AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramanagara News: ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇಯಲ್ಲಿ ಕೆಎಸ್​ಆರ್​ಟಿಸಿ ಬಸ್, ಗೂಡ್ಸ್ ವಾಹನ ಡಿಕ್ಕಿ; ಚಾಲಕ ಸಾವು

ಬಸ್ ಮೈಸೂರಿನಿಂದ ಬೆಂಗಳೂರಿಗೆ ‌ಬರುವ ವೇಳೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ರಾಮನಗರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ,‌ ಪರಿಶೀಲನೆ ನಡೆಸಿದ್ದಾರೆ.

Ramanagara News: ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇಯಲ್ಲಿ ಕೆಎಸ್​ಆರ್​ಟಿಸಿ ಬಸ್, ಗೂಡ್ಸ್ ವಾಹನ ಡಿಕ್ಕಿ; ಚಾಲಕ ಸಾವು
ಅಪಘಾತದ ತೀವ್ರತೆಗೆ ಬಸ್ ಡಿವೈಡರ್ ಹಾರಿ ಸರ್ವಿಸ್ ರಸ್ತೆಗೆ ತಲುಪಿದ್ದು, ಅಲ್ಲಿಂದಲೂ ಹೊರಕ್ಕೆ ಚಲಿಸಿದೆ.
ಪ್ರಶಾಂತ್​ ಬಿ.
| Edited By: |

Updated on: Jun 28, 2023 | 5:54 PM

Share

ರಾಮನಗರ: ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇಯಲ್ಲಿ (Bengaluru Mysuru expressway) ಮತ್ತೊಂದು ಭೀಕರ ಅಪಘಾತ (Accident) ಸಂಭವಿಸಿದ್ದು, ಕೆಎಸ್​ಆರ್​ಸಿಟಿ ಬಸ್ ಚಾಲಕ ಮೃತಪಟ್ಟಿದ್ದಾರೆ. ರಾಮನಗರ ತಾಲೂಕಿನ ಜಯಪುರ ಗೇಟ್ ಬಳಿ ಬುಧವಾರ ಕೆಎಸ್​ಆರ್​ಸಿಟಿ ಬಸ್ ಹಾಗೂ ಗೂಡ್ಸ್ ವಾಹನದ ಮಧ್ಯೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬಸ್ ಡಿವೈಡರ್ ಹಾರಿ ಸರ್ವಿಸ್ ರಸ್ತೆಗೆ ತಲುಪಿದ್ದು, ಅಲ್ಲಿಂದಲೂ ಹೊರಕ್ಕೆ ಚಲಿಸಿದೆ. ಅದೃಷ್ಟವಶಾತ್, ಬಸ್​​​ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬಸ್ ಮೈಸೂರಿನಿಂದ ಬೆಂಗಳೂರಿಗೆ ‌ಬರುವ ವೇಳೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ರಾಮನಗರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ,‌ ಪರಿಶೀಲನೆ ನಡೆಸಿದ್ದಾರೆ.

ಮೈಸೂರು ಬೆಂಗಳೂರು ಎಕ್ಸ್​ಪ್ರೆಸ್​​​ ವೇಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಪರಿಶೀಲನೆ ನಡೆಸಿ ವರದಿ ಸಲ್ಲಿಸಲು ತಜ್ಞರ ಸಮಿತಿ ರಚಿಸುವುದಾಗಿ ರಾಜ್ಯ ಸರ್ಕಾರ ಎರಡು ದಿನಗಳ ಹಿಂದೆ ಹೇಳಿತ್ತು. ಎಕ್ಸ್​​ಪ್ರೆಸ್​​ ವೇ ಕಾಮಗಾರಿ ಅವೈಜ್ಞಾನಿಕವಾಗಿ ನಡೆದಿದೆ. ಇದನ್ನು ಪರಿಶೀಲಿಸಲು ತಂಡ ರಚನೆ ಮಾಡುತ್ತೇವೆ. ಅದು ನೀಡುವ ವರದಿಯ ಆಧಾರದಲ್ಲಿ ಸಮಸ್ಯೆಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಸೋಮವಾರ ಹೇಳಿದ್ದರು.

ಇದನ್ನೂ ಓದಿ: Bengaluru-Mysore Expressway: ಅಪಘಾತಕ್ಕೆ ಕಾರಣಗಳ ಕುರಿತು ಎನ್​​ಹೆಚ್​ಎಐಗೆ ವರದಿ ಸಲ್ಲಿಸಿದ 2 ಜಿಲ್ಲಾಡಳಿತ

ಕಳೆದ ಎರಡ್ಮೂರು ತಿಂಗಳಲ್ಲಿ ಈ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತಗಳಲ್ಲಿ ನೂರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ