಿಹಳ್ಳಿ ಚಂದ್ರಶೇಖರ್ ವಾರ್ನಿಂಗ್

Kodihalli Chandrashekar: ನನ್ನ ತಾಯಿಯನ್ನೇ ಮೊದಲು ಅಮ್ಮ ಎಂದು ಕರೆಯುವುದು. ಆಮೇಲೆ ಗೊತ್ತಿರುವವರನ್ನ ಅವ್ವ, ಚಿಕ್ಕವ್ವ, ಅಜ್ಜಿ ಎನ್ನುತ್ತೇವೆ. ಇದು ಸಾಮಾನ್ಯಜ್ಞಾನ, ಇದನ್ನು ಸಿ.ಟಿ.ರವಿ ತಿಳಿದುಕೊಳ್ಳಬೇಕು ಎಂದು ರಾಮನಗರದಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಪಾಠ ಹೇಳಿದರು.

ಮೇಕೆದಾಟು ಯೋಜನೆ ಮಾಡುತ್ತೀರೋ, ಇಲ್ಲವೋ? ಕೋಡಿಹಳ್ಳಿ ಚಂದ್ರಶೇಖರ್ ವಾರ್ನಿಂಗ್
ಕೋಡಿಹಳ್ಳಿ ಚಂದ್ರಶೇಖರ್
TV9 Web
| Edited By: |

Updated on: Aug 14, 2021 | 5:08 PM

Share

ರಾಮನಗರ: ರಾಜ್ಯದ ರೈತರು ಮೇಕೆದಾಟು ವಿಚಾರದಲ್ಲಿ ಪದೇ ಪದೇ ಚಳವಳಿ ಮಾಡುವ ಅವಶ್ಯಕತೆ ಇಲ್ಲ. ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಚಳವಳಿ ಮಾಡಿದ್ದಾರೆ ಎಂದು ನಾವು ಪ್ರತಿ ಚಳುವಳಿ ಮಾಡುವ ಅವಶ್ಯಕತೆ ಇಲ್ಲ. ನಾವು ರಾಜ್ಯ ಸರ್ಕಾರಕ್ಕೆ ವಾರ್ನಿಂಗ್ ಮಾಡುತ್ತಿದ್ದೇವೆ. ನೀವು ಮೇಕೆದಾಟು ಯೋಜನೆ ಮಾಡುತ್ತೀರೋ, ಇಲ್ಲವೋ ಸ್ಪಷ್ಟಪಡಿಸಿ. ನೀವು ಮಾಡುವುದಿಲ್ಲ ಎನ್ನುವುದಾದರೆ ನಾವೇ ಅಡಿಗಲ್ಲು ಹಾಕುತ್ತೇವೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಮೇಕೆದಾಟು ವಿಚಾರವಾಗಿ ಸಿ.ಟಿ.ರವಿ ಹೇಳಿಕೆ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಅವರು, ಇದೊಂದು ಅತ್ಯಂತ ಮೂರ್ಖತನದ ಪ್ರಸ್ತಾಪವಾಗಿದೆ. ನಾನು ಮೊದಲು ತನ್ನ ತಾಯಿಗೆ ಮಗ. ನಂತರದಲ್ಲಿ ನಾನು ಎಲ್ಲರನ್ನು ತಾಯಿ, ಅವ್ವ ಎನ್ನಬಹುದು. ಮೊದಲು ನನ್ನ ತಾಯಿಯನ್ನೇ ಮೊದಲು ಅಮ್ಮ ಎಂದು ಕರೆಯುವುದು. ಆಮೇಲೆ ಗೊತ್ತಿರುವವರನ್ನು ಅವ್ವ, ಚಿಕ್ಕವ್ವ, ಅಜ್ಜಿ ಎನ್ನುತ್ತೇವೆ. ಇದು ಸಾಮಾನ್ಯಜ್ಞಾನ, ಇದನ್ನು ಸಿ.ಟಿ.ರವಿ ತಿಳಿದುಕೊಳ್ಳಬೇಕು ಎಂದು ರಾಮನಗರದಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಪಾಠ ಹೇಳಿದರು.

ನಮ್ಮ ಸರ್ಕಾರ ದೃಢ ನಿರ್ಧಾರ ಅಥವಾ ಇಚ್ಛಾಶಕ್ತಿ ಇದೀಯೋ ಅಥವಾ ಇಲ್ಲವೋ ಎಂದು ತಿಳಿಸಬೇಕು. ಸರ್ಕಾರ ಕಾಲ ಮಿತಿ ಒಳಗೆ ಅಡಿಗಲ್ಲು ಹಾಕಬೇಕು. ಇದನ್ನೇ ನಾವು ಒತ್ತಾಯ ಮಾಡಿಕೊಂಡು ಬರುತ್ತಿದ್ದೇವೆ. ಸರ್ಕಾರ ರಾಜಕೀಯ ಲಾಭಕ್ಕಾಗಿ ಮಹಾದಾಯಿಯಂತೆ ಮೇಕೆದಾಟು ಯೋಜನೆಯನ್ನು ಕೂಡಾ ವಿವಾದವಾಗಿ ಮುಂದುವರೆಸಬಾರದು ಎಂದು ಅವರು ಆಗ್ರಹಿಸಿದರು.

ಇದನ್ನೂ ಓದಿ: 

ನಾಳೆ ರಾಜ್ಯ ಸರ್ಕಾರದಿಂದ ಸಂಗೊಳ್ಳಿ ರಾಯಣ್ಣ ಜನ್ಮ ದಿನಾಚರಣೆಯ ಅಧಿಕೃತ ಆಚರಣೆ; ಸಿಎಂಬ ಬೊಮ್ಮಾಯಿ ಘೋಷಣೆ

ಹಿಂದಿನ ಅನುಭವಗಳ ಮೇಲೆ ಕೊವಿಡ್ ನಿರ್ವಹಣೆಗೆ ಗಮನವಹಿಸಲಾಗಿದೆ: ಸಿಎಂ ಬಸವರಾಜ ಬೊಮ್ಮಾಯಿ

(Kodihalli Chandrashekar warns state Government about give clear picture about Mekedatu Project)

Follow Us
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ