AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramanagara News: ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇಯಲ್ಲಿ ಕೆಎಸ್​ಆರ್​ಟಿಸಿ ಬಸ್, ಗೂಡ್ಸ್ ವಾಹನ ಡಿಕ್ಕಿ; ಚಾಲಕ ಸಾವು

ಬಸ್ ಮೈಸೂರಿನಿಂದ ಬೆಂಗಳೂರಿಗೆ ‌ಬರುವ ವೇಳೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ರಾಮನಗರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ,‌ ಪರಿಶೀಲನೆ ನಡೆಸಿದ್ದಾರೆ.

Ramanagara News: ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇಯಲ್ಲಿ ಕೆಎಸ್​ಆರ್​ಟಿಸಿ ಬಸ್, ಗೂಡ್ಸ್ ವಾಹನ ಡಿಕ್ಕಿ; ಚಾಲಕ ಸಾವು
ಅಪಘಾತದ ತೀವ್ರತೆಗೆ ಬಸ್ ಡಿವೈಡರ್ ಹಾರಿ ಸರ್ವಿಸ್ ರಸ್ತೆಗೆ ತಲುಪಿದ್ದು, ಅಲ್ಲಿಂದಲೂ ಹೊರಕ್ಕೆ ಚಲಿಸಿದೆ.
ಪ್ರಶಾಂತ್​ ಬಿ.
| Edited By: |

Updated on: Jun 28, 2023 | 5:54 PM

Share

ರಾಮನಗರ: ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇಯಲ್ಲಿ (Bengaluru Mysuru expressway) ಮತ್ತೊಂದು ಭೀಕರ ಅಪಘಾತ (Accident) ಸಂಭವಿಸಿದ್ದು, ಕೆಎಸ್​ಆರ್​ಸಿಟಿ ಬಸ್ ಚಾಲಕ ಮೃತಪಟ್ಟಿದ್ದಾರೆ. ರಾಮನಗರ ತಾಲೂಕಿನ ಜಯಪುರ ಗೇಟ್ ಬಳಿ ಬುಧವಾರ ಕೆಎಸ್​ಆರ್​ಸಿಟಿ ಬಸ್ ಹಾಗೂ ಗೂಡ್ಸ್ ವಾಹನದ ಮಧ್ಯೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬಸ್ ಡಿವೈಡರ್ ಹಾರಿ ಸರ್ವಿಸ್ ರಸ್ತೆಗೆ ತಲುಪಿದ್ದು, ಅಲ್ಲಿಂದಲೂ ಹೊರಕ್ಕೆ ಚಲಿಸಿದೆ. ಅದೃಷ್ಟವಶಾತ್, ಬಸ್​​​ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬಸ್ ಮೈಸೂರಿನಿಂದ ಬೆಂಗಳೂರಿಗೆ ‌ಬರುವ ವೇಳೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ರಾಮನಗರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ,‌ ಪರಿಶೀಲನೆ ನಡೆಸಿದ್ದಾರೆ.

ಮೈಸೂರು ಬೆಂಗಳೂರು ಎಕ್ಸ್​ಪ್ರೆಸ್​​​ ವೇಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಪರಿಶೀಲನೆ ನಡೆಸಿ ವರದಿ ಸಲ್ಲಿಸಲು ತಜ್ಞರ ಸಮಿತಿ ರಚಿಸುವುದಾಗಿ ರಾಜ್ಯ ಸರ್ಕಾರ ಎರಡು ದಿನಗಳ ಹಿಂದೆ ಹೇಳಿತ್ತು. ಎಕ್ಸ್​​ಪ್ರೆಸ್​​ ವೇ ಕಾಮಗಾರಿ ಅವೈಜ್ಞಾನಿಕವಾಗಿ ನಡೆದಿದೆ. ಇದನ್ನು ಪರಿಶೀಲಿಸಲು ತಂಡ ರಚನೆ ಮಾಡುತ್ತೇವೆ. ಅದು ನೀಡುವ ವರದಿಯ ಆಧಾರದಲ್ಲಿ ಸಮಸ್ಯೆಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಸೋಮವಾರ ಹೇಳಿದ್ದರು.

ಇದನ್ನೂ ಓದಿ: Bengaluru-Mysore Expressway: ಅಪಘಾತಕ್ಕೆ ಕಾರಣಗಳ ಕುರಿತು ಎನ್​​ಹೆಚ್​ಎಐಗೆ ವರದಿ ಸಲ್ಲಿಸಿದ 2 ಜಿಲ್ಲಾಡಳಿತ

ಕಳೆದ ಎರಡ್ಮೂರು ತಿಂಗಳಲ್ಲಿ ಈ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತಗಳಲ್ಲಿ ನೂರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More